![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 2, 2021, 11:06 AM IST
ನವದೆಹಲಿ: ರಾಷ್ಟ್ರರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಭಾನುವಾರ(ಮೇ 02) ಬೆಳಗ್ಗೆ ಆರಂಭಗೊಂಡಿದ್ದು, ಬಿರುಸಿನಿಂದ ಮುಂದುವರಿದಿದೆ. ಸದ್ಯದ ಟ್ರೆಂಡ್ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ, ತಮಿಳುನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಎನ್ ಡಿಎ ಮೈತ್ರಿಕೂಟ ಅಧಿಕಾರದ ಗದ್ದುಗೆ ಏರುವಲ್ಲಿ ದಾಪುಗಾಲಿಟ್ಟಿದೆ.
ಇದನ್ನೂ ಓದಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 3.92ಲಕ್ಷ ಕೋವಿಡ್ ಪ್ರಕರಣ ಪತ್ತೆ, 2.15 ಲಕ್ಷ ಸಾವು
ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 168, ಭಾರತೀಯ ಜನತಾ ಪಕ್ಷ 101 ಹಾಗೂ ಕಾಂಗ್ರೆಸ್ ಕೇವಲ 04 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕುತೂಹಲದ ಸಂಗತಿ ಅಂದರೆ ನಂದಿಗ್ರಾಮದಲ್ಲಿ ಜಿದ್ದಿಗೆ ಬಿದ್ದು ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿ ಹಿನ್ನಡೆ ಅನುಭವಿಸಿದ್ದು, ಸೋಲಿನ ಭೀತಿಯಲ್ಲಿರುವುದು ಆರಂಭಿಕ ಮತಎಣಿಕೆಯಲ್ಲಿ ಕಂಡುಬಂದಿದೆ. 294 ಸ್ಥಾನ ಹೊಂದಿರುವ ಪಶ್ಚಿಮಬಂಗಾಳ
ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು 148 ಸ್ಥಾನಗಳ ಅಗತ್ಯವಿದೆ.
ತಮಿಳುನಾಡಿನಲ್ಲಿ ದಿ.ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸತತ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದು, 2021ರ ವಿಧಾನಸಭಾ ಚುನಾವಣೆಯಲ್ಲಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ 139 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಒಂದು ದಶಕದ ಬಳಿಕ ಡಿಎಂಕೆ (ಸೂರ್ಯೋದಯ ಪಕ್ಷದ ಚಿಹ್ನೆ) ಮತ್ತೆ ಅಧಿಕಾರದ ಗದ್ದುಗೆ ಏರುವತ್ತ ದಾಪುಗಾಲಿಟ್ಟಂತಾಗಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಅಧಿಕಾರಕ್ಕೇರಲು 118 ಸ್ಥಾನಗಳ ಅಗತ್ಯವಿದೆ.
ಕೇರಳದಲ್ಲಿ ಎಲ್ ಡಿಎಫ್ 88 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ ಎರಡನೇ ಬಾರಿಗೆ ಅಧಿಕಾರ ಹಿಡಿಯುವತ್ತ ಮುನ್ನುಗ್ಗಿದೆ. ಭಾರತೀಯ ಜನತಾ ಪಕ್ಷ ಕೇವಲ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ 82 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 126 ಸದಸ್ಯ ಬಲದ ಅಸ್ಸಾಂನಲ್ಲಿ ಆಡಳಿತ ನಡೆಸಲು 64 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಾಗಿದೆ.
ಪುದುಚೇರಿಯಲ್ಲಿ ಎನ್ ಡಿಎ ಮೈತ್ರಿಕೂಟ(ಎನ್ ಆರ್ ಸಿ) 12 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 4 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 30 ಸದಸ್ಯಬಲದ ಪುದುಚೇರಿಯಲ್ಲಿ ಅಧಿಕಾರದ ಗದ್ದುಗೆ ಏರಲು 16 ಸ್ಥಾನಗಳಲ್ಲಿ ಜಯ ಸಾಧಿಸಬೇಕಾಗಿದೆ. ಪಂಚರಾಜ್ಯಗಳ ಸ್ಪಷ್ಟ ಫಲಿತಾಂಶ ಮಧ್ಯಾಹ್ನ 2ಗಂಟೆ ಹೊತ್ತಿಗೆ ಸ್ಪಷ್ಟವಾಗಿ ಹೊರಬೀಳಬಹುದು ಎಂದು ನಿರೀಕ್ಷಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.