![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2022, 1:36 PM IST
ನವದೆಹಲಿ: ಭಾರತದ ರಾಜಕಾರಣಿಗಳು ಮತ್ತು ಖ್ಯಾತ ಉದ್ಯಮಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲು ಮುಂಬೈ ಸರಣಿ ಸ್ಫೋಟ ರೂವಾರಿ, ಭೂಗತ ಪಾತಕಿ ದಾವೂದ್ ಇಬ್ರಾಹಿ ಹೊಸ ತಂಡವೊಂದನ್ನು ರಚಿಸಿರುವುದಾಗಿ ಎನ್ ಐಎ ಬಯಲು ಮಾಡಿದೆ.
ಇದನ್ನೂ ಓದಿ:ಅಶ್ಲೀಲ ಫೋಟೋ ತೋರಿಸಿ ಹಣಕ್ಕೆ ಬೇಡಿಕೆ : ಮದುವೆಯಾದ ಮಹಿಳೆಯರೇ ಈತನ ಟಾರ್ಗೆಟ್
ದೇಶದಿಂದ ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ವಿಶೇಷ ತಂಡ ಭಾರತದ ವಿವಿಧೆಡೆ ಸ್ಫೋಟಕ ಮತ್ತು ಲೆಥಾಲ್ ಶಸ್ತ್ರಾಸ್ತ್ರ ಬಳಸಿ ಹಿಂಸಾಚಾರ ಭುಗಿಲೇಳುವಂತೆ ಮಾಡುವ ಸಂಚು ರೂಪಿಸಿರುವುದಾಗಿ ವರದಿ ವಿವರಿಸಿದೆ.
ಇದನ್ನು ಹೊರತುಪಡಿಸಿ ದೆಹಲಿ ಮತ್ತು ಮುಂಬಯಿಯ ಮೇಲೆ ದಾವೂದ್ ಇಬ್ರಾಹಿಂ ಹೆಚ್ಚಿನ ಪ್ರಮಾಣದ ದಾಳಿ ನಡೆಸಲು ಸಿದ್ಧತೆ ನಡೆಸಿರುವುದಾಗಿ ಎನ್ ಐಎ ತಿಳಿಸಿರುವುದಾಗಿ ವರದಿ ಹೇಳಿದೆ.
ಭಯೋತ್ಪಾದನಾ ಚಟುವಟಿಕೆಗೆ ಆರ್ಥಿಕ ನೆರವು ನೀಡುವಲ್ಲಿ ಶಾಮೀಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿರುವುದಾಗಿ ವರದಿ ತಿಳಿಸಿದೆ.
ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕಾರ್ ಹಾಗೂ ಆತನ ಸಹಚರರನ್ನು ವಿಚಾರಣೆಗೊಳಪಡಿಸಿದೆ ಎಂದು ವರದಿ ವಿವರಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.