Bantwal:ಅಡ್ಡೂರು ಸೇತುವೆಯಲ್ಲಿ ಬಸ್‌ ಸಂಚಾರಕ್ಕೆ ಆಗ್ರಹ; ವರದಿ ಬಳಿಕ ನಿರ್ಧಾರ: ಸ್ಪಷ್ಟನೆ


Team Udayavani, Aug 20, 2024, 11:56 PM IST

Bantwal:ಅಡ್ಡೂರು ಸೇತುವೆಯಲ್ಲಿ ಬಸ್‌ ಸಂಚಾರಕ್ಕೆ ಆಗ್ರಹ; ವರದಿ ಬಳಿಕ ನಿರ್ಧಾರ: ಸ್ಪಷ್ಟನೆ

ಬಂಟ್ವಾಳ: ಘನ ವಾಹನ ಸಂಚಾರ ನಿಷೇಧಿಸಲ್ಪಟ್ಟಿರುವ ಪೊಳಲಿ ಸಮೀಪದ ಅಡ್ಡೂರು ಸೇತುವೆಯಲ್ಲಿ ಬಸ್‌ ಸಂಚಾರಕ್ಕೆ ಅವಕಾಶ ನೀಡಬೇಕೆಂಬ ಒತ್ತಾಯಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಪರಿಶೀಲನ ಯಂತ್ರ (ಬ್ರಿಡ್ಜ್ ಇನ್‌ಸ್ಪೆಕ್ಷನ್‌ ಮೆಷಿನ್‌)ಆಗಮಿಸಿ ವರದಿ ನೀಡುವವರೆಗೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ಈ ನಿರ್ಧಾರಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮಂಗಳವಾರ ಸಂಜೆ ಅಡೂxರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಸ್ಪಷ್ಟಪಡಿಸಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್‌ ಆಯುಕ್ತ ಅನುಪಮ ಅಗರ್‌ವಾಲ್‌, ಸಹಾಯಕ ಕಮೀಷನರ್‌ ಹರ್ಷವರ್ಧನ ಪಿ.ಜೆ. ಅವರು ಸ್ಥಳೀಯ ಗ್ರಾ. ಪಂ. ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಬಸ್‌ಗಳು ಲಘು ವಾಹನವಾಗಿರುವುದರಿಂದ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ತಿಳಿಸಿದರು.

ಈ ವೇಳೆ ಅಧಿಕಾರಿಗಳು ಮಾತನಾಡಿ, ಪ್ರಸ್ತುತ 2.75 ಮೀ. ಎತ್ತರದವರೆಗೆ ವಾಹನ ಸಂಚಾರಕ್ಕೆ ಅವಕಾಶವಿದ್ದು, ಬಸ್ಸಿಗೆ ಬೇಕಾಗಿ 4.50 ಮೀ.ಗೆ ಏರಿಸಬೇಕಾಗುತ್ತದೆ. ಆಗ ಲಾರಿ ಸೇರಿದಂತೆ ಇತರ ಘನ ವಾಹನಗಳು ಕೂಡ ಸಂಚರಿಸುತ್ತದೆ. ಹಗಲು ಹೊತ್ತಿನಲ್ಲಿ ಕಾವಲು ಇದ್ದರೂ, ರಾತ್ರಿ ಕಾವಲು ಸಾಧ್ಯವಿಲ್ಲ ಎಂದರು.

ಈ ಭಾಗದಲ್ಲಿ ಅಕ್ರಮ ಮರಳುಗಾರಿಕೆ ನಡೆಯುವುದು ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಸೇತುವೆ ಪರಿಶೀಲನ ಯಂತ್ರ ಬಂದು ವರದಿ ನೀಡಿದ ಬಳಿಕ ಜಿಲ್ಲಾಡಳಿತ ನಿರ್ಧಾರ ಕೈಗೊಳ್ಳುತ್ತದೆ ಎಂದರು. ದ.ಕ. ಡಿಸಿ ಮುಲ್ಲೈ ಮುಗಿಲನ್‌ ಆಗಮಿಸುತ್ತಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು ಸೇರಿದ್ದರು.

ಆ. 26: ಪರಿಶೀಲನ ಯಂತ್ರ ಆಗಮನ
ಸೇತುವೆ ಸಾಮರ್ಥ್ಯ ಪರಿಶೀಲನ ಯಂತ್ರವು ಆ. 26ರಂದು ಬೆಂಗಳೂರಿನಿಂದ ದ.ಕ.ಜಿಲ್ಲೆಗೆ ಆಗಮಿಸಿ ಇಲ್ಲಿನ ಸೇತುವೆಗಳ ಪರಿಶೀಲನ ಕಾರ್ಯ ಮಾಡಲಿದೆ. ಸುಮಾರು ಒಂದು ವಾರಗಳ ಕಾಲ ಜಿಲ್ಲೆಯಲ್ಲಿದ್ದು, ಅಪಾಯಕಾರಿಯಾಗಿರುವ ಎಲ್ಲ ಸೇತುವೆಗಳನ್ನೂ ಪರಿಶೀಲಿಸಲಿದೆ. ಸಾಮರ್ಥ್ಯ ಕಳೆದುಕೊಂಡಿರುವ ಸೇತುವೆಗಳನ್ನು ದುರಸ್ತಿ ಮಾಡಬಹುದೇ ಅಥವಾ ಹೊಸ ನಿರ್ಮಾಣ ಬೇಕೇ ಎಂಬುದರ ಕುರಿತು ವರದಿ ನೀಡಲಿದೆ. ಅದರ ಬಳಿಕ ಪ್ರಸ್ತಾವನೆ ಕಳುಹಿಸಿ ಅನುಮೋದನೆ ಪಡೆದು ಕಾಮಗಾರಿ ನಡೆಯಲಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.