![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 10, 2021, 6:15 AM IST
ಹೊಸದಿಲ್ಲಿ: ಟ್ವಿಟರ್, ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ದೇಶ ವಿದ್ರೋಹಿ ಪೋಸ್ಟ್ಗಳ ಮೇಲೆ ಹದ್ದಿನ ಕಣ್ಣಿಡಲು ಜನರನ್ನೇ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ “ಸೈಬರ್ ಕ್ರೈಮ್ ಸ್ವಯಂ ಸೇವಕರಾಗಿ ಬನ್ನಿ’ ಎಂದು ಜನರಿಗೆ ಕರೆ ನೀಡಿದೆ. ಇದರಲ್ಲಿ ಸ್ವಯಂ ಸೇವಕರಾಗುವವರು ಮಹಿಳೆಯರು, ಮಕ್ಕಳ ವಿರುದ್ಧದ ಕೆಟ್ಟ ರೀತಿಯ ಪೋಸ್ಟ್ಗಳು ಹಾಗೂ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತೆ ಪೋಸ್ಟ್ಗಳ ಬಗ್ಗೆ ಸರಕಾರಕ್ಕೆ ವರದಿ ಮಾಡಬಹುದಾಗಿದೆ. ಕಳೆದ ವಾರವಷ್ಟೇ ಇಂಥದ್ದೊಂದು ಯೋಜನೆಯನ್ನು ಜಮ್ಮು ಕಾಶ್ಮೀರದಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಇದೀಗ ಇದೇ ರೀತಿಯ ಯೋಜನೆಯನ್ನು ದೇಶಾದ್ಯಂತ ಜಾರಿಗೊಳಿಸಲು ಕೇಂದ್ರ ಸರಕಾರವೇ ಮುಂದಾಗಿದೆ. ಈ ಯೋಜನೆಗೆ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್ ಎಂದು ಕರೆಯಲಾಗಿದೆ.
ಕೂ ಬಳಕೆಗೆ ಪಿಯೂಷ್ ಸಲಹೆ
ದೇಶ ವಿರೋಧಿ ಟ್ವಿಟರ್ ಖಾತೆಗಳನ್ನು ಸ್ಥಗಿತ ಮಾಡುವ ವಿಚಾರದಲ್ಲಿ ಕೇಂದ್ರ ಸರಕಾರ ಮತ್ತು ಟ್ವಿಟರ್ ಸಂಸ್ಥೆ ನಡುವೆ ಹಗ್ಗ ಜಗ್ಗಾಟ ನಡೆದಿದ್ದು, ಇದರ ನಡುವೆಯೇ ಟ್ವಿಟರ್ನಂತೆಯೇ ಇರುವ ದೇಸಿ ಆ್ಯಪ್ “ಕೂ’ ಬಳಕೆಗೆ ಸ್ವತಃ ಕೇಂದ್ರ ಸಚಿವರೇ ಸಲಹೆ ನೀಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರೈಲ್ವೆ ಸಚಿವ ಪಿಯೂಶ್ ಗೋಯಲ್, ಕೂ ಆ್ಯಪ್ ಬಳಕೆ ಮಾಡುತ್ತಿರುವುದಕ್ಕೆ ಸಂತಸವಾಗುತ್ತಿದೆ. ಉತ್ತಮ ಅಪ್ಡೇಟ್ಗಳೂ ಸಿಗುತ್ತಿವೆ. ಈ ಮೈಕ್ರೋ ಬ್ಲಾಗಿಂಗ್ ಸೈಟ್ ಮೂಲಕ ನನ್ನನ್ನು ಸಂಪರ್ಕಿಸಿ ಎಂದಿದ್ದಾರೆ. ವಿಶೇಷವೆಂದರೆ, ಕೇಂದ್ರ ಸರಕಾರ 2020ರ ಆಗಸ್ಟ್ನಲ್ಲಿ ನಡೆಸಿದ ಸ್ವದೇಶಿ ಆ್ಯಪ್ಗಳ ಸ್ಪರ್ಧೆಯಲ್ಲಿ ಕೂ ಬಹುಮಾನ ಗಳಿಸಿತ್ತು. ಬೆಂಗಳೂರು ಮೂಲದ ನವೋದ್ಯಮವೊಂದು ಇದನ್ನು ರೂಪಿಸಿದ್ದು, ಸ್ಥಳೀಯ ಭಾಷೆಗಳಲ್ಲೂ ಸೇವೆ ನೀಡುತ್ತಿದೆ. ಅಲ್ಲದೆ, ತನ್ನ ಪೇಜ್ನಲ್ಲಿಯೇ ಭಾರತೀಯರಿಗಾಗಿ ಈ ಆ್ಯಪ್ ಅನ್ನು ಸೃಷ್ಟಿಸಲಾಗಿದ್ದು, ಜನರು ಅವರವರ ಮಾತೃ ಭಾಷೆಯಲ್ಲೇ ತಮ್ಮ ಭಾವನೆ ವ್ಯಕ್ತಪಡಿಸಬಹುದಾಗಿದೆ ಎಂದು ಬರೆದುಕೊಂಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.