ಡಿ.18 ರಂದು ಸು.ರಂ.ಎಕ್ಕುಂಡಿಯವರ ಜನ್ಮ ಶತಮಾನೋತ್ಸವ; ಜಯಂತ ಕಾಯ್ಕಿಣಿಯವರಿಂದ ಉದ್ಘಾಟನೆ

ಬೆಂಗಳೂರಿನಲ್ಲಿ 'ಭಾಗವತರು' ಸಂಘಟನೆಯ ದಿನವಿಡೀ ಕಾರ್ಯಕ್ರಮ

Team Udayavani, Dec 16, 2022, 2:49 PM IST

1-wdadweqw

ಬೆಂಗಳೂರು: ಭಾಗವತರು ಸಂಘಟನೆಯು ಡಿಸೆಂಬರ್‌ 18 ರಂದು ರವಿವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಾಡಿನ ಹೆಮ್ಮೆಯ ಕವಿ ಸು.ರಂ. ಎಕ್ಕುಂಡಿಯವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ.

ದಿನವಿಡೀ ಸು.ರಂ. ಎಕ್ಕುಂಡಿಯವರ ಕಾವ್ಯಗಳ ಓದು, ಗೀತೆಗಳ ಗಾಯನ, ಅವರ ಬಗೆಗೆ ಒಂದಿಷ್ಟು ಮಾತು-ನೆನಪು, ಕೆಲವರಿಗೆ ಸಮ್ಮಾನ-ಹೀಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ.

ಅಂದು ಬೆಳಗ್ಗೆ 10 ಕ್ಕೆ ಶತಮಾನೋತ್ಸವ ಕಾರ್ಯಕ್ರಮವನ್ನು ಕವಿ ಜಯಂತ ಕಾಯ್ಕಿಣಿಯವರು ಉದ್ಘಾಟಿಸುವರು. ಈ ಸಂದರ್ಭದಲ್ಲಿ ಪುಸ್ತಕವನ್ನು ಹಿರಿಯ ಲೇಖಕಿ ಡಾ. ವಿಜಯಾ ಬಿಡುಗಡೆ ಮಾಡುವರು. ಹಿರಿಯ ಪತ್ರಕರ್ತ ಜಿ.ಎನ್‌. ಮೋಹನ್‌ ಮುಖ್ಯ ಅತಿಥಿಗಳಾಗಿರುವರು. ಅಧ್ಯಕ್ಷತೆಯನ್ನು ಕವಿ ಡಾ. ಎಚ್‌. ಎಸ್‌. ವೆಂಕಟೇಶ ಮೂರ್ತಿ ವಹಿಸುವರು.

ಉದ್ಘಾಟನೆ ಬಳಿಕ ನೀನಾಸಂ ಪ್ರತಿಷ್ಠಾನ, ಸಂಚಿ ಫೌಂಡೇಷನ್‌ ನವರಿಂದ ಎಕ್ಕುಂಡಿಯವರ ಕವಿತೆ ಮಿಥಿಲೆಯ ಗೀತ ಸಾಕ್ಷ್ಯಚಿತ್ರ ಪ್ರದರ್ಶನವಿದೆ. ಅಧ್ಯಕ್ಷತೆ ಡಾ. ಮಲ್ಲೇಪುರಂ ಜಿ. ವೆಂಕಟೇಶ್‌ ಅವರದ್ದು. ಶೂದ್ರ ಶ್ರೀನಿವಾಸ್‌, ಡಿ.ವಿ. ಪ್ರಹ್ಲಾದ್‌, ಲತಾ ಗುತ್ತಿ, ಮಧುಕರ ಎಕ್ಕುಂಡಿ ಭಾಗವಹಿಸುವರು. ಎರಡನೇ ಗೋಷ್ಠಿಯಲ್ಲಿ ದೂರದರ್ಶನ ಚಂದನದಲ್ಲಿ ಪ್ರಸಾರವಾದ ಸಂದರ್ಶನದ ಆಯ್ದ ಭಾಗವನ್ನು ಪ್ರಸಾರ ಮಾಡುವುದಲ್ಲದೇ, ಎಕ್ಕುಂಡಿಯವರ ಗೀತೆಗಳನ್ನು ಸಂಗೀತಗಾರ ಡಾ. ವಿದ್ಯಾಭೂಷಣ ಹಾಡುವರು.ವಿದ್ವಾನ್‌ ಡಾ. ಪ್ರಭಂಜನಾಚಾರ್ಯರು ಭಾಗವಹಿಸುವರು.

ಮೂರನೇ ಗೋಷ್ಠಿ ಅವರ ಸಾಕ್ಷ್ಯ ಚಿತ್ರ ಪ್ರದರ್ಶನ. ಸಿಐಐಎಲ್‌ ರೂಪಿಸಿರುವ ಸು.ರಂ. ಎಕ್ಕುಂಡಿಯವರ ಕುರಿತ ಕವಿತೆಗಳ ವಾಚನವಿದೆ. ಅಧ್ಯಕ್ಷತೆ ಕಥೆಗಾರ ಎಸ್‌. ದಿವಾಕರ್‌. ಚಲನಚಿತ್ರ ನಿರ್ದೇಶಕ ಬಿ.ಸುರೇಶ್‌, ಎಚ್‌.ಎನ್‌. ಆರತಿ, ಜಯಲಕ್ಷ್ಮೀ ಪಾಟೀಲ್‌ ಮತ್ತಿತರರು ಪಾಲ್ಗೊಳ್ಳುವರು. ಸಂಜೆ 5 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ. ಹಿರಿಯ ಪತ್ರಕರ್ತ ರವೀಂದ್ರ ಭಟ್‌ ಸಮಾರೋಪ ಭಾಷಣ ಮಾಡುವರು.

ಹಿರಿಯ ಪತ್ರಕರ್ತರಾದ ಜೋಗಿ, ಆರ್‌.ಜಿ. ಹಳ್ಳಿ ನಾಗರಾಜ್‌ ಮತ್ತಿತರರು ಭಾಗವಹಿಸುವರು. ಇದೇ ಹೊತ್ತಿನಲ್ಲಿ ಎಕ್ಕುಂಡಿಯವರ ಕುರಿತು ಪಿಎಚ್‌. ಡಿ ಅಧ್ಯಯನ ಮಾಡಿರುವ ಡಾ. ರಾಜೇಶ್ವರಿ ಪೀಟರ್‌, ಶ್ರೀನಿವಾಸ್‌ ಅವರನ್ನು ಸಮ್ಮಾನಿಸಲಾಗುತ್ತದೆ. ಸು.ರಂ. ಎಕ್ಕುಂಡಿಯವರ ಕುಟುಂಬಸ್ಥರಾದ ರಂಗನಾಥ ಎಕ್ಕುಂಡಿ, ವೇದಾ ಎಕ್ಕುಂಡಿ, ವಾದಿರಾಜ ಎಕ್ಕುಂಡಿ, ವೀಣಾ ಎಕ್ಕುಂಡಿ, ಭಾರತಿ ಎಕ್ಕುಂಡಿ, ನಾರಾಯಣ ನವರತ್ನರು ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಭಾಗವತರು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.