![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 18, 2020, 5:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬುಧವಾರ ಹೊಸ 8 ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 378ಕ್ಕೆ ಏರಿಕೆಯಾಗಿದೆ.
ಸೌದಿಯಿಂದ ಆಗಮಿಸಿದ್ದ 43 ಮತ್ತು 25 ವರ್ಷದ ವ್ಯಕ್ತಿಗಳನ್ನು ಕ್ವಾರಂಟೈನ್ನಲ್ಲಿರಿಸಲಾಗಿತ್ತು. ಅವರ ಗಂಟಲ ದ್ರವ ಮಾದರಿ ವರದಿ ಸ್ವೀಕೃತವಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಕ್ವಾರಂಟೈನ್ನಲ್ಲಿದ್ದ 30, 38 ವರ್ಷದ ಮಹಿಳೆ ಮತ್ತು 12 ವರ್ಷದ ಬಾಲಕಿಗೆ ಕೋವಿಡ್-19 ಸೋಂಕು ತಗುಲಿದೆ. ಕ್ವಾರಂಟೈನ್ನಲ್ಲಿದ್ದ 42 ವರ್ಷದ ವ್ಯಕ್ತಿಗೆ, ಮುಂಬಯಿಯಿಂದ ಆಗಮಿಸಿದ್ದ 60 ವರ್ಷದ ವ್ಯಕ್ತಿ ಮತ್ತು 35 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ.
ಒಟ್ಟು 80 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, 8 ಪಾಸಿಟಿವ್ ಪ್ರಕರಣ ಕಂಡುಬಂದಿದೆ. 147 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.
ಒಬ್ಬರ ಸ್ಥಿತಿ ಗಂಭೀರ
ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿನಿಂದಾಗಿ ದಾಖಲಾಗಿರುವ 70 ವರ್ಷದ ವ್ಯಕ್ತಿ ಮಧುಮೇಹ ಹಾಗೂ ನ್ಯೂಮೋನಿಯದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕೋವಿಡ್-19 ದೃಢಪಟ್ಟು ಆಸ್ಪತ್ರೆಯಲ್ಲಿ ದಾಖಲಾಗಿರುವ 52 ವರ್ಷದ ಇನ್ನೊಬ್ಬ ವ್ಯಕ್ತಿ ಮಧುಮೇಹ ಮತ್ತು ಅಬುìದ ರೋಗದಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.