ಬಿಎಸ್ವೈ ಗನ್ಮ್ಯಾನ್ ಇಡಿ ನಿಯೋಜಿತ: ಲಕ್ಷ್ಮಣ ಬಾಂಬ್
Team Udayavani, Dec 15, 2022, 6:45 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹಿಂದೆ ಇಬ್ಬರು ಗನ್ಮ್ಯಾನ್ಗಳಿದ್ದು ಒಬ್ಬರು ಜಾರಿ ನಿರ್ದೇಶನಾಲಯದಿಂದ (ಇಡಿ) ನಿಯೋಜನೆಗೊಂಡಿರುವವರು ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ “ಬಾಂಬ್’ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡಿಯಿಂದ ನಿಯೋಜನೆಗೊಂಡಿರುವ ಗನ್ಮ್ಯಾನ್ ಯಡಿಯೂರಪ್ಪ ಅವರ ಚಲನವಲನ ನಿಗಾ ಇಟ್ಟು ಬಿಜೆಪಿ ವರಿಷ್ಠರಿಗೆ ಮಾಹಿತಿ ನೀಡುವುದು, ಜತೆಗೆ ವರಿಷ್ಠರ ಸಂದೇಶ ರವಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಇಡಿ ಮೂಲಕ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ಅವರನ್ನು ಬ್ಲ್ಯಾಕ್ಮೇಲ್ ಮಾಡಿ ನಿಯಂತ್ರಣದಲ್ಲಿಟ್ಟುಕೊಳ್ಳಲಾಗಿದೆ. ಬಿಜೆಪಿ ರಾಜ್ಯದಲ್ಲಿ ಆಧಿಕಾರಕ್ಕೆ ತಂದ ನಾಯಕನನ್ನು ಈ ರೀತಿ ನಡೆಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಮಧ್ಯೆ, ಕಾಂಗ್ರೆಸ್ ಪಕ್ಷವು ಟ್ವೀಟ್ ಮಾಡಿ, ಬಿಜೆಪಿಯಲ್ಲಿ ಬಿಎಸ್ವೈ ಚಲಾವಣೆಯಲ್ಲಿ ಇಲ್ಲದ ನಾಣ್ಯದಂತಾಗಿರುವಾಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗ ಸಂತೋಷ ಕೂಟಕ್ಕೆ ಹೈಜಂಪ್ ಮಾಡಿದರೇ ಎಂದು ಕಾಲೆಳೆದಿದೆ.
ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಯಡಿಯೂರಪ್ಪ ಅವರ ಫೋಟೋಗೆ ಜಾಗ ನೀಡದ ಬಿಜೆಪಿ ಅಸಲಿಗೆ ಮಾಡಲು ಹೊರಟಿರುವುದು ಬಿಎಸ್ವೈ ಮುಕ್ತ ಬಿಜೆಪಿ ಸಂಕಲ್ಪ ಎಂದು ಕುಟುಕಿದೆ. ಗುರುವಿಗೆ ಅವಮಾನಿಸುವ ನೇತೃತ್ವವನ್ನು ಸ್ವತಃ ಬೊಮ್ಮಾಯಿಯವರೇ ವಹಿಸಿರುವಂತಿದೆ ಎಂದು ಹೇಳಿದೆ.
ಮತ್ತೊಂದೆಡೆ ಕೆಪಿಸಿಸಿ ಸಾಮಾಜಿಕ ಜಾಲತಾಣ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ, ಬಿಜೆಪಿಯದು ಮನೆಯೊಂದು ಮೂರು ಬಾಗಿಲು ಅಲ್ಲ, ನೂರು ಬಾಗಿಲು ಎಂಬ ಪರಿಸ್ಥಿತಿಯಾಗಿದೆ. ಯಡಿಯೂರಪ್ಪ ಅವರು ಜನಸಂಕಲ್ಪ ಯಾತ್ರೆ ಹೋಗದಿರಲು ಅವರಿಗೆ ಅಸಮಾಧಾನ ಆಗಿರುವುದೇ ಕಾರಣ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.