ಮುನ್ನೆಲೆಗೆ ಬಂದ ಬಜರಂಗ ದಳ ನಿಷೇಧ ಸದ್ದು:ಕಾಂಗ್ರೆಸ್‌ ವಿರುದ್ಧ BJP, ಹಿಂದೂಪರ ನಾಯಕರು ಕೆಂಡ


Team Udayavani, May 5, 2023, 7:00 AM IST

KESARI FLAG

ಬಜರಂಗ ದಳವನ್ನು ನಿಷೇಧಿಸುವ ಚುನಾವಣ ಪ್ರಣಾಳಿಕೆಯ ಪ್ರಸ್ತಾವನೆಗೆ ಭಾರೀ ಪ್ರತಿರೋಧ ವ್ಯಕ್ತವಾಗುತ್ತಿದೆ. ಬಿಜೆಪಿ, ವಿಎಚ್‌ಪಿ, ಬಜರಂಗ ದಳದ ರಾಜ್ಯ, ರಾಷ್ಟ್ರ ನಾಯಕರು ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಜರಂಗ ದಳ ನಿಷೇಧಿ ಸಲು ಯಾರಪ್ಪನಿಗೆ ತಾಕತ್ತಿದೆ ಎಂದು ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ ಸವಾಲೆಸೆದ ಬೆನ್ನಿಗೇ ಬಜರಂಗ ದಳ ನಿಷೇಧ ಪ್ರಸ್ತಾವ ವಿರೋಧಿಸಿ ಗುರುವಾರ ಪ್ರತಿಭಟನೆಗಳೂ ನಡೆದಿವೆ.

ನಿಷೇಧಿಸಲು ಯಾರಪ್ಪನಿಗೆ ತಾಕತ್ತಿದೆ?: ಫ‌ಡ್ನವೀಸ್‌
ಬೆಳಗಾವಿ: ಕರ್ನಾಟಕದಲ್ಲಿ ಬಜರಂಗ ದಳ ನಿಷೇಧಿಸಲು ಯಾರಪ್ಪನಿಗೆ ತಾಕತ್ತಿದೆ. ಹನುಮ ಲಂಕೆಯನ್ನು ಸುಟ್ಟಂತೆ ಜನರು ಅಧಿಕಾರಕ್ಕೆ ಬರಲು ಹವಣಿಸುತ್ತಿರುವ ಕಾಂಗ್ರೆಸ್‌ ಕನಸಿಗೆ ಬೆಂಕಿ ಹಚ್ಚಬೇಕು ಎಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ಹೇಳಿದರು. ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಜರಂಗ ದಳ ಸಂಘಟನೆಯನ್ನು ನಿಷೇಧಿಸಲು ನಿಮ್ಮಪ್ಪನಿಗೆ ತಾಕತ್ತು ಇದೆಯಾ? ಬಜರಂಗ ದಳ ಬ್ಯಾನ್‌ ಮಾಡಿ ಹಿಂದುತ್ವದ ಮೇಲೆ ಏಕೆ ದ್ವೇಷ ಸಾಧಿಸುತ್ತಿದ್ದೀರಿ? ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಆರೆಸ್ಸೆಸ್‌ ಮೇಲೆ ನಿರ್ಬಂಧ ಹಾಕಲು ಮುಂದಾಗಿ ಅಧಿಕಾರ ಕಳೆದುಕೊಂಡಿದ್ದಾರೆ. ಈಗ ಬಜರಂಗ ದಳ ಮೇಲೆ ನಿರ್ಬಂಧ ಹೇರುವುದೆಂದರೆ ಏನರ್ಥ? ಕಾಂಗ್ರೆಸ್‌ಗೆ ಬಜರಂಗ ಬಲಿಯ ತಾಕತ್ತು ತೋರಿಸಬೇಕು ಎಂದರು.

ಎಸ್‌ಡಿಪಿಐ-ಪಿಎಫ್‌ಐ ಕಪಿಮುಷ್ಟಿಯಲ್ಲಿ ಕಾಂಗ್ರೆಸ್‌
ಹುಬ್ಬಳ್ಳಿ: ಎಸ್‌ಡಿಪಿಐ -ಪಿಎಫ್‌ಐ ಕಪಿಮುಷ್ಟಿಯಲ್ಲಿ ಕಾಂಗ್ರೆಸ್‌ ಪಕ್ಷ ಇದ್ದು, ಅವುಗಳ ಒತ್ತಡಕ್ಕೆ ಮಣಿದು ಮತ ತುಷ್ಟೀ ಕರಣಕ್ಕೆ ಬೇಕಾದ ರೀತಿಯಲ್ಲಿ ವರ್ತಿಸು ತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನವರ ಕಾರಣದಿಂದಲೇ ಎಸ್‌ಡಿಪಿಐ-ಪಿಎಫ್‌ಐ ಬಲವರ್ಧನೆಗೊಂಡಿವೆ. ಎಸ್‌ಡಿಪಿಐ ಬಿಜೆಪಿಯ ಬಿ ಟೀಂ ಆಗಿದ್ದರೆ ನಾವೇಕೆ ಪಿಎಫ್‌ಐ ನಿಷೇಧಿಸುತ್ತಿದ್ದೆವು. ಎಸ್‌ಡಿಪಿಐ, ಪಿಎಫ್‌ಐ ಬೇರೆಯಲ್ಲ, ಎರಡೂ ಒಂದೇ. ಶ್ರೀರಾಮ-ಆಂಜನೇಯ ನಡುವೆ ಇರುವ ಸಂಬಂಧವೇ ಬಜರಂಗ ದಳ ಹಾಗೂ ಆಂಜನೇಯನಿಗೂ ಇರುವ ಸಂಬಂಧವಾಗಿದೆ. ಕಾಂಗ್ರೆಸ್‌ನವರು ಏನೇನೋ ಹೇಳಿ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೀಳು ಹೇಳಿಕೆಗಳೇ ಕಾಂಗ್ರೆಸ್‌ಗೆ ಮುಳುವು: ವಿಜಯೇಂದ್ರ
ಮುಧೋಳ: ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಿರುವ ಕಾಂಗ್ರೆಸ್‌ ಬಜರಂಗ ದಳ ಸಂಘಟನೆ ನಿಷೇಧಿಸುವ ಮಾತುಗಳನ್ನಾಡುವ ಮೂಲಕ ರಾಜ್ಯದಲ್ಲೂ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶ ಭಕ್ತ ಹಾಗೂ ದೇಶದ ಬಗ್ಗೆ ಚಿಂತನೆ ಮಾಡುವ ಒಂದು ಸಂಘಟನೆಯನ್ನು ಪಿಎಫ್‌ಐನೊಂದಿಗೆ ತುಲನೆ ಮಾಡುತ್ತಿರುವ ಕಾಂಗ್ರೆಸ್‌ ತನ್ನ ಮೂರ್ಖತನದ ಪರಮಾವ ಧಿ ತೋರಿಸುತ್ತಿದೆ. ವಿನಾಶಕಾಲೆ ವಿಪರೀತ ಬುದ್ಧಿ ಎನ್ನುವ ರೀತಿಯಲ್ಲಿ ಕಾಂಗ್ರೆಸ್‌ಗೆ ತನ್ನ ಹೇಳಿಕೆಗಳೇ ಮುಳುವಾಗಲಿವೆ. ಕಾಂಗ್ರೆಸ್‌ ಅ ಧಿಕಾರಕ್ಕೆ ಬಂದರೆ ತಾನೆ ಬಜರಂಗ ದಳ ನಿಷೆೇ ಧಿಸುವ ವಿಚಾರ ಮುನ್ನೆಲೆಗೆ ಬರುವುದು. ರಾಜ್ಯದಲ್ಲಿ ಕಾಂಗ್ರೆಸ್‌ ಅ ಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ ಎಂದರು.

ಕೇಂದ್ರ ಸರಕಾರ ಈಗಾಗಲೇ ಪಿಎಫ್‌ಐ ನಿಷೇಧಿಸಿದ್ದು, ಅದನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಕಾಂಗ್ರೆಸ್‌ನವರು ಬಜರಂಗ ದಳ ಸಂಘಟನೆ ನಿಷೇಧ ಮಾಡುವುದಾಗಿ ಚುನಾವಣೆ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದು ಖಂಡನೀಯ. ಪಿಎಫ್‌ಐ-ಬಜರಂಗ ದಳ ಹೋಲಿಕೆಯೇ ತಪ್ಪು. ಈ ಘೋಷಣೆಯಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ವನಾಶವಾಗಲಿದೆ.   - ಕೋಟ ಶ್ರೀನಿವಾಸ ಪೂಜಾರಿ

ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಬ್ಯಾನ್‌ ಮಾಡುತ್ತೇನೆಂದು ಹೇಳುವ ಮೂಲಕ ಆಂಜನೇಯನ ಬಾಲಕ್ಕೆ ಕಾಂಗ್ರೆಸ್‌ನವರು ಬೆಂಕಿ ಇಟ್ಟಿದ್ದಾರೆ. ಲಂಕೆ ಸುಟ್ಟಂತೆ ಆಂಜನೇಯ ಕಾಂಗ್ರೆಸ್‌ ಅನ್ನು ಸುಡುತ್ತಾನೆ. ಡಿ.ಕೆ. ಶಿವಕುಮಾರ್‌ ಅವರು ಮುನೇಶ್ವರನ ಬೆಟ್ಟದಲ್ಲಿ ಶಿಲುಬೆ ಮಾಡಲು ಹೊರಟಿದ್ದರು. ಈಗ ಆಂಜನೇಯನ ವಿಚಾರಕ್ಕೆ ಬಂದಿದ್ದಾರೆ.       – ಆರ್‌. ಅಶೋಕ್‌

ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಬಜರಂಗ ದಳವನ್ನು ರದ್ದುಪಡಿಸುವುದಾಗಿ ಹೇಳಿಕೆ ನೀಡಿದ್ದಾರೆ. ರದ್ದಾಗಿರುವ ಪಿಎಫ್ಐ ಸಂಘಟನೆಯೊಂದಿಗೆ ಬಜರಂಗ ದಳ ಸಂಘಟನೆಯನ್ನು ಓಲೈಕೆ ಮಾಡುತ್ತಿರುವುದು ನೋಡಿದರೆ ಇವರಿಗೆ ನಾಚಿಕೆಯಾಗಬೇಕು.   – ಡಾ| ಸಿ.ಎನ್‌. ಅಶ್ವತ್ಥನಾರಾಯಣ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.