Train ಬೆಂಗಳೂರು – ಮೈಸೂರು -ಮುರ್ಡೇಶ್ವರ ರೈಲು ವೇಳಾಪಟ್ಟಿ
Team Udayavani, Sep 16, 2023, 11:23 PM IST
ಕುಂದಾಪುರ: ಮೈಸೂರು ಮೂಲಕ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಎಕ್ಸ್ಪ್ರೆಸ್ ರೈಲು (ನಂ. 16585/586) ರವಿವಾರ (ಸೆ.17)ದಿಂದ ಪ್ರತೀದಿನ ಮುರ್ಡೇಶ್ವರದವರೆಗೆ ಸಂಚರಿಸಲಿದ್ದು, ವೇಳಾಪಟ್ಟಿ ಇಂತಿದೆ. ಪ್ರಸ್ತುತ ವಾರದ 6 ದಿನ ಕಾರ್ಯಾಚರಿಸುತ್ತಿದ್ದ ರೈಲು ಇನ್ನು ಪ್ರತೀದಿನ ಸಂಚರಿಸಲಿದೆ ಎಂದು ಸಿಪಿಆರ್ಒ ತಿಳಿಸಿದೆ.
ನಂ. 16585 ರೈಲು ಬೆಂಗಳೂರಿನ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿಬಿ) ನಿಂದ ರಾತ್ರಿ 8.15ಕ್ಕೆ ಹೊರಟು, ರಾತ್ರಿ 11.30ಕ್ಕೆ ಮೈಸೂರು, ಬೆಳಗ್ಗೆ 8.55ಕ್ಕೆ ಮಂಗಳೂರು ಸೆಂಟ್ರಲ್ಗೆ, 9.20ಕ್ಕೆ ಸೆಂಟ್ರಲ್ನಿಂದ ಹೊರಟು ಮಧ್ಯಾಹ್ನ 1.35ಕ್ಕೆ ಮುರ್ಡೇಶ್ವರ ತಲುಪುತ್ತದೆ.
ನಂ. 16586 ರೈಲು ಮುರ್ಡೇಶ್ವರದಿಂದ ಮಧ್ಯಾಹ್ನ 2.10ಕ್ಕೆ ಹೊರಟು, ಮಂಗಳೂರು ಸೆಂಟ್ರಲ್ಗೆ ಸಂಜೆ 6.35ಕ್ಕೆ, ಮೈಸೂರಿಗೆ ಮುಂಜಾನೆ 3.15ಕ್ಕೆ, ಬೆಂಗಳೂರಿಗೆ ಬೆಳಗ್ಗೆ 7.15ಕ್ಕೆ ತಲುಪುತ್ತದೆ.
ಸುರತ್ಕಲ್, ಮೂಲ್ಕಿ, ಉಡುಪಿ, ಬಾರಕೂರು, ಕುಂದಾಪುರ, ಬೈಂದೂರು, ಭಟ್ಕಳ ನಿಲ್ದಾಣದಲ್ಲಿ ನಿಲುಗಡೆಯಿರುತ್ತದೆ. ಈ ರೈಲು 22 ಕೋಚ್ ಹೊಂದಿರುತ್ತದೆ.
ಸ್ವಾಗತಕ್ಕೆ ಸಜ್ಜು
ಸೆ. 17ರಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಸಂದರ್ಭದಲ್ಲಿ ಕರಾವಳಿ ಕರ್ನಾಟಕ ಮತ್ತು ಮೈಸೂರು ಪ್ರದೇಶದ ಜನರಿಗೆ ಈ ವಿಸ್ತರಣೆಯು ಸೂಕ್ತವಾದ ಉಡುಗೊರೆಯಾಗಿದೆ ಎಂದು ಸಂಸದ ಪ್ರತಾಪಸಿಂಹ ಹೇಳಿದ್ದಾರೆ. ರವಿವಾರ ಈ ರೈಲನ್ನು ಸ್ವಾಗತಿಸಲು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ ಸಮಿತಿ ಸಜ್ಜಾಗಿದೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹಾಗೂ ಇತರ ಮುಖಂಡರು ಸ್ವಾಗತದ ವೇಳೆ ಇರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.