ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಮಾಡಿ


Team Udayavani, Apr 5, 2021, 7:05 AM IST

ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಧಾರ ಮಾಡಿ

ರಾಜ್ಯವು ಕೊರೊನಾ “ಕರಾಳ ವಾರ್ಷಿಕೋತ್ಸವ’ದ ಹೊಸ್ತಿಲನ್ನು ಈಗಷ್ಟೇ ದಾಟಿದೆ. ಈಗ ರಾಜ್ಯದಲ್ಲಿ ಕೊರೊನಾ 2ನೇ ಅಬ್ಬರ ಜೋರಾಗಿದೆ. ಕಳೆದ ತಿಂಗಳಿಂದ ಕೊರೊನಾ ಪ್ರಕರಣಗಳು ನಿರಂತರವಾಗಿ ಏರುಗತಿಯಲ್ಲಿವೆ. ಸದ್ಯ ಸಕ್ರಿಯ ಪ್ರಕರಣಗಳಲ್ಲಿ ಇಡೀ ದೇಶದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಸಕ್ರಿಯ ಪ್ರಕರಣಗಳು ಹೆಚ್ಚಿರುವ ದೇಶದ ದೊಡ್ಡ ನಗರಗಳ ಪೈಕಿ ರಾಜಧಾನಿ ಬೆಂಗಳೂರು 7ನೇ ಸ್ಥಾನದಲ್ಲಿದೆ.

ಈ ಹಿನ್ನೆಲೆಯಲ್ಲಿ ಕೋವಿಡ್‌ ನಿಯಂತ್ರಣದ ವಿಚಾರದಲ್ಲಿ ಸರಕಾರಕ್ಕೆ ಜನರ ಸುರಕ್ಷತೆ ಪ್ರಥಮ ಆದ್ಯತೆ ಆಗಿರಬೇಕು. ಇದರ ಜತೆಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಬೇಕಾದಾಗ ಸೂಕ್ಷ್ಮತೆಗೆ ಪ್ರಾಧಾನ್ಯತೆ ಸಿಗಬೇಕು. ಕೋವಿಡ್‌ ನಿಯಂತ್ರಣಕ್ಕೆ ಸರಕಾರ ಕೈಗೊಳ್ಳುತ್ತಿರುವ ತೀರ್ಮಾನಗಳ ಬಗ್ಗೆ ಸಾಕಷ್ಟು ಗೊಂದಲಗಳು ಉಂಟಾಗುತ್ತಿವೆ. ಕೆಲವೊಂದು ತೀರ್ಮಾನಗಳು ವಿವಾದದ ಹಂತಕ್ಕೂ ಹೋಗುತ್ತಿವೆ. ಉದಾಹರಣೆಗೆ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಪ್ರೇಕ್ಷಕರು ಇರಬೇಕು ಎಂಬ ಸರಕಾರದ ತೀರ್ಮಾನಕ್ಕೆ ಚಿತ್ರರಂಗದಿಂದ ಅಪಸ್ವರ ಕೇಳಿ ಬಂತು. ಕೊನೆಗೆ ಒತ್ತಡಕ್ಕೆ ಮಣಿಸಿದ ಸರಕಾರ ಎ.7ರ ವರೆಗೆ ಶೇ.100 ಪ್ರೇಕ್ಷಕರಿಗೆ ಅನುಮತಿ ಕೊಟ್ಟಿತು. ಜಿಮ್‌ ವಿಚಾರದಲ್ಲೂ ಸರಕಾರ ತೀರ್ಮಾನ ಬದಲಾಯಿಸಿತು. ಇಂತಹದೇ ವಿಚಾರಕ್ಕೆ ಮತ್ತೂಬ್ಬರು ಧ್ವನಿ ಎತ್ತಿದರೆ ಸರಕಾರ ಇಕ್ಕಟ್ಟಿಗೆ ಸಿಲುಕ ಬೇಕಾಗುತ್ತದೆ. ಒಂದೊಮ್ಮೆ ಚಿತ್ರರಂಗದೊಂದಿಗೆ, ಜಿಮ್‌ ಮಾಲಕರು, ಇತರರ ಜತೆ ಮೊದಲೇ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಂಡು ವಿಷಯದ ಗಾಂಭಿರ್ಯತೆ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೆ ಗೊಂದಲಕ್ಕೆ ಅವಕಾಶ ಇರುತ್ತಿರಲಿಲ್ಲವೇನೋ.

ಅದ್ದರಿಂದ ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಸಮರ ಸಾರಿರುವ ರಾಜ್ಯ ಸರಕಾರ ದಿನಕ್ಕೊಂದಿಷ್ಟು ಕಠಿನ ಕ್ರಮಗಳನ್ನು ಜಾರಿಗೊಳಿಸುತ್ತಲೇ ಬರುತ್ತಿದೆ. ಅವುಗಳ ಬಗ್ಗೆ ಅಲ್ಲಲ್ಲಿ ಅವಿಶ್ವಾಸ, ಅಪಸ್ವರಗಳು ಕೇಳಿ ಬರುತ್ತಿವೆ. ಈ ಸರಣಿಗೆ ಕತ್ತರಿ ಹಾಕಬೇಕಾದರೆ ಸರಕಾರ ಯಾವುದೇ ತೀರ್ಮಾನ ತೆಗೆದುಕೊಳ್ಳುವ ಮೊದಲು ಸಂಬಂಧಿಸಿದ ಭಾಗಿದಾರರ(ಸ್ಟೇಕ್‌ ಹೋಲ್ಡರ್)ನ್ನು ಕರೆದು ಮಾತನಾಡಿಸಬೇಕು. ಈ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ನಡೆ ನಮಗೆ ಮಾದರಿಯಾಗ ಬೇಕು. ಅವರು ಶನಿವಾರ ಮಲ್ಟಿಪ್ಲೆಕ್ಸ್‌, ಜಿಮ್ಸ್‌ ಹಾಗೂ ಸುದ್ದಿಪತ್ರಿಕೆಯ ಮಾಲಕರೊಂದಿಗೆ ಸಭೆ ನಡೆಸಿ ಕೊರೊನಾ ನಿಯಂತ್ರಣಕ್ಕೆ ಮಹಾರಾಷ್ಟ್ರ ಸರಕಾರ ಕೈಗೊಂಡಿರುವ ಕ್ರಮಗಳಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ಹಾಗೆಯೇ ವಿಪಕ್ಷ ನಾಯಕರ ಜತೆ ಉದ್ಧವ್‌ ಠಾಕ್ರೆ ಚರ್ಚೆ ನಡೆಸಿ, ರವಿವಾರ ಸಂಜೆಯಷ್ಟೇ ಕಠಿನ ಕ್ರಮ ಘೋಷಿಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಸರಕಾರವೂ ಯೋಚಿಸಿದರೆ ಉತ್ತಮ.

ಸರಕಾರದ ಕ್ರಮಗಳಲ್ಲಿ ಸಾಧಕ-ಬಾಧಕ ಎರಡೂ ಇದೆ. ಕೊರೊನಾ ನಿಯಂತ್ರಣದ ದೃಷ್ಟಿಯಿಂದ ಕಠಿನ ಕ್ರಮಗಳು ಅನಿವಾರ್ಯ ಮತ್ತು ಜನರು ಅದನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೈಗೊಂಡ ಒಮ್ಮತಾಭಿಪ್ರಾಯದ ತೀರ್ಮಾನವಾಗಿರಬೇಕು. ಹೀಗಾದರೆ ನಿಯಮಗಳ ಪಾಲನೆ ಮತ್ತು ಅನುಷ್ಠಾನ ಸುಲಭವಾಗಿ ಯಶಸ್ಸು ಕಾಣಲಿದೆ. ಇದರ ಜತೆಗೆ ಲಾಕ್‌ಡೌನ್‌, ಸೆಮಿಲಾಕ್ ಡೌನ್‌ ಅಥವಾ ರಾತ್ರಿ ಕರ್ಫ್ಯೂನಂಥ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಲುವಾಗಿಯೇ ರಾಜ್ಯ ಸರಕಾರ ಸಚಿವರು, ಭಾಗೀದಾರರನ್ನು ಒಳಗೊಂಡ ಒಂದು ಉನ್ನತ ಮಟ್ಟದ ಸಮಿತಿ ರಚನೆ ಮಾಡಬೇಕು. ಇಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಎಲ್ಲರ ಆಶಯ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.