ಚಂದ್ರು ಕೊಲೆ : ವಿವಾದದ ಬಳಿಕ ‘ನನ್ನಿಂದ ತಪ್ಪು ಹೇಳಿಕೆ’ ಎಂದ ಆರಗ ಜ್ಞಾನೇಂದ್ರ
ಹತ್ಯೆ ಕುರಿತು ಪೋಲೀಸರ ಹೇಳಿಕೆಯೇ ಭಿನ್ನ
Team Udayavani, Apr 6, 2022, 2:30 PM IST
ಬೆಂಗಳೂರು : ಗೋರಿಪಾಳ್ಯದಲ್ಲಿ ನಡೆದ ಹಿಂದೂ ಯುವಕ ಚಂದ್ರು ಕೊಲೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆಗಳು ಈಗ ಗೊಂದಲಕ್ಕೆ ಕಾರಣವಾಗಿರುವುದು ಮಾತ್ರವಲ್ಲ, ವಿವಾದವನ್ನೂ ಸೃಷ್ಟಿಸಿದೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಚಂದ್ರು ಹತ್ಯೆ ಆಗಿದೆ.ಮಾಹಿತಿ ತೆಗೆದುಕೊಂಡಿದ್ದೇನೆ.ಉರ್ದು ಮಾತಾಡೋಕೆ ಹೇಳಿದ್ದರು. ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಅನ್ನುವ ಕಾರಣಕ್ಕೆ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ. ಆ ಹುಡುಗ ದಲಿತ ಸಮುದಾಯಕ್ಕೆ ಸೇರಿದವನು.ಪ್ರಕರಣ ಸಂಬಂಧ,ಪೊಲೀಸರು ಕೆಲವರನ್ನ ಬಂಧಿಸಿದ್ದಾರೆ ಎಂದು ಹೇಳಿದ್ದರು.
ಆದರೆ ಘಟನೆ ಸಂಬಂಧ ಬೆಂಗಳೂರು ಪೊಲೀಸ್ ಆಯುಕ್ತರು ಬೇರೆಯದೇ ಹೇಳಿಕೆ ನೀಡಿದ್ದರು. ದ್ವಿಚಕ್ರ ವಾಹನ ಅಪಘಾತ ಹಿನ್ನೆಲೆಯಲ್ಲಿ ನಡೆದ ವಿವಾದ ಕೊಲೆಗೆ ಕಾರಣ ಎಂದು ಟ್ವೀಟ್ ಮಾಡಿದ್ದರು. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದರು.
ಎಲ್ಲದಕ್ಕಿಂತ ಹೆಚ್ಚಾಗಿ ಗೃಹ ಸಚಿವ ಅಧಿಕೃತ ಮಾಧ್ಯಮ ವಾಟ್ಸಾಪ್ ಗ್ರೂಪ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗಿದ್ದ ಯುವಕರು, ಸಣ್ಣ ಅಪಘಾತ ಸಂಬಂಧ ಮಾತಿಗೆ ಮಾತು ಬೆಳೆದು, ಘರ್ಷಣೆ ನಡೆದಿದೆ. ಒಬ್ಬ ಯುವಕ, ತೊಡೆ ಮೇಲಿನ ಚೂರಿ ಇರಿತದಿಂದ, ತೀವ್ರ ಗಾಯಗೊಂಡು, ಮೃತಪಟ್ಟಿದ್ದಾನೆ.ಈ ಸಂಬಂಧ ಪೊಲೀಸರು ಮೂವರು, ಯುವಕರನ್ನು ವಶ ಪಡೆದಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ವಿವಾದ ಮುಗಿಲುಮುಟ್ಟುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಗೃಹ ಸಚಿವರು ”ನನ್ನಿಂದ ತಪ್ಪು ಹೇಳಿಕೆ ವ್ಯಕ್ತವಾಗಿದೆ. ಆರಂಭಿಕ ಮಾಹಿತಿ ಹಿನ್ನೆಲೆಯಲ್ಲಿ ಹೇಳಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ : ಚಂದ್ರು ಹತ್ಯೆ: ಆರಗ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ
ಹಿಂದೂಪರ ಸಂಘಟನೆಗಳಿಂದ ಮುಸ್ಲಿಂ ವ್ಯಾಪಾರ ನಿರ್ಬಂಧ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ, ಅಲ್ಲಲ್ಲಿ ಅನೇಕ ಹೇಳಿಕೆಗಳು ಬರುತ್ತಿವೆ.ಹಿಜಾಬ್ನಿಂದ ಪ್ರಾರಂಭವಾಗಿ ಬೇರೆ ಬೇರೆ ವಿಚಾರಗಳ ಚರ್ಚೆ ನಡೀತಿದೆ.ಇವುಗಳಿಂದ ಕಾನೂನು ಸುವ್ಯವಸ್ಥೆ ಗೆ ಭಂಗ ಬಂದರೆ ಗೃಹ ಇಲಾಖೆಯಿಂದ ಕ್ರಮ ತೆಗೆದುಕೊಳ್ಳಲಾಗುತ್ತದೆ.ಸರ್ಕಾರ, ಗೃಹ ಇಲಾಖೆ ಎಲ್ಲದರ ಮೇಲೆ ಕಣ್ಣಿಟ್ಟಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.