ತೀವ್ರವಾದ ಉಸ್ತುವಾರಿ ವಿವಾದ: ‘ಪಕ್ಷದ ರಾಜಕೀಯ ನೀತಿ’ ಎಂದ ಸಿಎಂ ಬೊಮ್ಮಾಯಿ

ಹೈಕಮಾಂಡ್ ನಡೆಗೆ ಸಚಿವರ ಬೇಸರ

Team Udayavani, Jan 25, 2022, 12:13 PM IST

cm-bommai

ಬೆಂಗಳೂರು : ಸಚಿವರಿಗೆ ತವರು ಜಿಲ್ಲೆ ಉಸ್ತುವಾರಿ ತಪ್ಪಿಸಿರುವುದು ಈಗ ಬಿಜೆಪಿಯಲ್ಲಿ ಭಾರಿ ತಳಮಳ ಸೃಷ್ಟಿಸಿದ್ದು, ಹಲವು ಸಚಿವರು ಈ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆನಂದ್ ಸಿಂಗ್, ಡಾ.ಸುಧಾಕರ, ಜೆ.ಸಿ.ಮಾಧುಸ್ವಾಮಿ, ಎಂ.ಟಿ.ಬಿ.ನಾಗರಾಜ್ ಸೇರಿದಂತೆ ಹಲವರು ಬೇಸರ ಹೊರ ಹಾಕಿದ್ದಾರೆ. ಆದರೆ ಈ ವಿಚಾರದಲ್ಲಿ ಯಾರೂ ಎಷ್ಟೇ ಆಕ್ರೋಶ ಹೊರ ಹಾಕಿದ್ದರೂ ಪ್ರಯೋಜನವಿಲ್ಲ ಎಂದು ಹೇಳಲಾಗುತ್ತಿದೆ.

ಹೈಕಮಾಂಡ್ ಸೂತ್ರ

ತವರು ಜಿಲ್ಲೆಯ ಉಸ್ತುವಾರಿ ಯನ್ನು ಸಚಿವರಿಗೆ ನೀಡಬಾರದು ಎಂಬುದು ಹೈಕಮಾಂಡ್ ಸೂತ್ರ. ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳಲ್ಲೂ ಇದೇ ನಿಯಮ ಅನುಸರಿಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಆರಂಭದಲ್ಲೇ ಈ ವಿಚಾರವನ್ನು ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ನೀಡಲಾಗಿತ್ತು.ಆದರೆ ನಾನಾ ಕಾರಣಗಳಿಂದ ಯಡಿಯೂರಪ್ಪ ಒಪ್ಪಿರಲಿಲ್ಲ. ಬಲವಂತವಾಗಿ ಹೇರುವುದಕ್ಕೆ ವರಿಷ್ಠರು ಹೆಚ್ಚಿನ ಆದ್ಯತೆ ನೀಡಿರಲಿಲ್ಲ.

ಇದನ್ನೂ ಓದಿ :ಉತ್ತರ ಕನ್ನಡಕ್ಕೆ ಕೋಟ, ಲೆಕ್ಕಾಚಾರದ ನೋಟ

ಹೀಗಾಗಿ ಸಿಎಂ ಸ್ಥಾನದಿಂದ ಯಡಿಯೂರಪ್ಪ ಇಳಿದು ಬೊಮ್ಮಾಯಿ ಪ್ರತಿಷ್ಠಾಪನೆಯಾದ ಬಳಿಕ ಈ ಸೂತ್ರ ಜಾರಿಗೆ ವರಿಷ್ಢರು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಳೆದು ತೂಗಿ ಉಸ್ತುವಾರಿ ಪಟ್ಟಿಯನ್ನು ಸಿಎಂ ಬೊಮ್ಮಾಯಿ ಸಿದ್ದಪಡಿಸಿದ್ದಾರೆ.

ಉಸ್ತುವಾರಿ ಬದಲಾವಣೆ ವಿಚಾರದಲ್ಲಿ ಕೆಲವರಿಗೆ ಹೈಕಮಾಂಡ್ ಸೂತ್ರದ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಆದಾಗಿಯೂ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಗೊತ್ತಿಲ್ಲದ ಕಡೆ ಬೇಡ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಮಾಧುಸ್ವಾಮಿ ಬೇರೆ‌ ಜಿಲ್ಲೆಗಳ ಬಗ್ಗೆ ಮಾಹಿತಿ ಇಲ್ಲದೇ ಕೆಲಸ ಮಾಡುವುದು ಬೇಡ. ಇದರಿಂದ ಪ್ರಯೋಜನವಿಲ್ಲ ಎಂದು ಬೇಡ ಹೇಳುದ್ದೇನೆಯೇ ವಿನಾ ಬೇರೆ ಯಾವುದೇ ಉದ್ದೇಶವಿಲ್ಲ. ತವರು‌ ಜಿಲ್ಲೆ ಬದಲಾವಣೆ ರಾಮಕೃಷ್ಣ ಹೆಗಡೆ ಕಾಲದಲ್ಲೂ ಆಗಿ ವಿಫಲವಾಗಿತ್ತು ಎಂದು ಹೇಳಿದ್ದಾರೆ.

ವಸ್ತು ಸ್ಥಿತಿಗೆ ದೂರ

ವಿಧಾನಸೌಧದಲ್ಲಿ ಸಿಎಂ ಬೊಮ್ಮಯಿ ಹೇಳಿಕೆ ನೀಡಿದ್ದು, ಯಾರು ಅಸಮಾಧಾನ ವ್ಯಕ್ತಪಡಿಸಿಲ್ಲ.ಎಲ್ಲರ ಬಳಿ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ವಹಿಸುವ ಮುನ್ನವೂ ಅವರ ಬಳಿ ಮಾತನಾಡಿದ್ದೇ.ನಂತರವೂ ನಾನು ಮಾತನಾಡಿದ್ದೇನೆ. ಇದು ನಮ್ಮ ಪಕ್ಷದ ರಾಜಕೀಯ ನೀತಿ. ಯಾವುದೇ ಅಸಮಾಧಾನದ ಪ್ರಶ್ನೆಯೇ ಇಲ್ಲ. ಸರ್ಕಾರವನ್ನು ಅತ್ಯಂತ ಸೂಕ್ತವಾಗಿ ಕೆಲಸ ಮಾಡಲು ಬದ್ದವಾಗಿದ್ದೇವೆ. ಅಸಮಾಧಾನ ಎನ್ನುವುದು ವಸ್ತು ಸ್ಥಿತಿಗೆ ದೂರವಾಗಿದೆ, ಸತ್ಯಕ್ಕೆ ದೂರವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.