ಉದ್ಧವ್ ಠಾಕ್ರೆಯ ಅಕ್ರಮ ಆಸ್ತಿ ಬಗ್ಗೆ ಸಿಬಿಐ ತನಿಖೆ ನಡೆಸಿ: ಬಾಂಬೆ ಹೈಕೋರ್ಟ್ ಗೆ ಪಿಐಎಲ್
ಮುಂಬೈ ನಿವಾಸಿಗಳಾದ ಗೌರಿ ಮತ್ತು ಅಭಯ್ ಭಿಡೆ ಬಾಂಬೆ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.
Team Udayavani, Oct 19, 2022, 1:56 PM IST
ಮುಂಬೈ: ಶಿವಸೇನಾ ಅಧ್ಯಕ್ಷ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಪತ್ನಿ ರಶ್ಮಿ ಠಾಕ್ರೆ, ಮಕ್ಕಳಾದ ಆದಿತ್ಯ ಮತ್ತು ತೇಜಸ್ ಠಾಕ್ರೆಯ ಅಕ್ರಮ ಆಸ್ತಿಗಳ ಕುರಿತು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಬೇಕೆಂದು ಕೋರಿ ಬಾಂಬೆ ಹೈಕೋರ್ಟ್ ಗೆ ಪಿಐಎಲ್ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ದಾಖಲಾಗಿದ್ದು, ಉದ್ಧವ್ ಠಾಕ್ರೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಕೊಂಡಂತಾಗಿದೆ.
ಇದನ್ನೂ ಓದಿ:ಠಾಣೆಗೆ ಹೋಗಿ ಅಮ್ಮನ ವಿರುದ್ಧ ದೂರು ಕೊಟ್ಟ 3 ವರ್ಷದ ಬಾಲಕ!ವಿಡಿಯೋ ನೋಡಿ ಸಚಿವರಿಂದ ಉಡುಗೊರೆ
ಠಾಕ್ರೆ ಕುಟುಂಬದ ವಿರುದ್ಧ ದಾಖಲಾದ ಪಿಐಎಲ್ ವಿಚಾರಣೆ ಇಂದು ಸಂಜೆ ಬಾಂಬೆ ಹೈಕೋರ್ಟ್ ನಲ್ಲಿ ನಡೆಯುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ. ಮುಂಬೈ ನಿವಾಸಿಗಳಾದ ಗೌರಿ ಮತ್ತು ಅಭಯ್ ಭಿಡೆ ಬಾಂಬೆ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.
ಉದ್ದವ್ ಠಾಕ್ರೆ ಕುಟುಂಬದ ಸದಸ್ಯರು ಕಾನೂನು ಬಾಹಿರವಾಗಿ ಭಾರೀ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದಿಸಿರುವುದಾಗಿ ಪಿಐಎಲ್ ನಲ್ಲಿ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದ್ದು, ಪಿಐಎಲ್ ಸಲ್ಲಿಸಿದ್ದ ದಾದರ್ ನಿವಾಸಿ ಅಭಯ್ ಭಿಡೆ ಶಿವಸೇನಾ ಮುಖಂಡರಾಗಿದ್ದಾರೆ ಎಂದು ತಿಳಿಸಿದೆ.
ಠಾಕ್ರೆಯ ಪ್ರಬೋಧನ್ ಪ್ರಕಾಶನ ಪ್ರೈವೇಟ್ ಲಿಮಿಟೆಡ್ 42 ಕೋಟಿ ರೂಪಾಯಿ ಆದಾಯಗಳಿಸಿದ್ದು, ಇದರ ಒಟ್ಟು ಲಾಭ 11.5 ಕೋಟಿ ರೂಪಾಯಿಯಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸಬೇಕೆಂದು ಪಿಐಎಲ್ ನಲ್ಲಿ ಮನವಿ ಮಾಡಿಕೊಂಡಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.