CBI: ಸಿಬಿಐ ಮುಕ್ತ ತನಿಖೆಯ ಅನುಮತಿ ಅಧಿಸೂಚನೆ ಹಿಂಪಡೆದ ರಾಜ್ಯ ಸಚಿವ ಸಂಪುಟ!

ಇದು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಕೈಗೊಂಡ ನಿರ್ಧಾರವಲ್ಲ...

Team Udayavani, Sep 26, 2024, 5:39 PM IST

CBI: ಸಿಬಿಐ ಮುಕ್ತ ತನಿಖೆಯ ಅನುಮತಿ ಅಧಿಸೂಚನೆ ಹಿಂಪಡೆದ ರಾಜ್ಯ ಸಚಿವ ಸಂಪುಟ!

ಬೆಂಗಳೂರು: ಸಿಬಿಐ (CBI) ತನಿಖಾ ದಳಕ್ಕೆ ರಾಜ್ಯದಲ್ಲಿ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್‌ ಪಡೆಯಲು ಗುರುವಾರ (ಸೆ.26) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್‌(HK Patil)  ತಿಳಿಸಿದ್ದಾರೆ.

ಮುಖ್ಯವಾಗಿ ಚುನಾವಣೆಗೂ ಮೊದಲು ಭಾರತೀಯ ಜನತಾ ಪಕ್ಷ ವಿಪಕ್ಷಗಳ ನಾಯಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ನೀಡುವ ಸೂಚನೆಯಂತೆ ಸಿಬಿಐ ಕಾರ್ಯಪ್ರವೃತ್ತವಾಗುತ್ತದೆ ಎಂದು ಪಾಟೀಲ್‌ ಆರೋಪಿಸಿದರು.

ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಲು ಈ ಹಿಂದೆ ಸರ್ಕಾರ ಅನುವು ಮಾಡಿಕೊಟ್ಟಿತ್ತು.

ಆದರೆ ನಾವೀಗ ರಾಜ್ಯದಲ್ಲಿ ಸಿಬಿಐಗೆ ನೀಡಿರುವ ಮುಕ್ತ ತನಿಖೆಯ ಅವಕಾಶವನ್ನು ಹಿಂಪಡೆದಿದ್ದೇವೆ. ಕೇಂದ್ರ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ನಾವು ನಮ್ಮ ಕಳವಳವನ್ನು ವ್ಯಕ್ತಪಡಿಸಿದ್ದೇವೆ. ಸಿಬಿಐ ಪಕ್ಷಪಾತಿ…ಹೀಗಾಗಿ ನಾವು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಚಿವ ಪಾಟೀಲ್‌ ಹೇಳಿದರು.

ಇದು ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಕೈಗೊಂಡ ನಿರ್ಧಾರವಲ್ಲ ಎಂದು ಎಚ್.ಕೆ.ಪಾಟೀಲ್‌ ತಿಳಿಸಿದರು. ನಾವು ಎಲ್ಲಾ ಪ್ರಕರಣವನ್ನು ಸಿಬಿಐಗೆ ಶಿಫಾರಸು ಮಾಡಿದ್ದೇವು. ಆದರೆ ಅವರು ಆರೋಪಪಟ್ಟಿಯನ್ನೇ ಈವರೆಗೂ ಸಲ್ಲಿಸಿಲ್ಲ. ಹಲವು ಪ್ರಕರಣಗಳು ಬಾಕಿ ಇದೆ. ನಾವು ಶಿಫಾರಸು ಮಾಡಿದ ಪ್ರಕರಣಗಳ ತನಿಖೆ ನಡೆಸಲು ನಿರಾಕರಿಸುತ್ತಿದೆ ಎಂದು ಪಾಟೀಲ್‌ ಹೇಳಿದರು.

ಈಗಾಗಲೇ ಸಿಬಿಐ ಮುಕ್ತ ತನಿಖೆ ಅವಕಾಶ ರದ್ದುಗೊಳಿಸಿದ ವಿಪಕ್ಷ ಆಡಳಿತ ಇರುವ ಪಶ್ಚಿಮಬಂಗಾಳ, ತಮಿಳುನಾಡು, ಕೇರಳ ರಾಜ್ಯದ ಸಾಲಿಗೆ ಕರ್ನಾಟಕ ಸೇರಿದಂತಾಗಿದೆ.

ಟಾಪ್ ನ್ಯೂಸ್

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

CID

Corruption Allegation: ಭೋವಿ ನಿಗಮ ಅಕ್ರಮ: ಲಂಚ ಪಡೆದ ತನಿಖಾಧಿಕಾರಿ ಅಮಾನತು

R.Ashok

MUDA Scam: ಸಿದ್ದರಾಮಯ್ಯಗೆ ಈಗ ಕಳ್ಳನ ಮನಸ್ಸು: ವಿಪಕ್ಷ ನಾಯಕ ಆರ್‌.ಅಶೋಕ್‌

Rain

Rain Alert: ಉಡುಪಿ, ಉತ್ತರ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.