Davis Cup: ವಿದಾಯಕ್ಕೆ ಬೋಪಣ್ಣ ನಿರ್ಧಾರ


Team Udayavani, Jun 22, 2023, 6:19 AM IST

ROHAN BOPANNA

ಹೊಸದಿಲ್ಲಿ: ಭಾರತದ ಅಗ್ರಮಾನ್ಯ ಡಬಲ್ಸ್‌ ಆಟಗಾರ ರೋಹನ್‌ ಬೋಪಣ್ಣ ಮುಂದಿನ ಸೆಪ್ಟಂಬರ್‌ನಲ್ಲಿ ಡೇವಿಸ್‌ ಕಪ್‌ ಟೆನಿಸ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ತವರಾದ ಬೆಂಗಳೂರಿನಲ್ಲೇ ವಿದಾಯ ಪಂದ್ಯ ಆಡಬೇಕೆಂಬ ಅಭಿಲಾಷೆ ಯನ್ನೂ ವ್ಯಕ್ತಪಡಿಸಿದ್ದಾರೆ.

43 ವರ್ಷದ ರೋಹನ್‌ ಬೋಪಣ್ಣ ಮೂಲತಃ ಕೊಡಗಿನವರು. ಹೀಗಾಗಿ ತವರಾದ ಕರ್ನಾಟಕದಲ್ಲೇ ಅಂತಿಮ ಪಂದ್ಯ ಆಡಬೇಕೆನ್ನುವುದು ಅವರ ಆಸೆ. ಆದರೆ ಅವರ ಈ ಬಯಕೆ ಈಡೇರುವ ಸಾಧ್ಯತೆ ಇಲ್ಲ. ಸೆಪ್ಟಂಬರ್‌ನಲ್ಲಿ ಮೊರೊಕ್ಕೊ ವಿರುದ್ಧ ಭಾರತ ವಿಶ್ವ ಗ್ರೂಪ್‌ ಸೆಕೆಂಡ್‌ ಟೈ ಡೇವಿಸ್‌ ಕಪ್‌ ಪಂದ್ಯ ಆಡುವುದಾದರೂ ಇದರ ಆತಿಥ್ಯವನ್ನು ಎಐಟಿಎ ಈಗಾಗಲೇ ಉತ್ತರಪ್ರದೇಶಕ್ಕೆ ನೀಡಿದೆ.

ರೋಹನ್‌ ಬೋಪಣ್ಣ ಅವರ ಡೇವಿಸ್‌ ಕಪ್‌ ಅನುಭವ 2 ದಶಕಗಳಿಗೂ ಮಿಗಿಲಾದದ್ದು. ಅವರು 2002ರಲ್ಲಿ ಡೇವಿಸ್‌ ಕಪ್‌ಗೆ ಪದಾ ರ್ಪಣೆ ಮಾಡಿದ್ದರು. ಎಟಿಪಿ ಟೂರ್‌ಗಳಲ್ಲಿ ಸಕ್ರಿಯರಾಗಿದ್ದು, ಭಾರತವನ್ನು 32 ಸ್ಪರ್ಧೆಗಳಲ್ಲಿ ಪ್ರತಿನಿಧಿಸಿದ್ದಾರೆ. 12 ಸಿಂಗಲ್ಸ್‌ ಮತ್ತು 10 ಡಬಲ್ಸ್‌ ಪಂದ್ಯಗಳಲ್ಲಿ ಗೆಲುವು ಕಂಡಿದ್ದಾರೆ. ಲಿಯಾಂಡರ್‌ ಪೇಸ್‌ 58 ಪಂದ್ಯಗಳಲ್ಲಿ ಆಡಿರುವುದು ಭಾರ ತೀಯ ದಾಖಲೆ. ಅನಂತರದ ಸ್ಥಾನ ದಲ್ಲಿರುವವರು ಜೈದೀಪ್‌ ಮುಖರ್ಜಿ (43), ರಾಮನಾಥನ್‌ ಕೃಷ್ಣನ್‌ (43), ಪ್ರೇಮ್‌ಜಿತ್‌ ಲಾಲ್‌ (41), ಆನಂದ್‌ ಅಮೃತ್‌ರಾಜ್‌ (39), ಮಹೇಶ್‌ ಭೂಪತಿ (35) ಮತ್ತು ವಿಜಯ್‌ ಅಮೃತ್‌ರಾಜ್‌ (32).

ಬೆಂಗಳೂರಿಗೆ ಆತಿಥ್ಯ ಅಸಾಧ್ಯ
“ಸೆಪ್ಟಂಬರ್‌ನಲ್ಲಿ ನಾನು ಕೊನೆಯ ಡೇವಿಸ್‌ ಕಪ್‌ ಪಂದ್ಯವನ್ನು ಆಡಬೇಕೆಂಬ ನಿರ್ಧಾರಕ್ಕೆ ಬಂದಿದ್ದೇನೆ. 2002ರಿಂದಲೂ ಆಡುತ್ತಿರುವ ನನ್ನ ಬಯಕೆಯೆಂದರೆ ತವರಾದ ಬೆಂಗಳೂರಿನಲ್ಲಿ ವಿದಾಯ ಪಂದ್ಯವನ್ನು ಆಡುವುದು. ಭಾರತದ ಎಲ್ಲ ಆಟಗಾರರೊಂದಿಗೆ ಈ ಕುರಿತು ಮಾತಾ ಡಿದ್ದೇನೆ. ಕರ್ನಾಟಕ ರಾಜ್ಯ ಲಾನ್‌ ಟೆನಿಸ್‌ ಅಸೋಸಿಯೇಶನ್‌ ಕೂಡ ಸಕರಾತ್ಮಕವಾಗಿ ಸ್ಪಂದಿಸಿದೆ. ಆದರೆ ಭಾರತೀಯ ಟೆನಿಸ್‌ ಅಸೋಸಿಯೇಶನ್‌ ಯಾವ ನಿರ್ಧಾರಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕು’ ಎಂದು ಬೋಪಣ್ಣ ಹೇಳಿದರು.

ಆದರೆ ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ (ಎಐಟಿಎ) ಮಹಾ ಕಾರ್ಯದರ್ಶಿ ಅನಿಲ್‌ ಧುಪರ್‌ ಪ್ರಕಾರ, ಮೊರೊಕ್ಕೊ ಎದುರಿನ ಡೇವಿಸ್‌ ಕಪ್‌ ಪಂದ್ಯಾವಳಿಯ ಆತಿಥ್ಯವನ್ನು ಬೆಂಗಳೂರಿಗೆ ವರ್ಗಾಯಿಸುವುದು ಕಷ್ಟ.

ಎಟಿಪಿ ಟೂರ್‌ ಕುರಿತು…
ಎಟಿಪಿ ಟೂರ್‌ನಲ್ಲಿ ಮುಂದುವರಿಯುವಿರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರೋಹನ್‌ ಬೋಪಣ್ಣ, “ನಾನು ಎಟಿಪಿ ಟೂರ್‌ಗಳಲ್ಲಿ ಆಡದೇ ಹೋದರೆ ಈ ಸ್ಥಾನ ಮತ್ತೂಬ್ಬ ಭಾರತೀಯ ಆಟಗಾರನಿಗೆ ಲಭಿಸುತ್ತದೆಂಬ ಖಾತ್ರಿ ಇಲ್ಲ. ಉದಾಹರಣೆಗೆ ವಿಂಬಲ್ಡನ್‌. ನನ್ನ ಸ್ಥಾನ ಇನ್ಯಾರೋ ವಿದೇಶಿ ಆಟಗಾರನ ಪಾಲಾಗುತ್ತದೆ. ಆದರೆ ಡೇವಿಸ್‌ ಕಪ್‌ನಿಂದ ದೂರ ಸರಿದರೆ ಮತ್ತೋರ್ವ ಭಾರತದ ಟೆನಿಸಿಗನಿಗೇ ಅವಕಾಶ ಸಿಗುತ್ತದೆ’ ಎಂದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.