![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jun 25, 2021, 9:31 AM IST
ನವದೆಹಲಿ: ಮೊದಲ ಮುಂಗಾರು ಮಳೆಗಾಗಿ ದೆಹಲಿ, ಪಂಜಾಬ್, ಹರ್ಯಾಣ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ಜುಲೈವರೆಗೆ ಕಾಯಬೇಕಾಗುತ್ತದೆ ಎಂದು ಭಾರತ ಹವಾಮಾನ ಇಲಾಖೆ ಶುಕ್ರವಾರ(ಜೂನ್ 25) ತಿಳಿಸಿದೆ.
ಇದನ್ನೂ ಓದಿ:ದೆಹಲಿಗೆ ಹಾರಿದ ವಿಜಯೇಂದ್ರ: ಯಡಿಯೂರಪ್ಪ ಭೇಟಿಯಾದ ಭೂಪೇಂದ್ರ ಯಾದವ್!
ಇತ್ತೀಚೆಗಿನ ಹವಾಮಾನ ವರದಿ ಪ್ರಕಾರ ಗಾಳಿ ವ್ಯವಸ್ಥೆ ಮುಂದಿನ ಏಳು ದಿನಗಳ ಕಾಲ ಈ ಪ್ರದೇಶಗಳನ್ನು ಆವರಿಸುವ ಸಾಧ್ಯತೆ ಕಡಿಮೆ ಇದ್ದಿರುವುದಾಗಿ ಐಎಂಡಿ ಅಧಿಕಾರಿಗಳು ತಿಳಿಸಿದ್ದಾರೆ. ನೈರುತ್ಯ ಮುಂಗಾರು ಪ್ರಸ್ತುತ ಬಾರ್ಮರ್, ಭಿಲ್ವಾರಾ, ಧೋಲ್ಪುರ್, ಅಲಿಗಢ್, ಮೀರತ್, ಅಂಬಾಲಾ ಮತ್ತು ಅಮೃತ್ ಸರ್ ಹಾದು ಹೋಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಸ್ತುತ ಹವಾಮಾನ ಪರಿಸ್ಥಿತಿ ಪೂರಕವಾಗಿಲ್ಲದ ಕಾರಣ ರಾಜಸ್ಥಾನ್, ಹರ್ಯಾಣ, ಚಂಡೀಗಢ್, ದೆಹಲಿ ಮತ್ತು ಪಂಜಾಬ್ ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮುಂಗಾರು ಮಳೆ ವಿಳಂಬವಾಗಿ ಪ್ರವೇಶಿಸಲಿದೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 30ರ ವಾರಾಂತ್ಯದಲ್ಲಿ ವಾಯುವ್ಯ ಭಾರತದ ಹಲವು ಭಾಗಗಳಲ್ಲಿ ಗುಡುಗು, ಮಿಂಚಿನೊಂದಿಗೆ ಭಾರೀ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಈವರೆಗೆ ಶೇ.28ರಷ್ಟು ಮುಂಗಾರು ಮಳೆ ಸುರಿದಿರುವುದಾಗಿ ಹವಾಮಾನ ಇಲಾಖೆ ವಿವರಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.