![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 6, 2021, 7:10 AM IST
ಬೆಂಗಳೂರು: ರಮೇಶ್ ಜಾರಕಿಹೊಳಿ ತ್ಯಜಿಸಿರುವ ಜಲಸಂಪನ್ಮೂಲ ಖಾತೆಯನ್ನು ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೀಡಿ ಎಂಬುದಾಗಿ ಬಿಜೆಪಿಯ 20ಕ್ಕೂ ಹೆಚ್ಚು ಶಾಸಕರು ಸಿಎಂ ಬಿಎಸ್ವೈ ಮೇಲೆ ಒತ್ತಡ ಹೇರಲು ನಿರ್ಧರಿಸಿದ್ದಾರೆ. ಈ ಸಂಬಂಧ ಶಾಸಕರು ಸಭೆ ಸೇರಿ ಚರ್ಚಿಸಿದ್ದಾರೆ. ಆದರೆ ಈಗಲೇ ಸಚಿವ ಸ್ಥಾನ ನೀಡಿದರೆ ವಿರೋಧ ಉಂಟಾಗಬಹುದು ಎಂಬುದು ಬಿಜೆಪಿಯ ಆತಂಕ ಎನ್ನಲಾಗಿದೆ.
ರಮೇಶ್ ಪರ ಶಾಸಕರು ಬಿಜೆಪಿ ವರಿಷ್ಠರಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ. ಸಿಎಂ ಮೇಲೂ ಒತ್ತಡ ಹೇರಲು ಮುಂದಾಗಿದ್ದಾರೆ. ಬಜೆಟ್ ಮಂಡನೆಯ ಬಳಿಕ ಸಿಎಂ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಸೋಮವಾರ ಸಂಜೆ ಮತ್ತೂಂದು ಸಭೆ ಸೇರಲು ಶಾಸಕರು ನಿರ್ಧರಿಸಿದ್ದಾರೆ.
ರಾಜೀನಾಮೆ ಅಸ್ತ್ರ?
ಬಾಲಚಂದ್ರ ಅವರಿಗೆ ಸ್ಥಾನ ನೀಡದಿದ್ದರೆ ಕೆಲವು ಶಾಸಕರು ರಾಜೀನಾಮೆ ನೀಡುವ ಬೆದರಿಕೆಯನ್ನೂ ಹಾಕಿದ್ದಾರೆ. ಪಕ್ಷದ ವರಿಷ್ಠರು ಅನುಮತಿ ನೀಡಿದರೆ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಸಿಎಂ ಸಹಮತ ಹೊಂದಿದ್ದಾರೆ ಎನ್ನಲಾಗಿದೆ.
5 ಕೋ.ರೂ. ಡೀಲ್: ಎಚ್ಡಿಕೆ
ಮೈಸೂರು : ದೊಡ್ಡವರು ಎನ್ನಿಸಿಕೊಂಡವರಿಂದಲೇ ಅಶ್ಲೀಲ ಸಿ.ಡಿ. ಬಿಡುಗಡೆ ಸಂಚು ನಡೆದಿದ್ದು , 5 ಕೋಟಿ ರೂ. ವ್ಯವಹಾರ ನಡೆದಿದೆ ಎಂದು ಮಾಜಿ ಸಿಎಂ ಎಚ್ಡಿಕೆ ಆರೋಪಿಸಿದ್ದಾರೆ. ಇಂಥ ಬ್ಲ್ಯಾಕ್ ಮೇಲ್ ನಿಲ್ಲಬೇಕು. ಇವು ಹೇಸಿಗೆ ಹುಟ್ಟಿಸುವ ಸ್ಥಿತಿ ನಿರ್ಮಾಣ ಮಾಡಿವೆ ಎಂದು ಕಿಡಿ ಕಾರಿದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.