ಹುಣಸೂರು :ಬಾಲ್ಯವಿವಾಹ, ಅಸ್ಪೃಶ್ಯತೆ ಬಗ್ಗೆ ಹಾಡಿ-ಕಾಲೇಜುಗಳಲ್ಲಿ ಜಾಗೃತಿ

ಹೆಣ್ಣುಮಕ್ಕಳಿಗೆ ಕಿರುಕುಳ ನೀಡಿದರೆ ಕಠಿಣ ಕ್ರಮ : ಎಸ್.ಪಿ ಆರ್ ಚೇತನ್

Team Udayavani, Apr 7, 2022, 12:27 PM IST

1-fdsfdf

ಹುಣಸೂರು : ಹನಗೋಡು ಭಾಗದಲ್ಲಿ ಬಾಲ್ಯವಿವಾಹ, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಮಾಹಿತಿ ಇದ್ದು, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಕಿಡಿಗೇಡಿಗಳ ಮಟ್ಟಹಾಕಲು ಕಠಿಣ ಕ್ರಮವಹಿಸಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಆರ್.ಚೇತನ್ ತಿಳಿಸಿದರು.

ಬುಧವಾರ ಸಂಜೆ ಗ್ರಾಮಾಂತರ ಪೊಲೀಸ್‌ಠಾಣಾ ಆವರಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿದ ಅವರು ಹನಗೋಡು ಭಾಗದಲ್ಲಿ ಆದಿವಾಸಿಗಳು ಹೆಚ್ಚಿದ್ದು, ಬಾಲ್ಯ ವಿವಾಹ ಹೆಚ್ಚಿದೆ ಹಾಗೂ ಇಲ್ಲಿನ ಶಾಲಾ-ಕಾಲೇಜು ಹೆಣ್ಣುಮಕ್ಕಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ದೂರಿದ್ದು, ಅಸ್ಪೃಶ್ಯತೆ ನಿವಾರಣೆ ಸಂಬಂಧ ಉಪನ್ಯಾಸ ಮತ್ತು ಬೀದಿ ನಾಟಕದ ಮೂಲಕ ಕಾಯ್ದೆ ಮತ್ತು ರಕ್ಷಣೆ ಕುರಿತು ಜಾಗೃತಿ ಮೂಡಿವ ಜೊತೆಗೆ ಕಿಡಿಗೇಡಿಗಳ ಮೇಲೆ ನಿಗಾ ಇಡಲಾಗುವುದು.

ಹನಗೋಡಿನ ಔಟ್‌ಪೋಸ್ಟ ನ್ನು ಕಾಯಂಗೊಳಿಸಲು ಕ್ರಮವಹಿಸಲಾಗುವುದು. ಗದ್ದಿಗೆ ಭಾಗಕ್ಕೆ ಔಟ್‌ಪೋಸ್ಟ್ ಬೇಡಿಕೆ ಇದೆ. ಗದ್ದಿಗೆ ಹಾಗೂ ಕಟ್ಟೆಮಳಲವಾಡಿಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು ಎಂದರು.

112 ಕ್ಕೆ ದೂರು ನೀಡಿ

ಗ್ರಾಮಗಳಲ್ಲಿ ಗಾಂಜಾಬೆಳೆ, ಅಕ್ರಮ ಮದ್ಯ ಮಾರಾಟ, ಗಲಾಟೆ, ಘರ್ಷಣೆ, ಮೋಟಾರ್-ಸ್ಟಾಟರ್, ಜಾನುವಾರುಗಳ ಕಳ್ಳತನ ಮತ್ತಿತರ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ೧೧೨ಕ್ಕೆ ಕರೆಮಾಡಿದಲ್ಲಿ ತಕ್ಷಣ ಸ್ಪಂದಿಸಲು ಸಾದ್ಯ, ಅಲ್ಲದೆ ಠಾಣೆಗಳಲ್ಲಿ ಸಿಬ್ಬಂದಿಗಳು ಅನುಚಿತವಾಗಿ ನಡೆದುಕೊಂಡಲ್ಲಿ ಮೇಲ್ಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಿರೆಂದು ಸಲಹೆ ನೀಡಿದರು.

ಒಕ್ಕಣೆ ತಡೆಗೆ ಕ್ರಮ

ರಸ್ತೆಗಳಲ್ಲಿ ಒಕ್ಕಣೆ ಮಾಡುವುದನ್ನು ತಡೆಗಟ್ಟಲಾಗುವುದು. ಹೆಚ್ಚು ಅಪಘಾತ ಸಂಭವಿಸುವ ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು.

ದೂರು ಪೆಟ್ಟಿಗೆ

ಎಲ್ಲಾ ಶಾಲಾ ಕಾಲೇಜುಗಳಲ್ಲಿ ದೂರು ಪೆಟ್ಟಿಗೆ ಇಡುವಂತೆ ಆಯಾ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚಿಸುವಂತೆ ಇನ್ಸ್ಪೆಕ್ಟರ್‌ಗಳಿಗೆ ಸೂಚಿಸಿದರು.

ವಾಹನಗಳ ಮೇಲೆ ಕ್ರಮವಾಗಲಿ

ಹನಗೋಡು ಸೊಸೈಟಿ ಅಧ್ಯಕ್ಷ ಹನುಮ ಮಾತನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಚಾಲನಾ ಪರವಾನಗಿ, ವಿಮೆ ಇಲ್ಲದ ಟ್ರ್ಯಾಕ್ಟರ್, ಆಟೋ ಹಾಗೂ ದ್ವಿಚಕ್ರವಾಹನಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕೆಂದು ಹಾಗೂ ದಲಿತ ಮುಖಂಡ ನಿಂಗರಾಜಮಲ್ಲಾಡಿ ಆಗಾಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಸ್.ಸಿ-ಎಸ್.ಟಿ.ಕುಂದುಕೊರತೆ ಸಭೆಯನ್ನು ನಡೆಸುವಂತೆ ಕೋರಿದರು.

ಸಭೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಹೊಸೂರುಕುಮಾರ್, ಗಣಪತಿ, ತಗಡಯ್ಯ, ಹೊಂಬೇಗೌಡ, ಮಹದೇವ್, ತೊಂಡಾಳುಶಂಕರ್ , ಮಹದೇವಮ್ಮ, ನಾಗೇಶ್, ಗಜೇಂದ್ರ, ಇಮ್ನಿಯಾಜ್‌ ಪಾಷಾ, ಪ್ರಕಾಶ್ ಸೇರಿದಂತೆ ಅನೇಕರು ಸಮಸ್ಯೆಗಳನ್ನು ಪ್ರತಿಬಿಂಬಿಸಿದರು. ಡಿವೈಎಸ್‌ಪಿ ರವಿಪ್ರಸಾದ್, ಇನ್ಸ್ಪೆಕ್ಟರ್‌ಗಳಾದ ರವಿ,ಚಿಕ್ಕಸ್ವಾಮಿ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.