Maharashtra polls; ಗುವಾಹಟಿಯ ಕಾಮಾಖ್ಯ ದೇವಿ ದರ್ಶನ ಪಡೆದ ಸಿಎಂ ಶಿಂಧೆ
ದೇವಿಯ ಅನುಗ್ರಹದಿಂದಲೇ ಸಿಎಂ ಆಗಿದ್ದರು ಎಂಬ ನಂಬಿಕೆ.. ಅಪಾರ ಭಕ್ತಿ
Team Udayavani, Oct 23, 2024, 11:03 AM IST
ಗುವಾಹಟಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಅಸ್ಸಾಂನ ಗುವಾಹಟಿಯಲ್ಲಿರುವ ಪ್ರಸಿದ್ಧ ಕಾಮಾಖ್ಯ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ, ನವೆಂಬರ್ 20 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಭಾರೀ ರಾಜಕೀಯ ಚಟುವಟಿಕೆಗಳ ಭರಾಟೆಯ ನಡುವೆಯೂ ದೇಗುಲಕ್ಕೆ ಭೇಟಿ ನೀಡಿದ್ದಾರೆ.
ವಿಶೇಷವೆಂದರೆ,ಅವಿಭಜಿತ ಶಿವಸೇನೆಯ 39 ಬಂಡಾಯ ಶಾಸಕರೊಂದಿಗೆ 2022 ರ ಜೂನ್ ನಲ್ಲಿ ಶಿಂಧೆ ಅವರು ಪಕ್ಷದ ಅಧ್ಯಕ್ಷ ಮತ್ತು ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಾಯಕತ್ವದ ವಿರುದ್ಧ ಬಂಡಾಯ ಸಾರಿದ್ದ ವೇಳೆ ಕಾಮಾಖ್ಯ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಆ ಬಳಿಕ ಶಿವಸೇನೆ ವಿಭಜನೆಯಾಗಿ ಶಿಂಧೆ ಸಿಎಂ ಆಗಿದ್ದರು.
2022, ಜೂನ್ 30, ರಂದು, ಶಿಂಧೆ ಬಿಜೆಪಿಯ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು, ಬಳಿಕ ನವೆಂಬರ್ನಲ್ಲಿ ದೇವಿಯ ಆಶೀರ್ವಾದ ಪಡೆಯಲು ಕಾಮಾಖ್ಯ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಶಿಂಧೆ ಅವರು ಎರಡನೇ ಬಾರಿಗೆ ಗುವಾಹಟಿಗೆ ಭೇಟಿ ನೀಡಿದ ಬಳಿಕ ಶಿವಸೇನೆಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ನವೆಂಬರ್ 20 ರಂದು ಮಹಾರಾಷ್ಟ್ರ ಮತದಾನ ಮಾಡುವಾಗ ಶಿಂಧೆ ಅವರಿಗೆ ಅತ್ಯಂತ ನಿರ್ಣಾಯಕ ವಿಧಾನಸಭಾ ಚುನಾವಣೆಯ ಹೋರಾಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand polls; ಜೆಎಂಎಂ 35 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Panaji: ಗೋವಾದಲ್ಲಿ ತುಳುಕೂಟ ಸ್ಥಾಪನೆಯಾಗಿರುವುದು ಹೆಮ್ಮೆಯ ಸಂಗತಿ: ವಿ. ಸುನೀಲ್ ಕುಮಾರ್
Eknath Shinde; ಶಿವಸೇನೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಹುತೇಕರಿಗೆ ಮಣೆ
Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ
“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
ಯೋಗೀಶ್ ಗೌಡ ಕೊಲೆ ಆರೋಪಿ ಮುತ್ತಗಿಗೆ ಜೀವ ಬೆದರಿಕೆ:ಮುತ್ತಗಿ ಮನೆಗೆ ಸಿಬಿಐ ಅಧಿಕಾರಿಗಳ ಭೇಟಿ
Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?
Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ
Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್ ಬಜೆಟ್ ಚಿತ್ರದ ಬಗ್ಗೆ ಯಶ್ ಮಾತು
C. P. Yogeshwara; ಎಲ್ಲ ಮರೆತು ಬೇಷರತ್ತಾಗಿ ‘ಕೈ’ ಹಿಡಿದಿದ್ದಾರೆ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.