ರಾಜ್ಯಪಾಲರಿಗೆ ದೂರು: ಉಭಯ ಸದನಗಳ ಕಲಾಪಕ್ಕೆ ವಿಪಕ್ಷಗಳು ಗೈರು
ಬಿಜೆಪಿ ಜತೆಗೆ ಜೆಡಿಎಸ್ ಧರಣಿ, ರಾಜಭವನಕ್ಕೆ ಪಾದಯಾತ್ರೆ
Team Udayavani, Jul 21, 2023, 7:16 AM IST
ಬೆಂಗಳೂರು: ಬಿಜೆಪಿಯ ಹತ್ತು ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್ ನಡೆಯ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಹೋರಾಟದ ಸ್ವರೂಪವನ್ನು ಬದಲಾಯಿಸಿವೆ. ಶುಕ್ರ ವಾರ ಕಲಾಪದಿಂದ ದೂರ ಉಳಿದು ಪ್ರತಿ ಭ ಟನೆ ವ್ಯಕ್ತಪಡಿಸಿವೆ. ಜತೆಗೆ ರಾಜ್ಯಪಾಲರನ್ನು ಜಂಟಿಯಾಗಿ ಭೇಟಿ ಮಾಡಿ ಸ್ಪೀಕರ್ ವಿರುದ್ಧ ದೂರು ನೀಡಿವೆ. ವಿಪಕ್ಷಗಳು ಕಲಾಪ ಬಹಿಷ್ಕರಿಸಿದ ಪರಿಣಾಮವಾಗಿ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮೇಲಿನ ಚರ್ಚೆಗೆ ವಿಪಕ್ಷಗಳ ಸಾಲಿನ ಖಾಲಿ ಕುರ್ಚಿಗಳನ್ನು ನೋಡಿ ಉತ್ತರಿಸುವ ಪರಿಸ್ಥಿತಿ ನಿರ್ಮಾಣವಾಯಿತು.
ಮೊದಲ ಅಧಿವೇಶನದಲ್ಲೇ ಇಂಥ ವಿಕೋಪದ ಪರಿಸ್ಥಿತಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಇರಿಸು-ಮುರುಸು ಉಂಟು ಮಾಡಿದೆ. ಅಲ್ಲದೆ ಅವರು ಸ್ವಯಂಪ್ರೇರಣೆಯಿಂದ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಭೇಟಿ ಮಾಡಿ ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ. ಹೀಗಾಗಿ ವಿವಾದ ಈಗ ರಾಜ್ಯಪಾಲರ ಅಂಗಳಕ್ಕೆ ವರ್ಗಾವಣೆಗೊಂಡಂತಾಗಿದೆ.
ಬಿಜೆಪಿ ಪ್ರತಿಭಟನೆ
ಗುರುವಾರ ಬೆಳಗ್ಗೆ ಬಿಜೆಪಿ ಕಚೇರಿ ಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆ ಸಿದ ಬಿಜೆಪಿ ಶಾಸಕರು ಉಭಯ ಸದನಗಳ ಕಲಾಪವನ್ನು ಬಹಿಷ್ಕರಿಸುವ ನಿರ್ಧಾರ ತೆಗೆದುಕೊಂಡರು. ಬಳಿಕ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಅನಂತರ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯಪಾಲ ರನ್ನು ಭೇಟಿ ಮಾಡಿ ದೂರು ನೀಡಿದರು. ಬಿಜೆಪಿ ನಿಯೋಗದ ಜತೆಗೆ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕೂಡ ಸೇರಿಕೊಂಡಿತು. ಇದಕ್ಕೆ ಮೊದಲು ತನ್ನ ಶಾಸಕಾಂಗ ಪಕ್ಷದ ಸಭೆ ನಡೆಸಿದ ಜೆಡಿಎಸ್, ಬಿಜೆಪಿಯ ಜತೆ ಸೇರಿ ವಿಧಾನಮಂಡಲದ ಕಲಾಪದಿಂದ ದೂರ ಉಳಿಯಲು ತೀರ್ಮಾನಿಸಿತು. ಇದಕ್ಕೆ ಜೆಡಿಎಸ್ನ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದರೂ ಅಂತಿಮವಾಗಿ ಕಲಾಪದಿಂದ ಹೊರಗುಳಿಯುವುದೇ ಸೂಕ್ತ ಎಂದು ತೀರ್ಮಾನಿಸಿದರು.
ಹುದ್ದೆ ದುರುಪಯೋಗ
ಸ್ಪೀಕರ್ ನಡೆಯ ಜತೆಗೆ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ರಾಜಕೀಯ ಸಮಾವೇಶಕ್ಕೆ ಐಎಎಸ್ ಅಧಿಕಾರಿಗಳನ್ನು ಶಿಷ್ಟಾಚಾರ ನಿರ್ವಹಣೆಗಾಗಿ ನಿಯೋಜನೆ ಮಾಡಿ ಅಧಿಕಾರ ದುರುಪಯೋಗ ಮಾಡಿ ಕೊಂಡಿರುವ ಬಗ್ಗೆಯೂ ಬಿಜೆಪಿ-ಜೆಡಿಎಸ್ ದೂರು ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
Karki Movie Review: ಪ್ರೀತಿ ಅರಮನೆಯಲ್ಲಿ ಜಾತಿ ಸಂಘರ್ಷ
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.