ಯುಪಿಯಲ್ಲಿ ಮುಂದುವರಿದ ಬುಲ್ಡೋಜರ್ ದಾಳಿ; ಅನ್ಸಾರಿ ಪುತ್ರನ ಐಶಾರಾಮಿ ಮನೆ ನೆಲಸಮ
Team Udayavani, Mar 3, 2023, 10:13 PM IST
ಲಕ್ನೋ : ಜೈಲಿನಲ್ಲಿರುವ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿಯ ಪುತ್ರ, ಜೈಲಿನಲ್ಲಿರುವ ಶಾಸಕ ಅಬ್ಬಾಸ್ ಅನ್ಸಾರಿ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬುಲ್ಡೋಜರ್ ಕ್ರಮವನ್ನು ಪ್ರಾರಂಭಿಸಿದ್ದಾರೆ. ಮೌ ಜಿಲ್ಲೆಯ ಜಹಾಂಗೀರಾಬಾದ್ನಲ್ಲಿ ಅಧಿಕಾರಿಗಳು ಎರಡು ಅಂತಸ್ತಿನ ಮನೆಯನ್ನು ಕೆಡವಿದ್ದಾರೆ. ಮುಖ್ತಾರ್ ಅನ್ಸಾರಿಯ ಮಕ್ಕಳಾದ ಅಬ್ಬಾಸ್ ಅನ್ಸಾರಿ ಮತ್ತು ಉಮರ್ ಅನ್ಸಾರಿ ಅವರ ಹೆಸರಿನಲ್ಲಿ ಮನೆ ಇತ್ತು.
ಅಬ್ಬಾಸ್ ಮತ್ತು ಉಮರ್ ಅನ್ಸಾರಿ ಅವರು ಎರಡು ಅಂತಸ್ತಿನ ಮನೆಯನ್ನು ನಿರ್ಮಿಸಲು ಅಗತ್ಯ ಅನುಮೋದನೆಯನ್ನು ಪಡೆದಿಲ್ಲ ಮತ್ತು ಅದರ ನಕ್ಷೆಯನ್ನು ಅಂಗೀಕರಿಸಲಿಲ್ಲ ಎಂಬ ಆರೋಪದ ನಂತರ ಈ ಕ್ರಮವನ್ನು ಪ್ರಾರಂಭಿಸಲಾಗಿದೆ.
ಎರಡಂತಸ್ತಿನ ಮನೆಯನ್ನು ಕೆಡವಲು ಸಿಟಿ ಮ್ಯಾಜಿಸ್ಟ್ರೇಟ್ ಆದೇಶ ಹೊರಡಿಸಿದ್ದರು. ಬಳಿಕ ಶುಕ್ರವಾರ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬಂದಿ ಹಾಗೂ ಇತರೆ ಅಧಿಕಾರಿಗಳು ಐಶಾರಾಮಿ ಮನೆಯನ್ನು ನೆಲಸಮಗೊಳಿಸಿದ್ದಾರೆ.
ಮೌ ಶಾಸಕ ಅಬ್ಬಾಸ್ ಅನ್ಸಾರಿ ಕಳೆದ ಮೂರು ತಿಂಗಳಿಂದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲಿನಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.