Dakshina Kannada ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸಮುಖ; ಪುತ್ತಿಲ ಪರಿವಾರ್‌ ಥಂಡಾ?

ಮಾಜಿ ಸೇನಾಧಿಕಾರಿ ಕ್ಯಾ| ಬೃಜೇಶ್‌ ಚೌಟಗೆ ಟಿಕೆಟ್‌

Team Udayavani, Mar 14, 2024, 1:25 AM IST

Dakshina Kannada ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸಮುಖ; ಪುತ್ತಿಲ ಪರಿವಾರ್‌ ಥಂಡಾ?

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಚ್ಚರಿ ಕೆಯ ಹೆಜ್ಜೆ ಇಡುವ ಮೂಲಕ ಬಿಜೆಪಿ ವರಿಷ್ಠರು ಹೊಸ ಹಾಗೂ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

42ರ ಹರೆಯದ ಭೂಸೇನೆಯ ಮಾಜಿ ಅಧಿಕಾರಿ ಕ್ಯಾ| ಬೃಜೇಶ್‌ ಚೌಟ ಅವರನ್ನು ದ.ಕ. ಲೋಕಸಭಾ ಕ್ಷೇತ್ರದಿಂದ ಉಮೇದುವಾರರನ್ನಾಗಿಸಿದ್ದು ಕ್ಷೇತ್ರದಲ್ಲಿ ಕಾರ್ಯಕರ್ತರ ಒಂದು ವಲಯದಲ್ಲಿ ಇದ್ದ ಅಸಮಾಧಾನದ ಹೊಗೆಯನ್ನು ಆರಿಸಿದಂತಾಗಿದೆ.

ಪ್ರಸ್ತುತ ಹಿಂದುತ್ವದ ಭದ್ರಕೋಟೆ ಯಾಗಿರುವ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯಾರೆನ್ನುವುದೂ ಕುತೂಹಲಕಾರಿ ವಿಷಯ. ಬಿಲ್ಲವ ಮುಖಂಡರಾದ ಪದ್ಮರಾಜ್‌ ಆರ್‌. ಅವರು ಪ್ರಯತ್ನ ನಡೆಸಿದ್ದಾರೆ. ಅವರೂ ರಾಜಕೀಯದಲ್ಲಿ ಹೊಸಮುಖ. ಈ ನಡುವೆ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಅವರ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಒಲವು ತೋರಿದ್ದಾರೆ.

ಹಿಂದೆ ಎರಡು ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ದವರು ಸೊರಕೆ, ಬಳಿಕ ಉಡುಪಿಗೆ ಹೋಗಿದ್ದ ಅವರು ಕಾಪು ಕ್ಷೇತ್ರದಿಂದ ಗೆದ್ದರು. 2013ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾ ದರು. ಅಲ್ಲಿ ಎರಡನೇ ಬಾರಿಯ ಸ್ಪರ್ಧೆ ಯಲ್ಲಿ ಅವರಿಗೆ ಸೋಲಾಯಿತು. ಈಗ ಮತ್ತೆ ದ.ಕ. ಕ್ಕೆ ಬರುವ ಸಾಧ್ಯತೆ ಇದೆ.

ದ.ಕ.ದಲ್ಲಿ 3 ಬಾರಿ ನಳಿನ್‌ ಸತತ
ಗೆಲುವು ಸಾಧಿಸಿದ್ದಾರೆ. ಪ್ರತೀ ಬಾರಿ ಗೆಲುವಿನ ಅಂತರ ಹೆಚ್ಚಿಸುತ್ತಾ ಸಾಗಿದ್ದು 2019ರಲ್ಲಿ 2.74 ಲಕ್ಷ ಅಂತರದಲ್ಲಿ ಗೆಲುವು ಸಾಧಿಸಿ ದ್ದರು. ಸಾಮಾನ್ಯವಾಗಿ ಕಾರ್ಯ ಕರ್ತರು ಹಾಗೂ ಜನರ ಪ್ರತಿರೋಧ ಎದುರಿಸುವಾಗ ಹೊಸ ಮುಖ ಇಳಿಸುವ ತಂತ್ರ ಫಲ ನೀಡು ತ್ತದೆ. ಅದೇ ತಂತ್ರ ಈಗ ಇಲ್ಲೂ ಕೆಲಸ ಮಾಡುವ ಹಾಗಿದೆ.

ಪುತ್ತಿಲ ಪರಿವಾರ್‌ ಥಂಡಾ?
ಹಾಲಿ ಸಂಸದರಿಗೆ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರ ಪರಿವಾರ ತೀವ್ರ ಪ್ರತಿ ರೋಧ ತೋರಿತ್ತು. ನಳಿನ್‌ಗೆ ಮತ್ತೆ ಅವಕಾಶ ಕೊಟ್ಟರೆ ಪಕ್ಷೇತರರಾಗಿ ಸ್ಪರ್ಧಿಸುವುದು ಖಚಿತ ಎನ್ನಲಾಗಿತ್ತು. ಆದರೆ ಈಗ ಚೌಟ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ ಪುತ್ತಿಲ ಅವರು ವಿಟ್ಲದಲ್ಲಿ ಸುದ್ದಿಗಾರರೊಂದಿಗೆ, ಕಾರ್ಯಕರ್ತರ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಅದನ್ನು ಕಾದು ನೋಡಬೇಕಿದೆ. ಇನ್ನೋರ್ವ ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್‌ ಕೂಡ ಬಿಜೆಪಿ ಟಿಕೆಟ್‌ ಬಯಸಿದವರು. ಅವರ ಈಗಿನ ನಿಲುವು ಸ್ಪಷ್ಟವಾಗಬೇಕಿದೆ.

ಮಾಜಿ ರಾಜ್ಯಾಧ್ಯಕ್ಷರಿಗೆ ತಪ್ಪಿತು ಟಿಕೆಟ್‌
ಮೂರು ಅವಧಿಗಳಲ್ಲಿ ನಿರಂತರವಾಗಿ ಬಿಜೆಪಿಯಿಂದ ಗೆಲ್ಲುತ್ತಾ ಬಂದವರು ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲು. ಎರಡನೇ ಅವಧಿಯ ಬಳಿಕ ಅವರಿಗೆ ರಾಜ್ಯಾಧ್ಯಕ್ಷ ಜವಾಬ್ದಾರಿಯೂ ಬಂತು. ಆ ಹೊತ್ತಿಗೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ವೇಗ ಪಡೆಯುತ್ತಿಲ್ಲ ಎಂಬ ವಿಷಯದಲ್ಲಿ ಸಾಮಾಜಿಕ ಜಾಲ ತಾಣಗಳಲ್ಲಿ ಟೀಕೆ ಬರಲಾರಂಭಿಸಿತ್ತು. ಮೂರನೇ ಅವಧಿಯ ಕೊನೆಯಲ್ಲಿ ಒಂದು ವಲಯದ ಕಾರ್ಯಕರ್ತರಿಂದಲೇ ನಳಿನ್‌ಗೆ ಪ್ರತಿರೋಧ ಎದುರಾಗಿತ್ತು. ಆದರೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮೊದಲ ಭೇಟಿ ಸಂದರ್ಭ ಮತ್ತೆ ನಳಿನ್‌ ಅವರೇ ಅಭ್ಯರ್ಥಿ ಎಂದು ಘೋಷಿಸಿದ್ದರು. ಅದಕ್ಕೂ ಅಸಮಾಧಾನ ಹೊಗೆಯಾಡತೊಡಗಿತ್ತು. ಇದರ ನಡುವೆ ವರಿಷ್ಠರ ಖಾಸಗಿ ಸಮೀಕ್ಷಾ ತಂಡ ಬಂದು ಅಭಿಪ್ರಾಯ ಸಂಗ್ರಹಿಸಿತ್ತು. ಅಂತಿಮವಾಗಿ ಅಳೆದು ತೂಗಿ ನಿರ್ಧಾರ ತೆಗೆದುಕೊಂಡಿದೆ.

ಕ್ಯಾ| ಬೃಜೇಶ್‌ ಚೌಟ ಗೆಲುವಿಗೆ ಶ್ರಮ: ನಳಿನ್‌
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುವ ಮೂಲಕ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕಾಗಿದೆ. ಪಕ್ಷದ ಯಾರೇ ಕಾರ್ಯಕರ್ತರಿಗೂ ಲೋಕಸಭೆಯ ಟಿಕೆಟ್‌ ನೀಡಿದರೂ ಖುಷಿ ಇದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕ್ಯಾ| ಬೃಜೇಶ್‌ ಚೌಟ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವಿಗಾಗಿ ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸ ಬೇಕಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಅಭಿಪ್ರಾಯಪಟ್ಟರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕ್ಯಾ| ಬೃಜೇಶ್‌ ಚೌಟ ಅವರನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದು, ಅವರ ಗೆಲುವಿಗಾಗಿ ಶ್ರಮಿಸುತ್ತೇನೆ. ಕೇಂದ್ರದಲ್ಲಿ ಬಿಜೆಪಿ ಮತ್ತೂಮ್ಮೆ ಅ ಧಿಕಾರಕ್ಕೆ ಬರಬೇಕು. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದನಾಗಿ ಸುದೀರ್ಘ‌ 15 ವರ್ಷಗಳ ಕಾಲ ಸೇವೆ ಸಲ್ಲಿಸುವ ಭಾಗ್ಯ ದೊರೆತಿದೆ. ಹಿರಿಯ ರಾಜಕಾರಣಿಗಳಾದ ಬಿ.ಜನಾರ್ದನ ಪೂಜಾರಿ, ವಿ.ಧನಂಜಯ ಕುಮಾರ್‌ ಅವರಿಗಿಂತಲೂ ಅಧಿಕ ವರ್ಷ ನನಗೆ ಸಂಸದ ಸ್ಥಾನದ ಭಾಗ್ಯವನ್ನು ಮತದಾರರು ನೀಡಿದ್ದಾರೆ. ನನ್ನ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಾಗಿವೆ. ರೂ. 1 ಲಕ್ಷ ಕೋಟಿಗೂ ಅಧಿಕ ಅನುದಾನವನ್ನು ಮೋದಿ ಯವರು ನೀಡಿದ್ದಾರೆ ಎಂದರು.

ಸತತ 3 ಬಾರಿ ಲೋಕಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿಯೂ ನಾಲ್ಕೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಅಲ್ಲದೆ ಪಕ್ಷ ನೀಡಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಪಕ್ಷದ ಹಿರಿಯರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರು ನನಗೆ ಅವಕಾಶ ಕಲ್ಪಿಸಿದ್ದರು. ಅವರ ಮಾರ್ಗದರ್ಶನದಂತೆ ನಡೆದಿದ್ದೇನೆ. ಇದಕ್ಕೆ ಕಾರಣರಾದ ಬಿಜೆಪಿ ಕಾರ್ಯಕರ್ತರಿಂದ ಹಿಡಿದು ಹಿರಿಯರವರೆಗೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ನವ ಯುವಕರಿಗೆ ಅವಕಾಶ
ಪಕ್ಷಕ್ಕೆ ಹೊಸ ಯುವಕರು ಬರಬೇಕು ಎಂಬ ಕಾರಣದಿಂದ ಹಿರಿಯರು ಯುವ ನಾಯಕರನ್ನು ಗುರುತಿಸಿ ಅವಕಾಶ ನೀಡುತ್ತಿದ್ದಾರೆ. ಕ್ಯಾ| ಚೌಟ ಅವರನ್ನು ಪಕ್ಷ ಗುರುತಿಸಿ ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗುವ ಅವಕಾಶ ನೀಡಿದೆ. ಅವರ ಗೆಲುವಿಗೆ ಒಟ್ಟಾಗಿ ಶ್ರಮಿಸಲಿದ್ದೇವೆ ಎಂದು ನಳಿನ್‌ ಹೇಳಿದರು.

 

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.