ಸಿಡಿ ಪ್ರಕರಣ: ಐವರು ಟಿವಿ ಸಿಬಂದಿ ವಶಕ್ಕೆ


Team Udayavani, Mar 13, 2021, 7:20 AM IST

ಸಿಡಿ ಪ್ರಕರಣ: ಐವರು ಟಿವಿ ಸಿಬಂದಿ ವಶಕ್ಕೆ

ಬೆಂಗಳೂರು: ಜಾರಕಿಹೊಳಿ ಸಿ.ಡಿ. ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್‌ಐಟಿ) ಯುವತಿ ಸಹಿತ 5 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ಪೈಕಿ ನಾಲ್ವರು ಟಿ.ವಿ. ಮಾಧ್ಯಮ ಸಿಬಂದಿಯಾಗಿದ್ದು, ಯುವತಿ ರಾಮನಗರದವರು. ಈಕೆ ಸಂತ್ರಸ್ತೆಯ ವಾಸ್ತವ್ಯಕ್ಕೆ ನೆರವು ನೀಡಿದ್ದರು ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಯಶವಂತಪುರದಲ್ಲಿ ಟಿವಿ ಸಿಬಂದಿ, ಈತನ ಸ್ನೇಹಿತೆ ರಾಮನಗರದ ಯುವತಿ, ಚಿಕ್ಕಮಗಳೂರಿನಲ್ಲಿರುವ ಓರ್ವ ಟಿವಿ ಸಿಬಂದಿ, ವಿಜಯಪುರ ಮತ್ತು ಚಾಮರಾಜಪೇಟೆಯ ಇಬ್ಬರು ಯುವಕರನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ. ಪ್ರಕರಣದಲ್ಲಿ ಒಟ್ಟು 9 ಮಂದಿ ಶಾಮೀಲಾಗಿದ್ದಾರೆ, ಇನ್ನುಳಿದ ನಾಲ್ವರ ಸುಳಿವು ಸಿಕ್ಕಿದ್ದು, ಸದ್ಯವೇ ವಶಕ್ಕೆ ಪಡೆಯಲಾಗುವುದು ಎಂದು ಮೂಲಗಳು ತಿಳಿಸಿವೆ.

ವಿಜಯನಗರದ ಒಬ್ಬ ಟಿವಿ ಸಿಬಂದಿ ಶುಕ್ರವಾರ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಯಶವಂತಪುರದ ಬಳಿ ಆತನನ್ನು ಎಸ್‌ಐಟಿ ವಶಕ್ಕೆ ಪಡೆದಿದೆ. ಈತನೇ ದಿನೇಶ್‌ ಕಲ್ಲಹಳ್ಳಿಗೆ ಸಿಡಿ ಕೊಟ್ಟಿದ್ದ ಎನ್ನಲಾಗುತ್ತಿದೆ. ಈತ ನೀಡಿದ ಸುಳಿವಿನ ಮೇರೆಗೆ ರಾಮನಗರದ ಯುವತಿಯನ್ನು ವಶಕ್ಕೆ ಪಡೆಯಲಾಗಿದೆ. ಈಕೆ ಮತ್ತು ಸಿಡಿಯಲ್ಲಿದ್ದ ಸಂತ್ರಸ್ತೆ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು. ಈಕೆ ಸರಕಾರಿ ನೌಕರೆ ಎಂದು ತಿಳಿದು ಬಂದಿದೆ. ಬಳಿಕ ಚಾಮರಾಜಪೇಟೆಯ ಸೈಬರ್‌ ಪರಿಣತ ಯುವಕನೊಬ್ಬನನ್ನು ಬಲೆಗೆ ಬೀಳಿಸಿದ ಎಸ್‌ಐಟಿ, ಆತನಿಂದ ಹಲವು ಮಾಹಿತಿ ಕಲೆ ಹಾಕಿದೆ.

ಮತ್ತೂಬ್ಬ ಟಿವಿ ಸಿಬಂದಿಯನ್ನು ಚಿಕ್ಕಮಗಳೂರಿನ ಆಲ್ದೂರಿನಲ್ಲಿ ವಶಕ್ಕೆ ಪಡೆಯಲಾಗಿದೆ. ಈತ ವೆಬ್‌ ಸೀರಿಸ್‌ ಒಂದನ್ನು ಮಾಡುತ್ತಿದ್ದು, ಪ್ರಕರಣದಲ್ಲಿ ಇತರ ಆರೋಪಿಗಳಿಗೆ ಸಹಕರಿಸಿದ್ದ. ಈ ಸಿಡಿ ತಯಾರಿಸಿದ್ದ ಯುವಕನನ್ನು ವಿಜಯಪುರದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆ ತರಲಾಗಿದೆ.

ಎಫ್‌ಐಆರ್‌ ಯಾವಾಗ?
ಪ್ರಕರಣ ಸಂಬಂಧ ಇದುವರೆಗೂ ಪೊಲೀಸರು ಎಫ್‌ಐಆರ್‌ ದಾಖಲಿಸಿಲ್ಲ. ಎಸ್‌ಐಟಿ ಐವರನ್ನು ವಶಕ್ಕೆ ಪಡೆದಿದೆ. ಐವರ ವಿಚಾರಣೆ ಆಧರಿಸಿ ಸೂಕ್ಷ್ಮ ಪ್ರಕರಣ ಎಂದು ಪರಿಗಣಿಸಿ ಸೈಬರ್‌ ಠಾಣೆಯಲ್ಲಿ ಸುಮೋಟೋ ದಾಖಲಿಸಿಕೊಳ್ಳಬಹುದು. ಇಲ್ಲವಾದಲ್ಲಿ ಸಂತ್ರಸ್ತೆಯನ್ನು ಪತ್ತೆ ಹಚ್ಚಿ ಆಕೆಯಿಂದ ದೂರು ಪಡೆಯಬಹುದು. ಅಥವಾ ಮಾಜಿ ಸಚಿವರ ಮೂಲಕ ದೂರು ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಹೈಕಮಾಂಡ್‌ ಅಂಗಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ದಿಲ್ಲಿಗೆ ತೆರಳಿದ್ದಾರೆ.

ಎಸ್‌ಐಟಿ ತಂಡದಲ್ಲಿ ಯಾರ್ಯಾರು?
ಸೌಮೇಂದು ಮುಖರ್ಜಿ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಸಿಸಿಬಿ ಕಮಿಷನರ್‌ ಸಂದೀಪ್‌ ಪಾಟೀಲ್‌, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್‌.ಅನುಚೇತ್‌, ಸಿಸಿಬಿ ಡಿಸಿಪಿ ಕೆ.ಪಿ. ರವಿಕುಮಾರ್‌, ಎಸಿಪಿ ಧರ್ಮೇಂದ್ರ, ಕಬ್ಬನ್‌ ಪಾರ್ಕ್‌ ಠಾಣೆ ಇನ್‌ಸ್ಪೆಕ್ಟರ್‌ ಬಿ.ಮಾರುತಿ ಮತ್ತು ಡಿ.ಎಂ.ಪ್ರಶಾಂತ್‌ ಬಾಬು ಹಾಗೂ ಸಿಬಂದಿ ತಂಡದಲ್ಲಿದ್ದಾರೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.