![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 28, 2022, 1:37 PM IST
ಸುಕ್ಮಾ: ಛತ್ತೀಸ್ಗಢದ ಅತ್ಯಂತ ಹೆಚ್ಚು ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ನಾಲ್ವರು ಮಹಿಳಾ ಕಾರ್ಯಕರ್ತರು ಸೇರಿದಂತೆ ಹತ್ತೊಂಬತ್ತು ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
“ಅಮಾನವೀಯ” ಮತ್ತು “ಸುಳ್ಳು” ಮಾವೋವಾದಿ ಸಿದ್ಧಾಂತದ ಬಗ್ಗೆ ನಿರಾಶೆಯನ್ನು ಹೊಂದಿ, ಭಾನುವಾರ ಸಂಜೆ ಜಿಲ್ಲೆಯ ಭೆಜ್ಜಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಮತ್ತು ಸಿಆರ್ಪಿಎಫ್ ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಲ್ಲಾ ಬಂಡುಕೋರರು ಭೆಜ್ಜಿ ಪ್ರದೇಶದ ಬೋಧರಾಜಪದರ್ ಗ್ರಾಮದಿಂದ ಬಂದವರು ಮತ್ತು ಕಾನೂನುಬಾಹಿರ ಮಾವೋವಾದಿ ಚಳುವಳಿಯ ಕೆಳ ಹಂತದ ಕಾರ್ಯಕರ್ತರಾಗಿ ಸಕ್ರಿಯರಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ರಾಜಧಾನಿ ರಾಯ್ಪುರದಿಂದ 400 ಕಿ.ಮೀ ದೂರದಲ್ಲಿರುವ ಪೊಲೀಸ್ ಠಾಣೆಯನ್ನು ತಲುಪಿದಾಗ ಹೆಚ್ಚಿನ ಸಂಖ್ಯೆಯ ಸ್ಥಳೀಯರು ಅವರೊಂದಿಗೆ ಇದ್ದರು ಎಂದು ಅವರು ಹೇಳಿದ್ದಾರೆ.
ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ಬಂಡುಕೋರರು ನಕ್ಸಲರಿಗಾಗಿ ಜಿಲ್ಲಾ ಪೋಲೀಸರ ಪುನರ್ವಸತಿ ಅಭಿಯಾನದಿಂದ ‘ಪುನಾ ನಾರ್ಕೋಮ್’ (ಸ್ಥಳೀಯ ಗೊಂಡಿ ಉಪಭಾಷೆಯಲ್ಲಿ ರಚಿಸಲಾಗಿದ್ದು, ಇದರರ್ಥ ಹೊಸ ಆರಂಭ) ಆಕರ್ಷಿತರಾಗಿದ್ದಾರೆ ಎಂದು ಅವರು ಹೇಳಿದರು,
ಛತ್ತೀಸ್ಗಢ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯ ಪ್ರಕಾರ ಅವರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.