By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ
ಶಿಗ್ಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮಗೊಳಿಸದೇ ಬಾಕಿ ಉಳಿಸಿಕೊಂಡ ಕಾಂಗ್ರೆಸ್
Team Udayavani, Oct 23, 2024, 11:49 PM IST
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ್ದರಿಂದ ಕಾಂಗ್ರೆಸ್ ಪಕ್ಷವು ಬುಧವಾರ ತಡರಾತ್ರಿ ಚನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿ ಎಐಸಿಸಿ ಘೋಷಿಸಿದೆ.
ನ. 13ರಂದು ಉಪ ಚುನಾವಣೆ ನಡೆಯುವ ಮೂರು ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ಕ್ಷೇತ್ರಗಳ ಪೈಕಿ ಚನ್ನಪಟ್ಟಣಕ್ಕೆ ನಿರೀಕ್ಷೆಯಂತೆ ಬುಧವಾರ ಬೆಳಗ್ಗೆ ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ.ಯೋಗೇಶ್ವರ್ರನ್ನು ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ. ಹಾಗೆಯೇ ಸಂಡೂರು ಕ್ಷೇತ್ರಕ್ಕೆ ಈ ಹಿಂದೆ ಶಾಸಕರಾಗಿ ಈಗ ಸಂಸದರಾಗಿ ಆಯ್ಕೆಯಾದ ಈ.ತುಕಾರಾಂ ಪತ್ನಿ ಈ.ಅನ್ನಪೂರ್ಣ ಅವರನ್ನು ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದೆ.
ಶಿಗ್ಗಾವಿಗೆ ಘೋಷಣೆಯಾಗದ ಅಭ್ಯರ್ಥಿ:
ಇನ್ನುಳಿದ ಶಿಗ್ಗಾವಿ ಕ್ಷೇತ್ರದ ಟಿಕೆಟ್ ಪಂಚಮಸಾಲಿ ಅಭ್ಯರ್ಥಿಗೋ ಅಥವಾ ಮುಸ್ಲಿಮರ ಅಭ್ಯರ್ಥಿ ಆಯ್ಕೆಗೆ ಭಾರಿ ಪೈಪೋಟಿ ನಡೆದಿರುವುದರಿಂದ ಯಾರನ್ನುಅಂತಿಮವಾಗಿ ಕಣಕ್ಕೆ ಇಳಿಸುವ ತೀರ್ಮಾನಕ್ಕೆ ಬಾರದೇ ಗೊಂದಲಕ್ಕೆ ಬಿದ್ದಿರುವ ಕಾಂಗ್ರೆಸ್ ಈ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಯ ಘೋಷಿಸದೇ ಕಾಯ್ದಿರಿಸಿದೆ.
Congress President Shri @kharge has approved the proposals to nominate the following members as party candidates for the bye-elections in the State Legislative Assemblies listed below. pic.twitter.com/tBRqg05hSv
— Congress (@INCIndia) October 23, 2024
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.