ಸಿಜೆಐ ಟ್ರೋಲಿಂಗ್‌: ಕೇಂದ್ರ ಸರಕಾರದ ಮೌನ ಪ್ರಶ್ನಾರ್ಹ


Team Udayavani, Mar 18, 2023, 7:25 AM IST

chandrachud

ದೇಶದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನು ಗುರಿಯಾಗಿಸಿ ತೀರಾ ಅವಹೇಳನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ ಮಾಡಲಾಗಿರುವುದರ ವಿರುದ್ಧ ದೇಶದೆಲ್ಲೆಡೆಯಿಂದ ಖಂಡನೆ ವ್ಯಕ್ತವಾಗಿದೆ. ಅಷ್ಟು ಮಾತ್ರವಲ್ಲದೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರಸ್ತಂಭಗಳಲ್ಲಿ ಒಂದಾಗಿರುವ ನ್ಯಾಯಾಂಗವನ್ನೇ ನೇರವಾಗಿ ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳ ಮೂಲಕ ದಾಳಿ ನಡೆಸಲಾಗಿದ್ದರೂ ಕೇಂದ್ರ ಸರಕಾರ ಮಾತ್ರ ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿರುವುದು ಒಂದಿಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಈ ಪ್ರಕರಣದ ಸಂಬಂಧ ವಿಪಕ್ಷಗಳ ನಾಯಕರು ಈಗ ರಾಷ್ಟ್ರಪತಿಗಳಿಗೆ ಪತ್ರವೊಂದನ್ನು ಬರೆದು ಸಿಜೆಐ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಆನ್‌ಲೈನ್‌ ಟ್ರೋಲಿಂಗ್‌ ಮಾಡಿರುವವರ ವಿರುದ್ಧ ತತ್‌ಕ್ಷಣ ಕ್ರಮ ಕೈಗೊಳ್ಳುವಂತೆ ಆದೇಶಿಸಲು ಆಗ್ರಹಿಸಿದ್ದಾರೆ.

ಇದು ಸಿಜೆಐ ಮತ್ತು ನ್ಯಾಯಾಂಗ ಪ್ರಕ್ರಿಯೆ ಮೇಲಣ ನೇರ ಹಸ್ತಕ್ಷೇಪವಾಗಿದ್ದು, ಇಂಥ ಬೆಳವಣಿಗೆಗಳು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ದೇಶದ ನ್ಯಾಯಾಂಗ ವ್ಯವಸ್ಥೆಗೆ ತನ್ನದೇ ಆದ ಘನತೆ, ಗೌರವವಿದ್ದು ಇಂಥ ಟ್ರೋಲ್‌ಗ‌ಳು ಇಡೀ ನ್ಯಾಯದಾನದ ಪ್ರಕ್ರಿಯೆಯ ಮೇಲೆ ಸವಾರಿ ಮಾಡಿದಂತೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಅಲ್ಲದೆ ಪತ್ರದ ಪ್ರತಿಗಳನ್ನು ಕಾನೂನು ಸಚಿವರು, ಐಟಿ ಸಚಿವರು ಹಾಗೂ ದಿಲ್ಲಿ ಪೊಲೀಸ್‌ ಆಯುಕ್ತರಿಗೂ ಸಲ್ಲಿಸಲಾಗಿದೆ. ಇದೇ ವೇಳೆ ದೇಶದ ಅಟಾರ್ನಿ ಜನರಲ್‌ ಅವರಿಗೂ ಈ ಸಂಬಂಧ ಪ್ರತ್ಯೇಕ ಪತ್ರವೊಂದನ್ನು ಬರೆದು ಈ ಬಗ್ಗೆ ಅವರ ಗಮನ ಸೆಳೆಯಲಾಗಿದೆ.

ಕಳೆದ ವರ್ಷ ಮಹಾರಾಷ್ಟ್ರದಲ್ಲಿನ ಶಿವಸೇನೆ-ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ ಅಘಾಡಿ ಸರಕಾರದ ಅಂಗಪಕ್ಷವಾಗಿದ್ದ ಶಿವಸೇನೆಯಲ್ಲಿನ ಭಿನ್ನಮತ ತಾರಕಕ್ಕೇರಿದ ಸಂದರ್ಭದಲ್ಲಿ ಅಂದಿನ ರಾಜ್ಯಪಾಲರು ಮೈತ್ರಿ ಸರಕಾರಕ್ಕೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸೂಚನೆ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸಿಜೆಐ ಡಿ.ವೈ.ಚಂದ್ರಚೂಡ್‌ ನೇತೃತ್ವದ ಸಂವಿಧಾನ ಪೀಠ ಬುಧವಾರದಂದು ಆಗಿನ ರಾಜ್ಯಪಾಲರ ನಡೆಯ ಬಗೆಗೆ ಕೆಲವೊಂದು ಪ್ರಶ್ನೆಗಳನ್ನು ಎತ್ತಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಆನ್‌ಲೈನ್‌ ಟ್ರೋಲ್‌ ತಂಡವೊಂದು ಸಿಜೆಐ ಅವರನ್ನು ಗುರಿಯಾಗಿಸಿ ಟ್ರೋಲಿಂಗ್‌ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾದ ಹೇಳಿಕೆ ವ್ಯಾಪಕವಾಗಿ ಟ್ರೋಲಿಂಗ್‌ಗೆ ಒಳಗಾಗಿತ್ತು. ಇದೊಂದು ಗಂಭೀರ ಪ್ರಕರಣವಾದರೂ ತನಿಖಾ ಸಂಸ್ಥೆಗಳಾಗಲಿ, ಸರಕಾರವಾಗಲಿ ಯಾವುದೇ ಕ್ರಮಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ವಿಪಕ್ಷಗಳು ರಾಷ್ಟ್ರಪತಿಯವರ ಕದ ತಟ್ಟಿವೆ.

ರಾಷ್ಟ್ರೀಯ ನ್ಯಾಯಾಂಗ ಆಯೋಗ ಮಸೂದೆಯನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿದಾಗಿನಿಂದ ಸುಪ್ರೀಂ ಕೋರ್ಟ್‌ ಮತ್ತು ಕೇಂದ್ರ ಸರಕಾರದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಬಂದಿದೆ. ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರ ನೇಮಕದ ವಿಚಾರದಲ್ಲಿ ಇತ್ತಂಡಗಳ ನಡುವೆ ಸಾಕಷ್ಟು ಹಗ್ಗಜಗ್ಗಾಟ ನಡೆದಿತ್ತು. ಕೊನೆಗೆ ತಿಂಗಳ ಹಿಂದೆಯಷ್ಟೇ ಕೊಲೀಜಿಯಂ ಶಿಫಾರಸು ಮಾಡಿದ ನ್ಯಾಯಾಧೀಶರ ಹೆಸರುಗಳಿಗೆ ಕೇಂದ್ರವು ಸಮ್ಮತಿಯನ್ನು ಸೂಚಿಸುವ ಮೂಲಕ ವಿವಾದ ಒಂದಿಷ್ಟು ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಕೊಲೀಜಿಯಂ ವಿಚಾರವಾಗಿ ಕಾನೂನು ಸಚಿವರು ತಮ್ಮ ಹಿಂದಿನ ವಾದವನ್ನು ಮುನ್ನೆಲೆಗೆ ತಂದಿದ್ದಾರೆ.

ನ್ಯಾಯಾಂಗ ಮತ್ತು ಶಾಸಕಾಂಗದ ನಡುವಣ ವಿವಾದ, ತಿಕ್ಕಾಟಗಳು ಇಂದು- ನಿನ್ನೆಯದಾಗಿರದೆ ಇದಕ್ಕೆ ದಶಕಗಳ ಇತಿಹಾಸವಿದೆ. ಆದರೆ ಸಿಜೆಐ ಅವರನ್ನೇ ಗುರಿಯಾಗಿಸಿ ಅವಮಾನಕಾರಿಯಾಗಿ ಟ್ರೋಲಿಂಗ್‌ ಮಾಡಿದರೂ ಮೂಕ ಪ್ರೇಕ್ಷಕನಂತೆ ವರ್ತಿಸಿರುವ ಸರಕಾರದ ನಡೆ ಸಹಜವಾಗಿಯೇ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಇಂಥ ಸೂಕ್ಷ್ಮ ವಿಚಾರಗಳನ್ನು ಸರಕಾರ ಒಂದಿಷ್ಟು ಗಂಭೀರವಾಗಿ ಪರಿಗಣಿಸಿ ತನ್ನ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದೆ. ಎಲ್ಲವೂ ತನ್ನ ಮೂಗಿನ ನೇರಕ್ಕೆ ನಡೆಯಬೇಕೆಂಬ ಬಿಗುಮಾನವನ್ನು ಬಿಟ್ಟು ದೇಶದ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಿದಲ್ಲಿ ಹಾದಿ ತಪ್ಪಿದವರೂ ನಿಧಾನವಾಗಿ ಸರಿದಾರಿಗೆ ಮರಳುತ್ತಾರೆ ಎಂಬ ಸೂಕ್ಷ್ಮತೆಯನ್ನು ಸರಕಾರ ಅರಿತುಕೊಳ್ಳಬೇಕು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health-insure

GST Revise: ಆರೋಗ್ಯ ವಿಮೆ ಪ್ರಯೋಜನ ಜನಸಾಮಾನ್ಯರಿಗೂ ಕೈಗೆಟುಕಲಿ

Raichuru-Manvi

Raichuru Accident: ಶಾಲಾ ಬಸ್‌: ಬೇಜವಾಬ್ದಾರಿ ಚಾಲನೆಗೆ ಕಠಿನ ಕ್ರಮ ಅಗತ್ಯ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

ಬಂಡುಕೋರರೊಂದಿಗೆ ಸಂಧಾನ ಫ‌ಲಿಸಿದ ಕೇಂದ್ರದ ಪ್ರಯತ್ನ

CBi

Investigation Agency: ಸಿಬಿಐ ಪ್ರಕರಣಗಳು ತ್ವರಿತ ವಿಲೇವಾರಿಯಾಗಲಿ

Film

South India Film Industry: ಸಿನೆಮಾ ರಂಗ ಕಳಂಕ ಮುಕ್ತವಾಗಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.