24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ

ಶ್ರೀಲಂಕಾದಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆ ನೀಡಬೇಕೆಂದು ತೀವ್ರ ಪ್ರತಿಭಟನೆ ನಡೆಯುತ್ತಿದೆ.

Team Udayavani, Apr 7, 2022, 10:40 AM IST

24 ಗಂಟೆಯಲ್ಲಿ ದ್ವೀಪರಾಷ್ಟ್ರ ಲಂಕಾಕ್ಕೆ ಭಾರತದಿಂದ 76,000 ಟನ್ ಇಂಧನ ಪೂರೈಕೆ

ನವದೆಹಲಿ: ದ್ವೀಪರಾಷ್ಟ್ರ ಶ್ರೀಲಂಕಾ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ನಡುವೆಯೇ ಭಾರತ ಕೊಲಂಬೋಗೆ ಇಂಧನ ಪೂರೈಕೆ ಮಾಡಿದ್ದು, ಇದರಿಂದಾಗಿ ಲಂಕಾದ ದೇಶೀಯ ಆರ್ಥಿಕ ಸ್ಥಿತಿ ಸ್ಥಿರವಾಗಿರಿಸಲು ನೆರವಾಗಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಲಡಾಖ್ ಬಳಿಯ ಭಾರತೀಯ ವಿದ್ಯುತ್ ರವಾನೆ ಕೇಂದ್ರಗಳನ್ನು ಗುರಿಯಾಗಿಸಿದ ಚೀನಾ ಹ್ಯಾಕರ್ ಗಳು!

ಭಾರತದ ಕಳೆದ 24ಗಂಟೆಗಳ ಅವಧಿಯಲ್ಲಿ 36,000 ಮೆಟ್ರಿಕ್ ಟನ್ ಪೆಟ್ರೋಲ್, 40,000 ಮೆಟ್ರಿಕ್ ಟನ್ ಗಳಷ್ಟು ಡೀಸೆಲ್ ಅನ್ನು ಶ್ರೀಲಂಕಾಕ್ಕೆ ಸರಬರಾಜು ಮಾಡಿದೆ. ಭಾರತ ಒಂದೇ ದಿನದಲ್ಲಿ 76,000 ಟನ್ ಇಂಧನವನ್ನು ಪೂರೈಕೆ ಮಾಡಿದೆ. ಈವರೆಗೆ ಭಾರತ ಶ್ರೀಲಂಕಾಕ್ಕೆ ಒಟ್ಟು 2,70,000 ಟನ್ ಗಳಷ್ಟು ಇಂಧನ ಸರಬರಾಜು ಮಾಡಿರುವುದಾಗಿ ವರದಿ ವಿವರಿಸಿದೆ.

ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ರಾಜೀನಾಮೆ ನೀಡಬೇಕೆಂದು ತೀವ್ರ ಪ್ರತಿಭಟನೆ ನಡೆಯುತ್ತಿದೆ. ಮತ್ತೊಂದೆಡೆ ರಾಜಕೀಯ ಅಸ್ಥಿರತೆ, ಆಹಾರ ಕೊರತೆಯಿಂದ ಜನರು ಪರದಾಡುವಂತಾಗಿದೆ.

ದ್ವೀಪರಾಷ್ಟ್ರ ಶ್ರಿಲಂಕಾದಲ್ಲಿ 22 ಮಿಲಿಯನ್ ಜನರು ತೀವ್ರ ಆಹಾರ ಕೊರತೆ, ಇಂಧನ ಹಾಗೂ ಅಗತ್ಯ ವಸ್ತುಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಲಂಕಾದಲ್ಲಿ ಹಾಲು, ಅಕ್ಕಿ, ಸಕ್ಕರೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. 1948ರಲ್ಲಿ ಸ್ವತಂತ್ರಗೊಂಡ ನಂತರ ಶ್ರೀಲಂಕಾದಲ್ಲಿ ಇದೇ ಮೊದಲ ಬಾರಿ ತೀವ್ರ ಆರ್ಥಿಕ ಬಿಕ್ಕಟ್ಟು, ಆಹಾರ ಕೊರತೆ ಎದುರಿಸುವಂತಾಗಿದೆ ಎಂದು ವರದಿ ವಿವರಿಸಿದೆ.

ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿದ್ದರು ಕೂಡಾ ಶ್ರೀಲಂಕಾ ಸರ್ಕಾರ ಬಹುಮತ ಕಳೆದುಕೊಂಡಿದ್ದರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂದು ಗೋಟಬಯ ರಾಜಪಕ್ಸ ಪಟ್ಟು ಹಿಡಿದಿರುವ ಪರಿಣಾಮ ರಾಜಕೀಯ ಅಸ್ಥಿರತೆಗೆ ಕಾರಣವಾಗಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.