ಪೂರ್ಣಾವಧಿ ಶಾಲಾರಂಭ, ಸುರಕ್ಷತ ಕ್ರಮಗಳ ಪಾಲನೆಯಾಗಲಿ


Team Udayavani, Feb 17, 2021, 7:10 AM IST

ಪೂರ್ಣಾವಧಿ ಶಾಲಾರಂಭ, ಸುರಕ್ಷತ ಕ್ರಮಗಳ ಪಾಲನೆಯಾಗಲಿ

ರಾಜ್ಯದಲ್ಲಿ ಇದೇ ತಿಂಗಳ 22ನೇ ತಾರೀಖೀನಿಂದ 6ನೇ ತರಗತಿ ಯಿಂದಲೇ ಪೂರ್ಣಪ್ರಮಾಣದಲ್ಲಿ ಶಾಲೆಗಳನ್ನು ಆರಂಭಿಸುವುದಾಗಿ ಸರಕಾರ ಘೋಷಿಸಿದೆ. ಜತೆಗೆ ಬೆಂಗಳೂರು ನಗರ ಮತ್ತು ಕೇರಳದ ಗಡಿ ಭಾಗದಲ್ಲಿ 8ನೇ ತರಗತಿಯ ಮೇಲಿನ ತರಗತಿಗಳನ್ನು ಆರಂಭಿಸುವು ದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಕೇರಳವೀಗ ಮಹಾರಾಷ್ಟ್ರದ ಅನಂತರ ಅತೀ ಹೆಚ್ಚು ಕೋವಿಡ್‌ ಸಕ್ರೀಯ ಪ್ರಕರಣಗಳಿರುವ ರಾಜ್ಯವಾಗಿರುವುದರಿಂದ ಸಹಜವಾಗಿಯೇ ಆ ರಾಜ್ಯದಿಂದ ಬರುವ ಪ್ರತಿಯೊಬ್ಬ ವಿದ್ಯಾರ್ಥಿ, ಶಿಕ್ಷಕರರು ಕೋವಿಡ್‌ ಪರೀಕ್ಷೆಗೆ ಒಳಪಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಕೋವಿಡ್‌ ಸಾಂಕ್ರಾಮಿಕ ಆರಂಭವಾದ ಅನಂತರದಿಂದ ಅತೀ ಹೆಚ್ಚು ಬಾಧೆಗೊಳಗಾದ ವಲಯಗಳಲ್ಲಿ ಶಿಕ್ಷಣ ಕ್ಷೇತ್ರವೂ ಒಂದು. ಹಠಾತ್ತನೆ ಶಾಲೆಗಳೆಲ್ಲ ಬಂದ್‌ ಆಗಿದ್ದು, ಅನಂತರದ ದಿನಗಳಲ್ಲಿ ಡಿಜಿಟಲ್‌ ಪಾಠವೆಂಬ ಹೊಸ ಶಿಕ್ಷಣ ಪದ್ಧತಿಗೆ ಹೆಚ್ಚು ಒತ್ತು ಸಿಕ್ಕದ್ದನ್ನೆಲ್ಲ ನೋಡಿದ್ದೇವೆ. ಆದರೂ ಆನ್‌ಲೈನ್‌ನಲ್ಲಿ ಶಿಕ್ಷಣ ಪಡೆಯುವಂಥ ಆರ್ಥಿಕ, ಸಾಮಾಜಿಕ ಸ್ಥಿತಿಯಲ್ಲಿ ಇರದ ಅಗಣಿತ ಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರಕಾರ ವಿದ್ಯಾಗಮದಂಥ ವಿನೂತನ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತಂದಿತು. ಅಲ್ಲದೇ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳನ್ನೂ ಯಶಸ್ವಿಯಾಗಿ ನಡೆಸಿತು. ಪರೀಕ್ಷೆಗಳು ಸುರಕ್ಷಿತವಾಗಿ ನಡೆದವಾದರೂ, ಕೋವಿಡ್‌ ಪ್ರಸರಣದ ವೇಗ ರಾಜ್ಯದಲ್ಲಿ ಆ ಸಮಯದಲ್ಲಿ ಬಹಳ ಇದ್ದದ್ದರಿಂದ ವಿದ್ಯಾಗಮದಲ್ಲಿ ಪಾಲ್ಗೊಂಡ ಅನೇಕ ಶಿಕ್ಷಕರು ಈ ಸೋಂಕಿಗೆ ತುತ್ತಾಗಬೇಕಾಯಿತು.

ಈ ಸಂಗತಿ ನಿಸ್ಸಂಶಯವಾಗಿಯೂ ಕೋವಿಡ್‌ ಕುರಿತ ಸುರಕ್ಷತ ಮಾರ್ಗಗಳ ಬಗ್ಗೆ ಮತ್ತಷ್ಟು ಜಾಗೃತಿಯಂತೂ ಮೂಡಿಸಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಕಾರಣಕ್ಕೋ ಏನೋ ಕೆಲವು ಸಮಯದಿಂದ ರೋಗಭೀತಿಯೇ ಜನರಲ್ಲಿ ದೂರ ವಾಗಿರುವುದು ಸ್ಪಷ್ಟವಾಗುತ್ತಿದೆ. ಕೊರೊನಾ ಅಪಾಯ ಇನ್ನೂ ದೂರ ವಾಗಿಲ್ಲ ಎನ್ನುವುದಕ್ಕೆ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ 100ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿರುವುದು ಒಂದು ಉದಾ ಹರಣೆಯಷ್ಟೆ. ಈ ಸೋಂಕಿತರೆಲ್ಲ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು ಎನ್ನುವುದು ಪತ್ತೆ ಯಾಗಿದೆ.

ಸಾಮಾಜಿಕ ಅಂತರ ಪಾಲನೆಯನ್ನು ಮರೆತರೆ ರೋಗ ಎಷ್ಟು ವೇಗವಾಗಿ ಹರಡಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿ.
ಈಗ ಪೂರ್ಣಾವಧಿ ಶಾಲೆಗಳು ಆರಂಭವಾಗುತ್ತಿರುವುದರಿಂದ, ಹಿಂದೆಂದಿಗಿಂತಲೂ ಹೆಚ್ಚಿನ ಜಾಗೃತಿ ವಹಿಸಬೇಕಾದ ಅಗತ್ಯ ಸರಕಾರ, ಶಾಲಾಡಳಿತಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಇದೆ. ಶಾಲಾ ಬಸ್‌ಗಳನ್ನು ನಿರಂತರವಾಗಿ ಸ್ವತ್ಛಗೊಳಿಸುವುದು, ತರಗತಿಯಲ್ಲಿ ವಿದ್ಯಾರ್ಥಿ ಗಳ ನಡುವೆ ಸಾಮಾಜಿಕ ಅಂತರ ಪಾಲನೆಯನ್ನು ಖಾತ್ರಿಗೊಳಿಸುವುದು, ಮಾಸ್ಕ್ ಧರಿಸುವಿಕೆಯ ಕಡ್ಡಾಯ ಪಾಲನೆಯಾಗುವಂತೆ ನೋಡಿ ಕೊಳ್ಳುವುದನ್ನು ಶಾಲೆಗಳು ಮರೆಯಬಾರದು. ಇನ್ನು ವಿದ್ಯಾರ್ಥಿಗಳೂ ಸಹ ಅಸಡ್ಡೆ ಮೆರೆಯದೇ ನಿಯಮಿತವಾಗಿ ಕೈತೊಳೆಯುವುದು, ಮಾಸ್ಕ್ ಧರಿಸುವುದನ್ನು ಪಾಲಿಸಬೇಕು. ಕೋವಿಡ್‌ ಸಾಂಕ್ರಾಮಿಕದ ಹಾವಳಿ ಪೂರ್ಣವಾಗಿ ನಿಲ್ಲುವವರೆಗೂ ಸುರಕ್ಷ ಕ್ರಮಗಳ ಪಾಲನೆಗೆ ಎಲ್ಲರೂ ಆದ್ಯತೆ ನೀಡುವಂತಾಗಬೇಕು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.