ಮುಂಗಾರು ವಿಳಂಬ – ಚುರುಕುಗೊಳ್ಳದ ಕೃಷಿ ಚಟುವಟಿಕೆ- ಮಳೆಗಾಗಿ ಕಾಯುತ್ತಿರುವ ರೈತರು


Team Udayavani, Jun 18, 2023, 7:44 AM IST

PADDY FARMERS

ಉಡುಪಿ: ಮುಂಗಾರು ಮಳೆ ವಿಳಂಬದಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೃಷಿ ಚಟುವಟಿಕೆಗೆ ಹಿನ್ನಡೆಯಾಗುತ್ತಿದೆ. ಮುಂಗಾರು ಋತುವಿನಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಪ್ರಧಾನವಾಗಿ ಭತ್ತವನ್ನು ಬೆಳೆಯುತ್ತಿದ್ದು, ಈ ಬಾರಿ ರೈತರಲ್ಲಿ ಆತಂಕ ಮನೆ ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ ಸುಮಾರು 38 ಸಾವಿರ ಹೆಕ್ಟೇರ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9,300 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆಯ ಗುರಿಯನ್ನು ಕೃಷಿ ಇಲಾಖೆ ಹೊಂದಿದೆ.
ಸಾಂಪ್ರದಾಯಿಕ ಬಿತ್ತನೆ ಪದ್ಧತಿ ಈಗ ಉಭಯ ಜಿಲ್ಲೆಗಳಲ್ಲೂ ತೀರಾ ಕಡಿಮೆಯಾಗಿದೆ. ರೈತರು ಬೀಜಗಳನ್ನು ತಂದು ಮನೆಯಲ್ಲೇ ಸಣ್ಣದಾಗಿ ನರ್ಸರಿ ರೀತಿಯಲ್ಲಿ ನೇಜಿ ಮಾಡುತ್ತಾರೆ ಅಥವಾ ನರ್ಸರಿಗಳಿಂದ ನೇಜಿ ತಂದು ಯಂತ್ರದ ಮೂಲಕ ನಾಟಿ ಮಾಡುತ್ತಾರೆ. ಗದ್ದೆಯನ್ನು ಹದ ಮಾಡಲೂ ಯಂತ್ರದ ಬಳಕೆಯೇ ಹೆಚ್ಚು.

ಈ ವರ್ಷ ನಿಗದಿತ ಪ್ರಮಾಣದಲ್ಲಿ ಮಳೆ ಆಗದೇ ಇರುವುದರಿಂದ ಇನ್ನೂ ಕೃಷಿ ಚಟುವಟಿಕೆ ಬಿರುಸುಗೊಂಡಿಲ್ಲ. ಸಾಮಾನ್ಯವಾಗಿ ಜೂನ್‌ ಮೊದಲ ವಾರದ ಮಳೆಯ ಆಧಾರದಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸುತ್ತಾರೆ. ಆದರೆ ಈ ಬಾರಿ ಹಾಗಾಗಿಲ್ಲ.

ನೇಜಿ ಮಾಡಲು 20ರಿಂದ 25 ದಿನ ಬೇಕಾಗುತ್ತದೆ. ಬಿತ್ತನೆ ಬೀಜವನ್ನು ತಂದು ನಿರ್ದಿಷ್ಟ ಕ್ರಮದಲ್ಲಿ ಆಧುನಿಕ ವಿಧಾನ ಬಳಸಿ ನೇಜಿ ಮಾಡಲಾಗುತ್ತದೆ. 20ರಿಂದ 22 ದಿನಕ್ಕೆ ಭತ್ತದ ಗಿಡಗಳು ಯಂತ್ರದ ಮೂಲಕ ನಾಟಿ ಮಾಡಲು ಸೂಕ್ತವಾದ ರೀತಿಯಲ್ಲಿ ಬೆಳೆಯುತ್ತವೆ. ನಾಟಿಯ ಬಳಿಕ ನೀರು ಹೆಚ್ಚು ಬೇಕಾಗುತ್ತದೆ. ನೀರು ಕಡಿಮೆಯಾದರೆ ಫ‌ಸಲು ಚೆನ್ನಾಗಿ ಬರುವುದಿಲ್ಲ. ಮಳೆಯೇ ಆಗದಿದ್ದರೆ ಒಣಗುವ ಸಾಧ್ಯತೆಯೂ ಹೆಚ್ಚಿರುತ್ತದೆ. ಹಾಗಾಗಿ ಉತ್ತಮ ಮಳೆಯ ಅನಿವಾರ್ಯ ಎನ್ನುತ್ತಾರೆ ರೈತರಾದ ಸತೀಶ್‌ ಕುಮಾರ್‌ ಶೆಟ್ಟಿ ಯಡ್ತಾಡಿ.

ಆಗಸ್ಟ್‌ 15ರ ವರೆಗೂ ಸಮಯವಿದೆ
ಸದ್ಯ ಮಳೆ ಆಗದೇ ಇದ್ದರೂ ಜುಲೈ ಮೊದಲ ವಾರದ ಅನಂತರದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹೀಗಾಗಿ ರೈತರಿಗೆ ಆಗಸ್ಟ್‌ 15ರ ವರೆಗೂ ಕಾಲಾವಕಾಶ ಇರುತ್ತದೆ. ಆಗಸ್ಟ್‌ ಅನಂತರದಲ್ಲಿ ನಾಟಿ ಕಷ್ಟ. ಫ‌ಸಲು ಬರುವಾಗ ವಿಳಂಬವಾಗುತ್ತದೆ. ಅಲ್ಲದೆ ಫ‌ಸಲು ಬಂದ ಅನಂತರದಲ್ಲಿ ಮಳೆ ಹೆಚ್ಚಾದರೆ ಕೃಷಿಕರಿಗೆ ನಷ್ಟವೂ ಹೆಚ್ಚು. ಹೀಗಾಗಿ ಜುಲೈಯಲ್ಲಿ ಉತ್ತಮ ಮಳೆಯಾದರೆ ಕೃಷಿಕರಿಗೆ ಅನುಕೂಲವಾಗಲಿದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.

ಬಿತ್ತನೆಯಾಗಿಲ್ಲ
ಉಡುಪಿ ಜಿಲ್ಲೆಯಲ್ಲಿ ಈವರೆಗೂ ಕೇವಲ 33 ಹೆಕ್ಟೇರ್‌ಗಳಲ್ಲಿ ಮಾತ್ರ ಬಿತ್ತನೆಯಾಗಿದೆ. ಕಾಪುವಿನಲ್ಲಿ 1, ಬ್ರಹ್ಮಾವರದಲ್ಲಿ 2, ಕುಂದಾಪುರದಲ್ಲಿ 10 ಹಾಗೂ ಬೈಂದೂರಿನಲ್ಲಿ 20 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ದ.ಕ.ದಲ್ಲಿ ಬಿತ್ತನೆ ಇನ್ನೂ ಆರಂಭವಾಗಿಲ್ಲ.

ರೈತರು ಕೃಷಿ ಚಟುವಟಿಕೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ನೇಜಿ ತಯಾರಾಗುತ್ತಿವೆ. ಆದರೆ ಮಳೆ ತೀರಾ ಕಡಿಮೆಯಿದೆ. ಭೂಮಿ ಹದ ಮಾಡಿಕೊಳ್ಳುವಷ್ಟು ಮಳೆ ಆಗುತ್ತಿದೆ. ಆದರೆ ಭತ್ತದ ಪೋಷಣೆಗೆ ಹೆಚ್ಚು ಮಳೆ ಅಗತ್ಯ. ಮಾನ್ಸೂನ್‌ ಈವರೆಗೂ ನಿರೀಕ್ಷಿತ ಪ್ರಮಾಣದಲ್ಲಿ ಬಂದಿಲ್ಲ.
– ಡಾ| ಕೆಂಪೇಗೌಡ, ಸೀತಾ ಎಂ.ಸಿ., ಉಪ ನಿರ್ದೇಶಕರು, ಕೃಷಿ ಇಲಾಖೆ, ದ.ಕ., ಉಡುಪಿ

 ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

dw

Katkeri: ಮಹಿಳೆ ಆತ್ಮಹತ್ಯೆ; ಪ್ರಕರಣ ದಾಖಲು

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

Tumkur University ಕುಲಸಚಿವ, ಇನ್‌ಸ್ಪೆಕ್ಟರ್‌ ವಜಾ ಮಾಡಿ: ಅಶ್ವತ್ಥನಾರಾಯಣ್‌ ಒತ್ತಾಯ

1-eqwewewqe

Ayodhya: ಭಾಗಶಃ ನಿರ್ಮಿಸಿದ ರಾಮ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲು ಸಾಧ್ಯವಿಲ್ಲ!

5

Shambhavi ಹೊಳೆಗೆ ಬಿದ್ದು ಬಾಲಕ ಸಾವು-ನಾಲ್ಕು ಮಂದಿ ಮಕ್ಕಳು ತೆರಳಿದ್ದ ವೇಳೆ ಘಟನೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.