ಮನೆಯೊಳಗೆ ಬಚ್ಚಿಟ್ಟ ಕೋಟ್ಯಂತರ ರೂ. ಮೌಲ್ಯದ ಫೋಟೋ ಕಾಪಿ ನೋಟುಗಳು ಪತ್ತೆ


Team Udayavani, Apr 1, 2023, 5:20 AM IST

money

ಕಾಸರಗೋಡು: ಕೇಂದ್ರ ಸರಕಾರ ನಿಷೇಧಿಸಿದ 1000 ರೂ. ಮುಖಬೆಲೆಯ ನೋಟಿನ ಫೋಟೋ ಕಾಪಿಯ ಬೃಹತ್‌ ಸಂಗ್ರಹ ಮನೆಯೊಂದರಲ್ಲಿ ಬಚ್ಚಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮುಂಡ್ಯತ್ತಡ್ಕ ಪರಿಸರದ ಪಳ್ಳದಲ್ಲಿರುವ ಮನೆಯಲ್ಲಿ 1434 ಕಟ್ಟುಗಳನ್ನಾಗಿಸಿ ನೋಟುಗಳನ್ನು ಪ್ಲಾಸ್ಟಿಕ್‌ ಚೀಲಗಳಲ್ಲಿ ತುಂಬಿಸಿಡಲಾಗಿತ್ತು. ಈ ಸಂಬಂಧ ಮನೆಯ ಮಾಲಕ ಚೆರ್ಕಳ ನಿವಾಸಿ ಶಾಫಿಯನ್ನು ಪೊಲೀಸರು ಠಾಣೆಗೆ ಕರೆಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಕಟ್ಟುಗಳ ಹೊರ ಭಾಗದಲ್ಲಿ ಫೋಟೋಸ್ಟಾಟ್‌ ನೋಟುಗಳು, ಅದರೊಳಗೆ ಸಾಮಾನ್ಯ ಕಾಗದಗಳನ್ನು ಇರಿಸಲಾಗಿದೆ.

ಬದಿಯಡ್ಕ ಎಸ್‌ಐ ಕೆ.ಪಿ.ವಿನೋದ್‌ ಕುಮಾರ್‌ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಲವು ದಿನಗಳಿಂದ ಹಗಲು-ರಾತ್ರಿಯೆನ್ನದೆ ಜನವಾಸವಿಲ್ಲದ ಈ ಮನೆಗೆ ಕಾರುಗಳ ಸಹಿತ ವಾಹನಗಳು ಬರುತ್ತಿದ್ದುದನ್ನು ಕಂಡು ಸ್ಥಳೀಯರಿಗೆ ಸಂಶಯ ಬಂದಿತ್ತು. ಇದರಂತೆ ಬದಿಯಡ್ಕ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಾಹನಗಳಲ್ಲಿ ಬಂದವರು ಮನೆಯೊಳಗೆ ಪ್ರವೇಶಿಸಿದ ಬಳಿಕ ಬಾಗಿಲು ಒಳಗಿನಿಂದ ಮುಚ್ಚುವುದು ಕೂಡ ಗಮನಕ್ಕೆ ಬಂದಿತ್ತು. ಇದರಿಂದ ನಿಗೂಢತೆ ಹೆಚ್ಚಲು ಕಾರಣವಾಗಿತ್ತು.

ನಿಷೇಧಿತ ನೋಟುಗಳ ಬೃಹತ್‌ ಸಂಗ್ರಹವನ್ನು ಸಂಶಯಾಸ್ಪದ ರೀತಿಯಲ್ಲಿ ಈ ಮನೆಯಲ್ಲಿ ಯಾಕಾಗಿ ಸಂಗ್ರಹಿಸಲಾಗಿದೆ ಎಂಬುದು ತಿಳಿದು ಬಂದಿಲ್ಲ. ಪೊಲೀಸ್‌ ಇಂಟೆಲಿಜೆನ್ಸ್‌ ಅಧಿಕಾರಿಗಳು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಘಟನೆಯ ಹಿಂದೆ ಅನ್ಯರಾಜ್ಯದ ಹಾಗೂ ನೇಪಾಲದ ಕೆಲವರ ನಂಟು ಇದೆ ಎಂಬ ಸೂಚನೆಯಿದೆ. ನಿಷೇಧಿತ ನೋಟುಗಳನ್ನು ಪೂಜಾ ಕೊಠಡಿಯಲ್ಲಿ ಇರಿಸಿದರೆ ಭಾಗ್ಯ ಲಭಿಸಲಿದೆಯೆಂಬ ನಂಬಿಕೆ ನೇಪಾಲ ನಿವಾಸಿಗಳಲ್ಲಿದೆ. ಇದನ್ನು ಸದುಪಯೋಗಪಡಿಸಿಕೊಂಡು ಹಲವು ವಂಚನ ತಂಡಗಳು ದೇಶದ ವಿವಿಧ ಭಾಗಗಳಲ್ಲಿ ಕಾರ್ಯಾಚರಿಸುತ್ತಿರುವುದಾಗಿ ಸೂಚನೆಯಿದೆ. ಸಿನೆಮಾ ಚಿತ್ರೀಕರಣಕ್ಕಾಗಿ ನೋಟುಗಳನ್ನು ಬಳಸುತ್ತಿರುವುದಾಗಿ ಹೇಳಲಾಗುತ್ತಿದ್ದರೂ ಅದನ್ನು ರಹಸ್ಯವಾಗಿ ಇರಿಸಿಕೊಂಡಿರುವುದು ಯಾಕಾಗಿ ಎಂಬ ಸಂಶಯ ಉಳಿದುಕೊಂಡಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.