ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ: ಕಿರಣ್ ಕಾಂದೋಳಕರ್
Team Udayavani, Dec 9, 2021, 6:02 PM IST
ಪಣಜಿ: ಬಿಜೆಪಿಯು ಮಮತಾ ಬ್ಯಾನರ್ಜಿಯವನರನ್ನು ಮುಸ್ಲಿಂ ಬೆಂಬಲಿಗರು ಎಂದು ಹೇಳುವ ಮೂಲಕ ರಾಜ್ಯದಲ್ಲಿ ಅವರನ್ನು ನಕಾರಾತ್ಮಕವಾಗಿ ಬಿಂಬಿಸಲು ಹೊರಟಿದೆ. ಪಶ್ಚಿಮ ಬಂಗಾಳವಲ್ಲದೆ, ಆಸ್ಸಾಂನಲ್ಲಿಯೂ ಮುಸ್ಲಿಂರು ನೆಲೆಸಿದ್ದಾರೆ. ಆದರೆ ಬಿಜೆಪಿ ಸರ್ಕಾರ ಟಿಎಂಸಿಯತ್ತ ಬೆರಳು ತೋರಿಸಿ ಆರೋಪವೆಸಗುತ್ತಿದೆ ಎಂದು ಟಿಎಂಸಿ ವಕ್ತಾರ ಕಿರಣ್ ಕಾಂದೋಳಕರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು- ಮಮತಾ ಬ್ಯಾನರ್ಜಿಯವರು ಒಬ್ಬ ಬ್ರಾಹ್ಮಣರು, ಸ್ವಾತಂತ್ರ್ಯಹೋರಾಟಗಾರರ ಮಗಳು. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಿಂದುಗಳ ಶೇ 50 ಕ್ಕೂ ಹೆಚ್ಚು ಮತಗಳನ್ನು ಪಡೆದು ಅಧಿಕಾರಕ್ಕೆ ಬಂದವರು. ಮಮತಾ ಬ್ಯಾನರ್ಜಿಯವರ ಜಾತಿ ಧರ್ಮವನ್ನು ಬಿಜೆಪಿ ಎತ್ತಿ ತೋರಿಸುತ್ತಿರುವುದು ಇದೇ ಮೊದಲೇನಲ್ಲ. ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಟಿಎಂಸಿ ಪಕ್ಷವನ್ನು ಮುಸ್ಲಿಂ ಪರ ಪಕ್ಷವೆಂದು ಬಿಜೆಪಿ ಬಿಂಬಿಸಲು ಪ್ರಯತ್ನಿಸಿದ ನಂತರ ಮಮತಾ ಬ್ಯಾನರ್ಜಿಯವರು ತಮ್ಮ ಬುಡಕಟ್ಟಿನ ಬಗ್ಗೆ ಪ್ರಸ್ತಾಪಿಸಿದ್ದರು ಎಂದು ನುಡಿದರು.
ಟಿಎಂಸಿ ಪಕ್ಷವು ರೋಹಿಂಗ್ಯಾ ಮುಸ್ಲಿಂರ ಪಕ್ಷ ಎಂದು ಬಿಜೆಪಿ ಹೇಳುತ್ತಿದೆ. ರೋಹಿಂಗ್ಯಾ ಮುಸ್ಲಿಂರು ಎಲ್ಲಿಂದ ಬಂದಿದ್ದಾರೆ ಎಂಬುದನ್ನು ಬಿಜೆಪಿ ಅಧ್ಯಯನ ಮಾಡಿ ಪತ್ತೆ ಹಚ್ಚಬೇಕಿದೆ. ಅವರಲ್ಲಿ ಹೆಚ್ಚಿನವರು ಬಿಜೆಪಿ ಅಧಿಕಾರದಲ್ಲಿರುವ ಆಸ್ಸಾಂನಲ್ಲಿ ನೆಲೆಸಿದ್ದಾರೆ. ಆಸ್ಸಾಂ ಸರ್ಕಾರವು ಅವರೆಲ್ಲರನ್ನು ಸ್ಥಳಾಂತರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.