ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ನಾಗರಿಕರ ಆಗ್ರಹ


Team Udayavani, Mar 13, 2021, 4:00 AM IST

ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ನಾಗರಿಕರ ಆಗ್ರಹ

ಮಲ್ಪೆ: ಉಡುಪಿ ನಗರಸಭಾ ವ್ಯಾಪ್ತಿಯ ಕಲ್ಮಾಡಿ ಬೊಟ್ಟಲ ಬಗ್ಗುಮುಂಡ ಪರಿಸರದಲ್ಲಿ ಪ್ರತೀ ಹುಣ್ಣಿಮೆ, ಅಮಾವಾಸ್ಯೆ ಸಂದರ್ಭದಲ್ಲಿ ಕೆಲವು ದಿನಗಳವರೆಗೆ ಉಪ್ಪು ನೀರು ಮೇಲೆ ಬಂದು ಗದ್ದೆಗಳಿಗೆ ನುಗ್ಗುವುದರಿಂದ ಈ ಭಾಗದ ರೈತರ ಕೃಷಿ ಕಾರ್ಯಕ್ಕೆ ಸಮಸ್ಯೆಯಾಗುತ್ತಿದ್ದು ಭೂಮಿ ಇದ್ದರೂ ಕೃಷಿ ಮಾಡಲಾಗದೇ ಹಡಿಲು ಬಿಡುವ ಪರಿಸ್ಥಿತಿ ಎದುರಾಗಿದೆ.

ಸಮರ್ಪಕ ತಡೆಗೋಡೆ ಇಲ್ಲ
ಇಲ್ಲಿನ ಪಾಪನಾಶಿನಿ ನದಿಗೆ ಹೊಂದಿ ಕೊಂಡಿರುವ ತೋಡಿನಲ್ಲಿ ಭರತದ ಸಮಯದಲ್ಲಿ ನೀರು ಉಕ್ಕಿ ಸಮೀಪದ ಗದ್ದೆಗೆ ಹರಿದು ಬರುತ್ತಿದ್ದ ಪರಿಣಾಮ ಪರಿಸರದ ಗದ್ದೆ ಸಂಪೂರ್ಣ ಉಪ್ಪು ನೀರಿನ ಅಂಶವನ್ನು ಹೀರಿದೆ. ಈ ಭಾಗದಲ್ಲಿ ಸಮರ್ಪಕವಾದ ತಡೆಗೋಡೆ ಇಲ್ಲದೆ ಉಪ್ಪು ನೀರು ಗದ್ದೆಗೆ ಹರಿದು ಬರುತ್ತಿದೆ.

ಈ ಹಿಂದೆ ಉಪ್ಪು ನೀರು ಗದ್ದೆಗೆ ನುಗ್ಗಿದಾಗ ಇಲಾಖಾಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದರು. ಆದರೆ ಯಾವುದೇ ಶಾಶ್ವತ ಪರಿಹಾರವನ್ನು ಒದಗಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.

ಕುಡಿಯುವ ನೀರಿಗೂ ಸಂಕಷ್ಟ
ಉಪ್ಪು ನೀರಿನ ಹಾವಳಿಗೆ ಕೇವಲ ಕೃಷಿ ಭೂಮಿ ಹಾಳಾಗಿಲ್ಲ. ಈ ಪ್ರದೇಶದ ಮನೆಯ ಬಾವಿಯ ನೀರು ಉಪ್ಪಾಗಿ ಇಲ್ಲಿನವರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಲ್ಲಿನ ಬಗ್ಗುಪಂಜುರ್ಲಿ ದೈವಸ್ಥಾನದ ಬಾವಿ ನೀರು ಹಾಳಾಗಿದ್ದು ದೈವದ ಕೆಲಸಕ್ಕೂ ಬಳಸಲಾಗುತ್ತಿಲ್ಲ ಎನ್ನಲಾಗಿದೆ.

ಶೀಘ್ರ ಕ್ರಮ ಕೈಗೊಳ್ಳಿ
ಈ ಹಿಂದೆ ಪ್ರತೀ ವರ್ಷ ಭತ್ತ, ಧಾನ್ಯ ಮತ್ತು ತರಕಾರಿ ಬೆಳೆಯನ್ನು ಬೆಳೆಸಲಾಗುತ್ತಿತ್ತು. ಆದರೆ ಇತ್ತೀಚಿನ ವರ್ಷದಲ್ಲಿ ಕೃಷಿ ಭೂಮಿಗೆ ಉಪ್ಪು ನೀರು ನುಗ್ಗುವುದರಿಂದ ಕೃಷಿಗೆ ಆಯೋಗ್ಯವಾಗಿದೆ. ಇದರಿಂದ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ಸಂಬಂಧಪಟ್ಟ ಆಡಳಿತಕ್ಕೆ ಅದೆಷ್ಟು ಬಾರಿ ಮನವಿ ಮಾಡಿದರೂ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಉಪ್ಪು ನೀರಿನ ತಡೆಯುವಿಕೆಗೆ ಸರಿಯಾದ ಕ್ರಮ ಕೈಗೊಳ್ಳಬೇಕು. -ಚಂದ್ರಶೇಖರ್‌ ಬಗ್ಗುಮನೆ, ಸ್ಥಳೀಯರು

ಕಾಮಗಾರಿ ಶೀಘ್ರ ಆರಂಭ
ಸಣ್ಣ ನೀರಾವರಿ ಇಲಾಖೆಯಿಂದ ಈಗಾಗಲೇ 3 ಕೋ. ರೂ ವೆಚ್ಚದ ತಡೆಗೋಡೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿ ಗುತ್ತಿಗೆದಾರರಿಗೆ ಟೆಂಡರ್‌ ನೀಡಲಾಗಿದೆ. ಕಲ್ಮಾಡಿ ಗರೋಡಿಯಿಂದ ಬಗ್ಗುಮುಂಡದವರೆಗೆ ನದಿ ದಂಡೆ ಕಾಮಗಾರಿ ಅತೀ ಶೀಘ್ರದಲ್ಲಿ ಆರಂಭವಾಗಲಿದೆ.
-ಸುಂದರ್‌ ಜೆ. ಕಲ್ಮಾಡಿ, ನಗರಸಭಾ ಸದಸ್ಯರು, ಕಲ್ಮಾಡಿ ವಾರ್ಡ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.