![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 24, 2022, 6:15 PM IST
ನವದೆಹಲಿ: ಹಿಂದೂಗಳ ಹಾಗೂ ಭಗವಾನ್ ರಾಮನ ವಿರುದ್ಧ ನಿಮಗೆ ಯಾಕೆ ಇಷ್ಟು ದ್ವೇಷ. ಪ್ರತಿ ಬಾರಿಯೂ ಹಿಂದೂಗಳ ಭಾವನೆಗೆ ಯಾಕೆ ನೋವನ್ನು ಉಂಟು ಮಾಡುತ್ತಿದ್ದೀರಿ? ಇದು ಕಾಂಗ್ರೆಸ್ ಪಕ್ಷವನ್ನು ತೊರೆದ ಯುವ ಮುಖಂಡ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿರುವ ಪರಿ ಇದಾಗಿದೆ.
ಇದನ್ನೂ ಓದಿ:ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಪ್ರಿಯಾಂಕಾ ಆಚಾರ್ಯ ಅವರ ಸ್ಟ್ರಿಂಗ್ ಆರ್ಟ್ ಸೇರ್ಪಡೆ
“ರಾಮಮಂದಿರದ ಇಟ್ಟಿಗೆಗಳ ಮೇಲೆ ನಾಯಿ ಮೂತ್ರ ವಿಸರ್ಜಿಸಿದ ಫೋಟೊವನ್ನು ಗುಜರಾತ್ ನ ಕಾಂಗ್ರೆಸ್ ಮುಖಂಡರೊಬ್ಬರು ಟ್ವೀಟ್ ಮಾಡಿರುವ ಬಳಿಕ ಹಾರ್ದಿಕ್ ಪಟೇಲ್ ಕಟುವಾಗಿ ಟೀಕಿಸಿರುವುದಾಗಿ ವರದಿಯಾಗಿದೆ.
ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದೂ ಜನರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ಅಷ್ಟೇ ಅಲ್ಲ ಹಿಂದೂ ಧರ್ಮದ ನಂಬಿಕೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಈ ಹಿಂದೆಯೂ ನಾನು ಹೇಳಿದ್ದೆ. ಇಂದು ಕೂಡಾ ಕಾಂಗ್ರೆಸ್ ಮುಖಂಡರೊಬ್ಬರು ರಾಮಮಂದಿರದ ವಿಚಾರದಲ್ಲಿ ಟ್ವೀಟ್ ಮಾಡಿರುವುದು ಕೂಡಾ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹದ್ದೇ ಆಗಿದೆ ಎಂದು ಪಟೇಲ್ ವಾಗ್ದಾಳಿ ನಡೆಸಿದ್ದಾರೆ.
ನಿಮಗೆ ಭಗವಾನ್ ರಾಮನ ಬಗ್ಗೆ ಯಾಕಿಷ್ಟು ದ್ವೇಷ ಎಂದು ಕಾಂಗ್ರೆಸ್ ಮತ್ತು ಅವರ ಮುಖಂಡರನ್ನು ಕೇಳಲು ಬಯಸುತ್ತೇನೆ. ಹಿಂದೂಗಳ ಬಗ್ಗೆಯೂ ಯಾಕೆ ಇಷ್ಟೊಂದು ದ್ವೇಷ? ಶತಮಾನಗಳ ನಂತರ ಅಯೋಧ್ಯೆಯಲ್ಲಿ ಭಗವಾನ್ ರಾಮನ ಮಂದಿರವನ್ನು ನಿರ್ಮಾಣ ಮಾಡಲಾಗುತ್ತಿದೆ. ಆದರೂ ಕಾಂಗ್ರೆಸ್ ಭಗವಾನ್ ರಾಮನ ವಿರುದ್ಧ ಹೇಳಿಕೆಯನ್ನು ನೀಡುತ್ತಿದೆ ಎಂದು ಪಟೇಲ್ ಕಿಡಿಕಾರಿರುವುದಾಗಿ ವರದಿ ತಿಳಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.