![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 20, 2022, 4:16 PM IST
ಕಾಸರಗೋಡು: ಹಲವಾರು ಬಿಜೆಪಿ ಕಾರ್ಯಕರ್ತರು ಫೆ 20, ಭಾನುವಾರ ಜಿಲ್ಲಾ ಸಮಿತಿ ಬಿಜೆಪಿ ಕಚೇರಿಯನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕುಂಬಳೆ ಪಂಚಾಯತ್ನಲ್ಲಿ ಸಿಪಿಐ-ಎಂ ಜೊತೆ ಅನುಕೂಲ ಮೈತ್ರಿ ಮಾಡಿಕೊಳ್ಳುವ ಕುರಿತು ಪಕ್ಷದ ಮುಖಂಡರ ವಿವಾದದ ನಂತರ ಈ ಘಟನೆ ನಡೆದಿದೆ. ಪಕ್ಷದ ಕಾರ್ಯಕ ರ್ತರು ಕಚೇರಿಯತ್ತ ಮೆರವಣಿಗೆಯಲ್ಲಿ ಬಂದು ಸರಪಳಿ, ಬೀಗ ಹಾಕಿ ಮುಚ್ಚಿದರು.
ಪಕ್ಷದ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಪಕ್ಷದ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದರು.
ಕಾಸರಗೋಡಿನಲ್ಲಿ ಕೇಸರಿ ಪಕ್ಷವು ಪ್ರಬಲವಾಗಿದೆ ಮತ್ತು ಮಂಜೇಶ್ವರ ಮತ್ತು ಕಾಸರಗೋಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಯಾವಾಗಲೂ ಚುನಾವಣಾ ಫಲಿತಾಂಶಗಳಲ್ಲಿ ಎರಡನೇ ಸ್ಥಾನವನ್ನು ತಲುಪಿದ್ದಾರೆ ಎಂಬುದನ್ನು ಗಮನಿಸಬಹುದಾಗಿದೆ.
ಕೆ.ಸುರೇಂದ್ರನ್ ಅವರು ಮಂಜೇಶ್ವರ ಕ್ಷೇತ್ರದಿಂದ ಸ್ಪರ್ಧಿಸಿದ್ದು, 2016ರ ವಿಧಾನಸಭೆ ಚುನಾವಣೆಯಲ್ಲಿ 89 ಮತಗಳಿಂದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ನ ಅಬ್ದುಲ್ ರಜಾಕ್ ಅವರ ವಿರುದ್ಧ ಸೋತಿದ್ದರು. 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು ಮುಸ್ಲಿಂ ಲೀಗ್ನ ಅಶ್ರಫ್ ವಿರುದ್ಧ 745 ಮತಗಳಿಂದ ಸೋತಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.