ಭಜನಾ ಕಾರ್ಯಕ್ರಮ ರದ್ದು ಮಾಡಿ…ಇಲ್ಲದಿದ್ರೆ…ಮೆಲ್ಬೋರ್ನ್ ಕಾಳಿ ಮಾತಾ ಮಂದಿರಕ್ಕೆ ಬೆದರಿಕೆ
ಒಂದು ತಿಂಗಳ ಕಾರ್ಯಕ್ರಮ ನೆರವೇರಿಸಲು ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ.
Team Udayavani, Feb 16, 2023, 5:20 PM IST
ಮೆಲ್ಬೋರ್ನ್: ಒಂದು ವೇಳೆ ಭಜನಾ ಕಾರ್ಯಕ್ರಮವನ್ನು ರದ್ದುಗೊಳಿಸದಿದ್ದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ…ಇದು ಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿರುವ ಕಾಳಿ ಮಾತಾ ಮಂದಿರಕ್ಕೆ ಬಂದ ಬೆದರಿಕೆಯ ಕರೆ!
ಇದನ್ನೂ ಓದಿ:ಚಹಾ ಮಾರಿಕೊಂಡು ಕೋಟ್ಯಾಧಿಪತಿಯಾದ ಯುವಕನಿಂದ 90 ಲಕ್ಷ ಮೌಲ್ಯದ ಕಾರು ಖರೀದಿ : ಫೋಸ್ಟ್ ವೈರಲ್
ಆಸ್ಟ್ರೇಲಿಯಾ ಟುಡೇ ವರದಿ ಪ್ರಕಾರ, ಮೂರು ವಾರಗಳ ಹಿಂದೆಯೇ ಮುಂಬರುವ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮೆಲ್ಬೋರ್ನ್ ನಲ್ಲಿರುವ ಕಾಳಿ ಮಾತಾ ಮಂದಿರದಲ್ಲಿ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿ ಬೆದರಿಕೆ ಕರೆ ಬಂದಿರುವುದಾಗಿ ತಿಳಿಸಿದೆ.
ಬೆದರಿಕೆ ಕರೆಗೆ ಪ್ರತಿಕ್ರಿಯಿಸಿರುವ ಕಾಳಿ ಮಾತಾ ಮಂದಿರದ ಅರ್ಚನಾ ಅವರು, ದೇವಾಲಯದ ಆಡಳಿತ ಮಂಡಳಿ ಒಂದು ತಿಂಗಳ ಕಾರ್ಯಕ್ರಮ ನೆರವೇರಿಸಲು ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಅಲ್ಲದೇ ಅದಕ್ಕಾಗಿ ಭಕ್ತರ ಸಾಕಷ್ಟು ಹಣವನ್ನು ವಿನಿಯೋಗಿಸಲಾಗಿದೆ. ಆ ನಿಟ್ಟಿನಲ್ಲಿ ಭಜನಾ ಕಾರ್ಯಕ್ರಮ ರದ್ದುಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು.
ಆದರೆ ಕರೆ ಮಾಡಿದಾತ, ನನ್ನ ಕೆಲಸ ಎಚ್ಚರಿಕೆ ಕೊಡುವುದು ಮಾತ್ರವಾಗಿದೆ. ಒಂದು ವೇಳೆ ನನ್ನ ಮಾತನ್ನು ಕಡೆಗಣಿಸಿದರೆ, ನಾವು ಏನು ಮಾಡಲಿದ್ದೇವೆ ಎಂಬುದು ನಿಮಗೆ ತಿಳಿಯಲಿದೆ ಎಂದು ಬೆದರಿಕೆ ಹಾಕಿರುವುದಾಗಿ ಪತ್ರಿಕೆ ವರದಿ ಮಾಡಿದೆ.
ಬೆದರಿಕೆ ಕರೆಗೆ ಸಂಬಂಧಿಸಿದಂತೆ ಭಾವನಾ ಅವರು ಕ್ರೈಗ್ ಬರ್ನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಬ್ಬದ ವೇಳೆ ಸೂಕ್ತ ಭದ್ರತೆ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಸಾರ್ಜೆಂಟ್ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.
ಜನವರಿ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿನ ಶಿವ ವಿಷ್ಣು ದೇವಾಲಯದ ಮೇಲೆ ಹಿಂದೂ ವಿರೋಧಿ ಗೋಡೆ ಬರಹ ಬರೆದು ದೇವಾಲಯವನ್ನು ಧ್ವಂಸಗೊಳಿಸಲಾಗಿತ್ತು. ಒಂದು ವಾರದ ಮೊದಲು ಆಸ್ಟ್ರೇಲಿಯಾದ ಮಿಲ್ ಪಾರ್ಕ್ ನಲ್ಲಿದ್ದ ಸ್ವಾಮಿನಾರಾಯಣ ಮಂದಿರವನ್ನು ಒಡೆದು ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.