ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !


Team Udayavani, Mar 31, 2023, 8:15 AM IST

poli

ಯಾವಾಗಲೂ ಸೀಟು ಬದಲಾಗುವುದಿಲ್ಲ; ವ್ಯಕ್ತಿಗಳು ಬದಲಾಗು ತ್ತಾರೆ. ಇಲ್ಲೂ ಹಾಗೆಯೇ ಕುಟುಂಬ ಬದಲಾಗು ವುದಿಲ್ಲ. ವ್ಯಕ್ತಿಗಳು ಬದಲಾಗುತ್ತಾರೆ.

ಹಿಂದಿನ ಬಾರಿ ಚಿತ್ರಣ ನೆನಪಾಯಿತು ವೆಂಕಟ್ರಮಣಪ್ಪನವರಿಗೆ. ಊರಿನ ಎಂಎಲ್ಲೆ ತಮ್ಮ ಸಿಂಪ್ಲಿಸಿಟೀನಾ ಮನದಟ್ಟು ಮಾಡಿ ಮತ್ತೆ ಗೆಲ್ಲೋದಿಕ್ಕೆ ಎತ್ತುಗಳ ಕೊಂಬಿಗೆ ಸಿಂಗಾರ ಮಾಡಿಕೊಂಡು, ತಾವು ಒಂದು ಸುಗಂಧಿರಾಜ ಹೂವಿನ ಸರ ಹಾಕ್ಕೊಂಡು ಎತ್ತಿನ ಗಾಡೀಲಿ ಕೈಮುಗಿದು ಕೊಂಡು ಬಂದಿದ್ದರು.

ಊರಿನವರೆಲ್ಲ ಸೇರಿದರು. “ನೋಡ್ರಪ್ಪ, ನೀವು 6 ಚುನಾವಣೆಯಿಂದಲೂ ಗೆಲ್ಲಿಸಿದ್ದೀರಿ. ನಿಮ್ಮ ಋಣಾನಾ ತೀರಿಸೋಕೆ ಆಗೋಲ್ಲ. ಕಾಲ ಬದಲಾಗಿರಬಹುದು, ಎಲ್ಲರ ಮನೆ ಮುಂದೆ ಕಾರು, ಜೀಪು ಬಂದಿರಬಹುದು. ಆದರೆ ನಾನು ಅಂದು ಎತ್ತಿನ ಗಾಡಿಯಲ್ಲೇ ಬಂದಿದ್ದೆ. ಈಗಲೂ ಹಾಗೆಯೇ. ನಿಜ, ಸಣ್ಣ ಬದಲಾವಣೆ ಆಗಿದೆ. ಅವತ್ತು ಈ ಶರಟು ಇಷ್ಟು ಗರಿಮುರಿಯಾಗಿರಲಿಲ್ಲ. ಸೆಂಟು ಹಾಕ್ಕೊಂಡಿರಲಿಲ್ಲ, ನಾಲ್ಕು ಬೆರಳಲ್ಲಿ ಚಿನ್ನದ ಉಂಗುರಗಳಿರಲಿಲ್ಲ, ಈ ಸರನೂ ಇರಲಿಲ್ಲ (ಕತ್ತಿನ ಸರವನ್ನ ತೋರಿಸುತ್ತಾ). ಆ ಮನೆ, ಜಮೀನು..” ಎಂದು ಹೇಳುತ್ತಾ “ಇವೆಲ್ಲ ನಿಮ್ಮದೇ ಋಣ” ಎಂದು ಮತ್ತೆ ಕೈ ಮುಗಿದರು.

“ಪರವಾಗಿಲ್ಲ, ಸಾಹೇಬ್ರು ಮೈ ಮೇಲೆ ಇದ್ದ ಆಭರಣ ನಮ್ಮ ಋಣ ಅಂದ್ರಲ್ಲ. ಅಷ್ಟೇ ಸಾಕು” ಎನ್ನುತ್ತಾ ಜನ ಚಪ್ಪಾಳೆ ತಟ್ಟಿದರು. ಒಂದಿಷ್ಟು ಮಂದಿ ಜೈ ಕಾರ ಹಾಕಿದರು.

ಎತ್ತಿನ ಗಾಡಿ ಮೇಲಿದ್ದ ಸಾಹೇಬ್ರು ಒಂದ್ ನಿಮಿಷ ಎನ್ನುವಂತೆ ಸನ್ನೆ ಮಾಡಿದರು. ಮುಂದಿನ ಸಾಲಿನಲ್ಲಿದ್ದ ಹಿಂಬಾಲಕರು ಹಿಂದಕ್ಕೆ ತಿರುಗಿ ಸುಮ್ಮನಿರುವಂತೆ ಕೈ ಸನ್ನೆ ರವಾನಿಸಿದರು.

“ನೋಡಿ ಮಹಾಜನಗಳೇ, ಇದು ನನ್ನ ಕೊನೆಯ ಚುನಾವಣೆ’ ಎಂದರು. ಜನರಿಂದ ಮತ್ತೆ ಚಪ್ಪಾಳೆ. ಸಾಹೇಬ್ರು ಮಾತು ಮುಂದುವರಿಸಿ, “ಮುಂದಿನ ಬಾರಿ ನನ್ನ ಮಗ ಇದೇ ಎತ್ತಿನಗಾಡಿಯಲ್ಲಿ ಬರ್ತಾನೆ. ಆರ್ಶೀರ್ವಾದ ಮಾಡಿ” ಎಂದು ಮುಗುಳ್ನಕ್ಕರು. ಜನರಿಗೆ ಈಗ ನಿಜವಾಗಲೂ ಗೊಂದಲ. ಜೈಕಾರವೋ, ವಿರೋಧವೋ? ಹಿಂಬಾಲಕರು ಬಿಡಬೇಕಲ್ಲ “ಜೈ’ ಎಂದರು. “ಮೊಹರು’ ಒತ್ತೇ ಬಿಟ್ಟರು !
ಬದಿಯಲ್ಲಿದ್ದ ವೆಂಕಟರಮಣಪ್ಪ, “25 ವರ್ಷದ ಹಿಂದೆ ಇವ್ರಪ್ಪನೂ ಹೀಗೇ ಮಾಡಿದ್ದು” ಎನ್ನುತ್ತಾ ಹೊರಟರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.