ಉಡುಪಿ ಜಿಲ್ಲಾಧಿಕಾರಿ ದಿಢೀರ್‌ ದಾಳಿ : ನಿಯಮ ಉಲ್ಲಂಘಿಸಿದ 5 ಬಸ್ಸು ಮಾಲಕರ ವಿರುದ್ಧ ಪ್ರಕರಣ


Team Udayavani, Apr 19, 2021, 9:22 PM IST

ಬಸ್ಸಿನಲ್ಲಿ ನಿಯಮ ಉಲ್ಲಂಘಿಸಿದ ನಿರ್ವಾಹಕನಿಗೆ ದಂಡ, ಮಾಲಕನ ವಿರುದ್ಧ ಜಿಲ್ಲಾಧಿಕಾರಿ ಕ್ರಮ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆ ಹರಡುತ್ತಿದ್ದು, ಸಾರ್ವಜನಿಕರು ಸರಕಾರದ ಸೂಚನೆಯ ಅನಂತರವೂ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿರುವ ಕುರಿತು ಜಾಗೃತಿ ಮೂಡಿಸಿ ದಂಡ ವಿಧಿಸುವ ಕುರಿತಂತೆ ಜಿಲ್ಲಾಧಿಕಾರಿ ಜಿ.ಜಗದೀಶ್‌ ಸೋಮವಾರ ಸಂಜೆ ಸಂತೆಕಟ್ಟೆಯಲ್ಲಿ ದಿಢೀರ್‌ ದಾಳಿ ನಡೆಸಿದರು.

ಬಸ್‌ಗಳಲ್ಲಿ ನಿಗದಿತ ಆಸನ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ 5 ಬಸ್‌ಗಳ ಚಾಲಕರು, ನಿರ್ವಾಹಕರಿಂದ ದಂಡ ವಸೂಲಿ ಮಾಡಿ ಬಸ್‌ ಮಾಲಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಬಸ್‌ಗಳಲ್ಲಿ ನಿಂತು ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಅವರೆಲ್ಲರಿಗೂ ಟಿಕೆಟ್‌ನ ಮೊತ್ತವನ್ನು ಹಿಂದಿರುಗಿಸುವಂತೆ ಕಂಡಕ್ಟರ್‌ಗೆ ಸೂಚಿಸಿದರು. ಸರಕಾರದ ಆದೇಶವಿದ್ದರೂ ಹೆಚ್ಚಿನ ಜನರನ್ನು ಕರೆದೊಯ್ಯುತ್ತಿದ್ದ ಚಾಲಕ ಮತ್ತು ನಿರ್ವಾಹಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಪ್ರಯಾಣಿಕರಿಗೂ ಸಹ ಬುದ್ದಿವಾದ ಹೇಳಿ ಬಸ್‌ನಲ್ಲಿ ಸೀಟ್‌ ಇಲ್ಲವಾದಲ್ಲಿ ಅನಂತ‌ರದ ಬಸ್‌ನಲ್ಲಿ ಸಂಚರಿಸುವಂತೆ ತಿಳಿಸಿದರು.

ಇದನ್ನೂ ಓದಿ :ಕಡಬ; ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಅನಂತರ ಮೆಡಿಕಲ್‌ ಶಾಪ್‌ ಒಂದರಲ್ಲಿ ಮಾಸ್ಕ್ ಧರಿಸದೇ ಇದ್ದ ಸಿಬಂದಿಗಳಿಂದ, ಅಂಗಡಿಗಳಿಂದ, ಕ್ಲಿನಿಕ್‌ ಒಂದರಲ್ಲಿ ಮಾಸ್ಕ್ ಧರಿಸದಿದ್ದ ರೋಗಿಯ ಸಂಬಂಧಿಕನಿಗೂ ದಂಡ ವಿಧಿಸಲಾಯಿತು. ಸಹಕಾರಿ ಸಂಘವೊಂದರಲ್ಲಿ ಮಾಸ್ಕ್ ಇಲ್ಲದೇ ಕುಳಿತಿದ್ದ ಸಿಬಂದಿಗೆ ಹಾಗೂ ಸಂಘದ ಹೆಸರಿನಲ್ಲಿಯೂ ದಂಡ ವಸೂಲಿ ಮಾಡಲಾಯಿತು. ಬಸ್‌ ನಿಲ್ದಾಣದಲ್ಲಿ ಮಾಸ್ಕ್ ಇಲ್ಲದೆ ನಿಂತಿದ್ದ ದಂಪತಿಗೆ, ಎಟಿಎಂ ಒಂದರಲ್ಲಿ ಮಾಸ್ಕ್ ಧರಿಸದೆ ಹಣ ತೆಗೆಯುತ್ತಿದ್ದವರಿಗೂ ದಂಡ ವಿಧಿಸಲಾಯಿತು. ಇದೇ ಸಂದರ್ಭದಲ್ಲಿ ಮಾಸ್ಕ್ ಇಲ್ಲದೆ ನಿಂತಿದ್ದ ವಿದ್ಯಾರ್ಥಿನಿಯೊಬ್ಬಳಿಗೂ ಕೋವಿಡ್‌ ಕುರಿತು ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿಗಳು, ಸ್ವತ: ತಾವೇ ಮಾಸ್ಕ್ ನೀಡಿ ಧರಿಸುವಂತೆ ಸೂಚಿಸಿದರು.

ರಸ್ತೆಯಲ್ಲಿ ಮಾಸ್ಕ್ ಇಲ್ಲದೇ ಸಂಚರಿಸುತ್ತಿದ್ದ ವಾಹನ ಸವಾರರಿಗೂ ದಂಡ ವಿಧಿಸಿದ ಜಿಲ್ಲಾಧಿಕಾರಿಗಳು ಕೋವಿಡ್‌ ಕುರಿತು ಜಾಗೃತಿ ಮೂಡಿಸಿದರು.

ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆಯನ್ನು ನಿಯಂತ್ರಿಸಲು ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರೂ ಸಹ ಅಗತ್ಯ ಸಹಕಾರ ನೀಡಬೇಕು. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಮತ್ತು ಸ್ಯಾನಿಟೈಸರ್‌ಗಳ ಬಳಕೆ ಮಾಡುವುದರ ಜತೆಗೆ ಸರಕಾರ ಮತ್ತು ಜಿಲ್ಲಾಡಳಿತ ನೀಡುವ ಆದೇಶಗಳನ್ನು ಪಾಲಿಸುವುದರ ಮೂಲಕ ಕೋವಿಡ್‌ ಹರಡದಂತೆೆ ಎಚ್ಚರವಹಿಸುವಂತೆ ತಿಳಿಸಿದರು.

ದಾಳಿಯಲ್ಲಿ ಜಿ.ಪಂ.ಸಿಇಒ ಡಾ| ನವೀನ್‌ ಭಟ್‌, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆಯ ಆಯುಕ್ತ ಡಾ| ಉದಯಶೆಟ್ಟಿ, ಉಡುಪಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೋಹನ್‌ ರಾಜ್‌ ಮತ್ತಿತರರು ಉಪಸ್ಥಿತರಿದ್ದರು.

5 ಬಸ್ಸುಗಳ ವಿರುದ್ಧ ಪ್ರಕರಣ
ಬಸ್ಸುಗಳಲ್ಲಿ ಸೀಟು ಇದ್ದಷ್ಟೇ ಮಂದಿ ಪ್ರಯಾಣಿಕರನ್ನು ಹಾಕಬೇಕು. ಈ ನಿಯಮವನ್ನು ಉಲ್ಲಂಘಿಸಿದ 5 ಬಸ್ಸುಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಬಸ್ಸುಗಳಲ್ಲಿ ಯಾರು ಕೂಡ ನಿಂತುಕೊಂಡು ಪ್ರಯಾಣಿಸಬಾರದು. ಈ ಘಟನೆಗಳು ಮುಂದುವರಿದರೆ ಬಸ್ಸು ಮಾಲಕರ ಮೇಲೂ ಕ್ರಮ ತೆಗೆದುಕೊಳ್ಳಲಾಗುವುದು. ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿಸಿಕೊಂಡು ಹೋಗುತ್ತಿರುವುದರಿಂದ ಮತ್ತಷ್ಟು ಕೊರೊನಾ ಸೋಂಕು ಹಬ್ಬಿಸಲು ದಾರಿ ಮಾಡಿದಂತಾಗುತ್ತದೆ. ಸಾರ್ವಜನಿಕರು ಯಾರು ಕೂಡ ಸೀಟು ಖಾಲಿ ಇದ್ದ ಬಸ್ಸುಗಳಲ್ಲಷ್ಟೇ ಪ್ರಯಾಣಿಸಬೇಕು. ಬಸ್ಸುಗಳ ಸಂಖ್ಯೆ ಸಾಕಷ್ಟು ಸಂಖ್ಯೆಯಲ್ಲಿವೆ. ಸ್ವಲ್ಪ ಹೊತ್ತು ಕಾದು ಅನಂತರ ಪ್ರಯಾಣಿಸಬೇಕು.
-ಜಿ.ಜಗದೀಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.