ಸದನದಲ್ಲಿ ಸಿ.ಡಿ. ಪ್ರಕರಣ ಪ್ರಸ್ತಾಪಿಸಲು ಅವಕಾಶ ಕೋರಿದ ಕಾಂಗ್ರೆಸ್‌


Team Udayavani, Mar 18, 2021, 8:15 PM IST

ಸದನದಲ್ಲಿ ಸಿ.ಡಿ. ಪ್ರಕರಣ ಪ್ರಸ್ತಾಪಿಸಲು ಅವಕಾಶ ಕೋರಿದ ಕಾಂಗ್ರೆಸ್‌

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್‌ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್‌ ಮುಂದಾಗಿದೆ.

ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ ಹೋಗಿ 67 ಮಾಧ್ಯಮಗಳು ಹಾಗೂ ಇತರರ ವಿರುದ್ಧ ನಿರ್ಬಂಧಕಾಜ್ಞೆಯನ್ನು ತಂದಿದ್ದು, ರಾಜ್ಯದ ಮರ್ಯಾದೆ ಹರಾಜಾಗುತ್ತಿದೆ. ಇದರ ಬಗ್ಗೆ ಎಫ್ಐಆರ್‌ ದಾಖಲಾಗುವ ಮೊದಲೇ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಲಾಗಿದೆ.

ಅನಂತರ ಮಾಜಿ ಸಚಿವರು ವ್ಯಕ್ತಿಯೊಬ್ಬರ ಮೂಲಕ ಕಳುಹಿಸಿದ ದೂರನ್ನು ಆಧರಿಸಿ ಎಫ್ಐಆರ್‌ ದಾಖಲಿಸಲಾಗಿದೆ. ಆದರೆ, ಸಾಮಾಜಿಕ ಕಾರ್ಯಕರ್ತನೆಂಬ ಹೆಸರಿನಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರು ಹಾಗೂ ಸಂತ್ರಸ್ತೆಯೆಂದು ಹೇಳಿ ಗೃಹ ಸಚಿವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಡಿಕೊಂಡ ಮನವಿಗಳನ್ನು ಆಧರಿಸಿ ಯಾವುದೇ ಎಫ್ಐಆರ್‌ ದಾಖಲಾಗಿಲ್ಲ.

ಇದನ್ನೂ ಓದಿ : ಸಿಂಧನೂರು ನಗರಸಭೆಯಲ್ಲಿ ಬಿಲ್‌ ಕಲೆಕ್ಟರ್‌ ಕೈ ಚಳಕ ಬಯಲು ­

ಸಂತ್ರಸ್ತೆಯ ಪೋಷಕರು ಸಹ ಬೆಳಗಾವಿಯ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುತ್ತಾರೆ. ಮಹಿಳಾ ಆಯೋಗವು ಸಂತ್ರಸ್ತೆಗೆ ರಕ್ಷಣೆ ನೀಡಲು ಆದೇಶಿಸಿದ್ದರೂ ಸಂತ್ರಸ್ತೆಯನ್ನು ಹುಡುಕಿ ರಕ್ಷಣೆ ನೀಡಿದಂತೆ ಕಾಣುತ್ತಿಲ್ಲ. ಎಸ್‌ಐಟಿಯ ಇದುವರೆಗಿನ ತನಿಖೆಯನ್ನು ನೋಡಿದರೆ ಸಿ.ಡಿ.ಪ್ರಚಾರವಾಗಲು ಕಾರಣಕರ್ತರು ಯಾರು ಎಂಬುದನ್ನು ಹುಡುಕುವ ಕಡೆಗೆ ತನಿಖೆ ಸಾಗುತ್ತಿದೆ ಎಂಬ ಅನುಮಾನ ಬರುತ್ತಿದೆ. ಸರಕಾರದ ವರ್ತನೆ ಪಾರದರ್ಶಕವಾಗಿಲ್ಲ ಮತ್ತು ನ್ಯಾಯಸಮ್ಮತವಾಗಿಲ್ಲ. ಸರಕಾರದ ನಿಲುವುಗಳ ವಿರುದ್ಧ ಮಾ. 19ರಂದು ಸದನದಲ್ಲಿ ಪ್ರಸ್ತಾವಿಸಲು ನಿಯಮ 60ರ ಮೇರೆಗೆ ನಿಲುವಳಿ ಸೂಚನೆ ಕೊಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರತಿಯನ್ನು ಸ್ಪೀಕರ್‌, ಸದನದ ನಾಯಕರಾದ ಮುಖ್ಯಮಂತ್ರಿಯವರು ಹಾಗೂ ಸಂಬಂಧಪಟ್ಟ ಸಚಿವರಿಗೂ ಕಳುಹಿಸಲಾಗಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.