![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-415x255.jpg)
ನಮ್ಮ ಕ್ಲಿನಿಕ್ ಕೇಂದ್ರಗಳನ್ನು ಏಕ ಕಾಲದಲ್ಲಿ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ
ಬಡವರು, ಸಾಮಾನ್ಯರ ಆರೋಗ್ಯ ಕಾಳಜಿ ದೃಷ್ಟಿಯಿಂದ ಆರಂಭ
Team Udayavani, Dec 14, 2022, 2:56 PM IST
![1-sadasd](https://www.udayavani.com/wp-content/uploads/2022/12/1-sadasd-620x341.jpg)
ಹುಬ್ಬಳ್ಳಿ: ಬಡವರು, ಸಾಮಾನ್ಯರ ಆರೋಗ್ಯಕ್ಕೆ ಮಹತ್ವದ ಸಹಾಯ ವಾಗುವ ರಾಜ್ಯದ 114 ,ನಮ್ಮ ಕ್ಲಿನಿಕ್ ಕೇಂದ್ರಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬುಧವಾರ ಹುಬ್ಬಳ್ಳಿ ಯಲ್ಲಿ ಏಕ ಕಾಲಕ್ಕೆ ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು, ಬಡವರು, ಸಾಮಾನ್ಯರ ಆರೋಗ್ಯ ಕಾಳಜಿ ದೃಷ್ಟಿಯಿಂದ ನಮ್ಮ ಕ್ಲಿನಿಕ್ ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಸುಮಾರು 438 ನಮ್ಮ ಕ್ಲಿನಿಕ್ ಆರಂಭಿಸಲಾಗುತ್ತಿದೆ. ಜನೆವರಿ ಅಂತ್ಯದೊಳಗೆ ಈ ಎಲ್ಲ ಕ್ಲಿನಿಕ್ ಗಳನ್ನು ಆರಂಭಗೊಳಿಸಲಾಗುವುದು ಎಂದರು.
ತಮ್ಮ ಸರಕಾರ ಆರೋಗ್ಯ, ಶಿಕ್ಷಣಕ್ಕೆ ಒತ್ತು ನೀಡಿದೆ.ಆರೋಗ್ಯ ಇಲಾಖೆಗೆ 10 ಸಾವಿರ ಕೋಟಿ ರೂ.ಅನುದಾನ ನೀಡಿದ್ದರೆ,ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ಗಳನ್ನು ನಿರ್ಮಿಸಲಾಗುತ್ತದೆ.ಜನವರಿಯಲ್ಲಿ ರಾಜ್ಯಾದ್ಯಂತ 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯರಿಗೆ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕಗಳ ನೀಡಲಾಗುವುದು. ಎಲ್ಲ ಜಿಲ್ಲೆಗಳಲ್ಲಿ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ನಡೆಸಿ ದತ್ತಾಂಶ ಸಂಗ್ರಹಿಸಬೇಕು. ಹಾವೇರಿ, ಉಡುಪಿ ಜಿಲ್ಲೆಗಳಲ್ಲಿ ಇದನ್ನು ಮಾಡಿಸಿದ್ದೇನೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ ಮಾತನಾಡಿ, ಮಹಿಳೆಯರಿಗಾಗಿ ಪ್ರತ್ಯೇಕ ಆಸ್ಪತ್ರೆ ವ್ಯವಸ್ಥೆ ಗೆ ಆಯುಷ್ಮತಿ ಕ್ಲಿನಿಕ್ ಗಳನ್ನು ಆರಂಭಿಸಲಾಗುತ್ತಿದೆ. ರಾಜ್ಯದಲ್ಲಿ1.2 ಕೋಟಿ ಆಯುಷ್ಮಾನ್ ಕಾರ್ಡ್ ನೋಂದಣಿಯಾಗಿದ್ದು, ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಡ್ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅಧ್ಯಕ್ಷತೆ ವಹಿಸಿದ್ದರು. ಸಚಿವರಾದ ಹಾಲಪ್ಪ ಆಚಾರ, ಸಿ.ಸಿ.ಪಾಟೀಲ ಇನ್ನಿತರರು ಇದ್ದರು.
ಟಾಪ್ ನ್ಯೂಸ್
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-415x255.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.