ಆಲೂರು : ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬೈಕ್‌ ಸವಾರ ಪಾರು


Team Udayavani, Jan 24, 2021, 2:47 PM IST

ಆಲೂರು : ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬೈಕ್‌ ಸವಾರ ಪಾರು

ಆಲೂರು: ಒಂಟಿ ಸಲಗವನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬೈಕ್‌ ಸವಾರನೊಬ್ಬ ಕೂದಲೆಳೆ ಅಂತರ ದಲ್ಲಿ ಕಾಡಾನೆಯಿಂದ ಪಾರಾದ ಘಟನೆ ತಾಲೂಕಿನ ಕೆ.ಹೊಸ ಕೋಟೆ ಹೋಬಳಿ ಮಠದಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕಾಫಿ ತೋಟದಿಂದ ಒಂಟಿ ಸಲಗವೊಂದು ದಿಢೀರ್‌ ರಸ್ತೆಗೆ ಬಂದಿದೆ. ಈ ವೇಳೆ ಬೈಕ್‌ ಸವಾರ ಆನೆಗೆ ಅಡ್ಡಲಾಗಿ ಬಂದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಬೈಕ್‌ ಸವಾರನಿಗೆ ಹಿಂತಿರುಗಿ ಹೋಗುವಂತೆ ಕೂಗಾಡಿದ್ದಾರೆ. ಆದರೂ, ಯುವಕ ನುಗ್ಗಿ ಬಂದಿದ್ದು, ಆಶ್ಚರ್ಯ ರೀತಿಯಲ್ಲಿ ಪಾರಾಗಿದ್ದಾನೆ. ಒಂದು ವೇಳೆ ಆನೆ ಸೊಂಡಿಲನ್ನು ಎತ್ತಿದ್ದರೂ ಸಾಕಿತ್ತು, ಬೈಕ್‌ ಬಿದ್ದು ಆನೆಯ ಪಾದ ಸೇರುತ್ತಿದ್ದ ಎಂದು ಸ್ಥಳದಲ್ಲಿ ಕೆಲವರು ಹೇಳಿದ್ದಾರೆ. ಹಾರೋಹಳ್ಳಿ ಗ್ರಾಮದ ಸಂತೋಷ್‌ ಆನೆ ದಾಳಿಯಿಂದ ಪಾರಾದ ಯುವಕ. ಈತ ಸ್ವಗ್ರಾಮದಿಂದ ಮಗ್ಗೆ ಗ್ರಾಮಕ್ಕೆ ಹೋಗುತ್ತಿದ್ದ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ಇದ್ದವರು ಕಾಡಾನೆಯಿಂದ
ಪಾರಾಗಿ ಬಂದ ಬೈಕ್‌ ಸವಾರನಿಗೆ ಸರಿಯಾಗಿಯೇ ಬುದ್ಧಿ ಹೇಳಿದ್ದಾರೆ. ಆಲೂರು- ಸಕಲೇಶಪುರದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಜೀವಭಯದಿಂದ ಬದುಕು ನಡೆಸುವಂತಾಗಿದೆ.

ಇದನ್ನೂ ಓದಿ:ರೈತರ ಟ್ರಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು

ಕಳೆದ ಹಲವು ದಿನಗಳಿಂದ ಆಲೂರು ತಾಲೂಕಿನ ಕುಂದೂರು, ಕೆ.ಹೊಸಕೋಟೆ ಹೋಬಳಿಗಳಲ್ಲಿ ಭೀಮ ಎಂದು ಕರೆಯಲ್ಪಡುವ ಒಂಟಿ ಸಲಗವೊಂದು ಹಲವು ದಿನಗಳಿಂದ ಗ್ರಾಮಗಳ ಮುಖ್ಯ ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡುತ್ತಿದೆ.
ಈವರೆಗೆ ಯಾವ ಪ್ರಾಣ ಹಾನಿಯಾಗದಿದ್ದರೂ ಜನ ಸಾಮಾನ್ಯರು ಭಯ ಭೀತರಾಗಿದ್ದಾರೆ. ಈ ಕಾಡಾನೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆನ್ನುವುದು ಜನಸಾಮಾನ್ಯರ ಒತ್ತಾಯವಾಗಿದೆ. ಸೌಮ್ಯ ಸ್ವಭಾವದ ಆನೆ: ಮಠದ ಕೊಪ್ಪಲು ಗ್ರಾಮದ ಕಾಫಿ ತೋಟದಲ್ಲಿ ಶನಿವಾರ ದಿಢೀರ್‌ ಪ್ರತ್ಯಕ್ಷವಾದ ಒಂಟಿ ಸಲಗ(ಭೀಮ) ಸೌಮ್ಯ ಸ್ವಭಾವದ್ದಾಗಿದೆ. ಹಲವು ಗ್ರಾಮಗಳಲ್ಲಿ ಗಂಭೀರ್ಯದೊಂದಿಗೆ ಓಡಾಟ ನಡೆಸಿದ್ದ ಭೀಮ, ಬೆಳೆಗಳನ್ನು ಬಿಟ್ಟರೆ ಮನುಷ್ಯರಿಗೆ ಯಾವುದೇ ತೊಂದರೆ ಮಾಡಿಲ್ಲ.

ತಾಲೂಕಿನ ನಿಡನೂರು, ಮೆಣಸಮಕ್ಕಿ, ಬಾಳ್ಳುಪೇಟೆ, ಮಲ್ಲೇನಹಳ್ಳಿ, ಹಾಚ್ಗೋಡ್ನಹಳ್ಳಿ, ಚಿಗಳೂರು, ಅರಹಳ್ಳ ಕೊಪ್ಪಲು, ಅಬ್ಬನ, ಚಿನ್ನಳ್ಳಿ ಹಾಗೂ ಪಾಳ್ಯ ಸುತ್ತಮುತ್ತಲ ಗ್ರಾಮಗಳಲ್ಲಿ ಓಡಾಟ ನಡೆಸಿದ್ದ ಭೀಮ, ಯಾರಿಗೂ ತೊಂದರೆ ಮಾಡಿಲ್ಲ. ಇತ್ತ ಪುಂಡಾನೆ ಸೆರೆ ಹಿಡಿಯಲು, ಮೂರು ಹೆಣ್ಣಾನೆಗೆ ರೆಡಿಯೋ ಕಾಲರ್‌ ಅಳವಡಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಒಂದೆಡೆ ಕಾರ್ಯಾಚರಣೆ ನಡೆಸುತ್ತಿದ್ದರೆ, ಇತ್ತ ಮತ್ತೂಂದು ಒಂಟಿ ಸಲಗ ಊರೂರು ತಿರುಗುತ್ತಾ, ಭೀತಿ ಹುಟ್ಟಿಸುತ್ತಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.