ದಾವಣಗೆರೆ: ಸೇವೆ ಪೂರೈಸಿ ಬಂದ ಯೋಧರಿಬ್ಬರಿಗೆ ಭವ್ಯ ಸ್ವಾಗತ


Team Udayavani, Jan 5, 2022, 7:21 PM IST

1-asdad

ದಾವಣಗೆರೆ: ಗಡಿ ಭದ್ರತಾ ಪಡೆಯಲ್ಲಿ 27 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ  ಬುಧವಾರ ದಾವಣಗೆರೆಗೆ ಆಗಮಿಸಿದ ನಾಗರಾಜಶೆಟ್ಟಿ ಮತ್ತು ರಾಘವೇಂದ್ರ ಅವರಿಗೆ ಮೇಯರ್ ಎಸ್.ಟಿ. ವೀರೇಶ್ ಒಳಗೊಂಡಂತೆ ಅನೇಕರು ಭವ್ಯ ಸ್ವಾಗತ ಕೋರಿದರು.

ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ವೀರ ಯೋಧರ ಸ್ವಾಗತಕ್ಕಾಗಿ ಅನೇಕರು ನೆರೆದಿದ್ದರು. ಇಬ್ಬರು ಯೋಧರು ಆಗಮಿಸುತ್ತಿದ್ದಂತೆ ನಾಗರಾಜಶೆಟ್ಟಿ, ರಾಘವೇಂದ್ರ ಅವರಿಗೆ ಜಯವಾಗಲಿ, ಭಾರತ್ ಮಾತಾ ಕೀ ಜೈ..ಎಂಬ ಘೋಷಣೆ ಮೊಳಗಿದವು. ದಾವಣಗೆರೆಯ ವೀರಪುತ್ರರಿಗೆ ಹೂಮಾಲೆಯಿಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೇಯರ್ ಎಸ್.ಟಿ. ವೀರೇಶ್, ಕೋಟ್ಯಾಂತರ ಭಾರತೀಯರ ನೆಮ್ಮದಿಯ ಜೀವನಕ್ಕೆ ಕಾರಣವಾಗಿರುವ ವೀರಯೋಧರ ಕರ್ತವ್ಯ ಎನ್ನುವುದು ಅವರ ಮರಣದವರೆಗೂ ಇರುತ್ತದೆ. ಸೈನಿಕರು ತಮ್ಮ ಕುಟುಂಬದಿಂದ ಸಾವಿರಾರು ಕಿಲೋಮೀಟರ್ ದೂರವಿದ್ದು,ವೈಯಕ್ತಿಕ, ಕುಟುಂಬದ ಆಸೆಗಳನ್ನು ಬದಿಗೊತ್ತಿ, ಭಾರತಮಾತೆಯ ರಕ್ಷಣೆಗೋಸ್ಕರ ಗಡಿ ಭಾಗದಲ್ಲಿ ಕಾವಲು ಕಾಯುತ್ತಿರುತ್ತಾರೆ. ಅವರ ಸೇವೆ ಸದಾ ಸ್ಮರಣೀಯ ಎಂದರು.

ನೆರೆಯ ಪಾಪಿ ಪಾಕಿಸ್ತಾನ ಹಾಗೂ ಚೀನಾ ಪದೆ ಪದೇ ಕುತಂತ್ರ ಮಾಡುತ್ತಲೇ ಬರುತ್ತಿವೆ. ನಮ್ಮ ಭಾರತೀಯ ವೀರ ಯೋಧರು ತಕ್ಕ ಉತ್ತರ ನೀಡುತ್ತಾ ಬಂದಿದ್ದಾರೆ. ಅಂತಹ ಯೋಧರನ್ನು ಗೌರವಿಸುತ್ತಿರುವುದು ಹೆಮ್ಮೆಯ ವಿಚಾರ. ಗಡಿ ಭದ್ರತಾ ಪಡೆಯಲ್ಲಿ ೨೭ ವರ್ಷಗಳ ಕಾಲ ಸೇವೆ ಸಲ್ಲಿಸಿ, ನಿವೃತ್ತಿ ನಂತರ ದಾವಣಗೆರೆಗೆ ಆಗಮಿಸಿರುವ ನಾಗರಾಜ ಶೆಟ್ಟಿ, ರಾಘವೇಂದ್ರ ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದು ಆಶಿಸಿದರು.

ಇಬ್ಬರು ಯೋಧರು, ತಮ್ಮೂರಿನ ಜನರು ಕೋರಿದ ಸ್ವಾಗತಕ್ಕೆ ಸಂತಸ ವ್ಯಕ್ತಪಡಿಸಿದರು. ಯುವ ಜನಾಂಗ ಸೇನೆಗೆ ಸೇರುವ ಮೂಲಕ ಭಾರತ ಮಾತೆಯ ಸೇವೆ ಮಾಡಬೇಕು ಎಂದು ತಿಳಿಸಿದರು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸತ್ಯಪ್ರಕಾಶ್, ಮಂಜುನಾಥನಾಯ್ಕ, ನಗರ ಪೊಲೀಸ್ ಉಪಾಽಕ್ಷಕ ನರಸಿಂಹ ತಾಮ್ರಧ್ವಜ್, ಮಂಜುನಾಥ್, ಬಿ.ಎಸ್. ಬಸವರಾಜ್, ಎಂ. ನಾರಾಯಣಸ್ವಾಮಿ, ನಾಗರಾಜ್, ನೀಲಮ್ಮನ ತೋಟದ ಚಾಮುಂಡೇಶ್ವರಿ ಕಬಡ್ಡಿ ಕ್ರೀಡಾ ಸಮಿತಿ, ವಂದೇ ಮಾತರಂ ಕ್ರೀಡಾ ಸಮಿತಿ, ದಾವಣಗೆರೆ ಜಿಲ್ಲಾ ಸರ್ಕಾರಿ ನೌಕರರ ಕಬಡ್ಡಿ ಕ್ರೀಡಾ ಸಮಿತಿ, ಜಿಲ್ಲಾ ಪ್ಯಾರಾ ಮಿಲಿಟರಿ ಯೋಧರ ಸಂಘ, ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಪದಾಧಿಕಾರಿಗಳು, ಇತರೆ ಸಂಘ-ಸಂಸ್ಥೆಗಳ ಕಾರ್‍ಯಕರ್ತರು, ಕುಟುಂಬ ಸದಸ್ಯರು ಇದ್ದರು. ತೆರೆದ ಜೀಪಿನಲ್ಲಿ ಇಬ್ಬರು ಯೋಧರ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ

Davanagere: Basanagowda Yatnal expelled from the party?: What did Vijayendra say?

Davanagere: ಪಕ್ಷದಿಂದ ಯತ್ನಾಳ್‌ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?

prison

Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ

Udayagiri police station attack case: Muthalik sparks controversy

Davanagere: ಉದಯಗಿರಿ ಪೊಲೀಸ್‌ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.