ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಡೆಲ್ಲಿಗೆ 5 ವಿಕೆಟ್‌ಗಳ ರೋಚಕ ಗೆಲುವು


Team Udayavani, Oct 17, 2020, 11:56 PM IST

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಡೆಲ್ಲಿಗೆ 5 ವಿಕೆಟ್‌ಗಳ ರೋಚಕ ಗೆಲುವು

ಶಾರ್ಜಾ: ಆರಂಭಿಕ ಶಿಖರ್‌ ಧವನ್‌ ಅವರ ಆಕರ್ಷಕ ಶತಕ (101 ಔಟಾಗದೇ) ಮತ್ತು ಅಂತಿಮ ಓವರಿನಲ್ಲಿ ಅಕ್ಷರ್‌ ಪಟೇಲ್‌ ಸಿಡಿಸಿದ ಮೂರು ಭರ್ಜರಿ ಸಿಕ್ಸರ್‌ನಿಂದಾಗಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಶನಿವಾರದ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿತು.

ಅಂತಿಮ ಓವರಿನಲ್ಲಿ ಡೆಲ್ಲಿ ಗೆಲುವಿಗೆ 17 ರನ್‌ ಬೇಕಿತ್ತು. ರವೀಂದ್ರ ಜಡೇಜ ಎಸೆದ ಈ ಓವರನ್ನು ಆರಂಭದಲ್ಲಿ ಧವನ್‌ ಎದುರಿಸಿದ್ದರು. ಮೊದಲ ಎಸೆತ ವೈಡ್‌ ಆಗಿದ್ದರೆ ಎರಡನೇ ಎಸೆತದಲ್ಲಿ ಧವನ್‌ ಒಂಟಿ ರನ್‌ ತೆಗೆದರು. ಮತ್ತಿನೆರಡು ಎಸೆತಗಳಲ್ಲಿ ಅಕ್ಷರ್‌ ಸಿಕ್ಸರ್‌ ಬಾರಿಸಿ ರೋಮಾಂಚನಗೊಳಿಸಿದರು. ನಾಲ್ಕನೇ ಎಸೆತದಲ್ಲಿ ಎರಡು ರನ್‌ ಬಂದರೆ ಐದನೇ ಎಸೆತದಲ್ಲಿ ಮತ್ತೆ ಸಿಕ್ಸರ್‌ ಬಾರಿಸಿದ ಅಕ್ಷರ್‌ ಡೆಲ್ಲಿಗೆ ಸ್ಮರಣೀಯ ಗೆಲುವು ತಂದುಕೊಟ್ಟರು. ಈ ಗೆಲುವಿನಿಂದ ಡೆಲ್ಲಿ ತಂಡ ಮತ್ತೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಚೆನ್ನೈ ಫಾ ಡು ಪ್ಲೆಸಿಸ್‌ ಅವರ ಅಮೋಘ ಅರ್ಧಶತಕ ಮತ್ತು ಮಧ್ಯಮ ಕ್ರಮಾಂಕದಲ್ಲಿ ರಾಯುಡು, ಜಡೇಜ ಅವರ ಬಿರುಸಿನ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟಿಗೆ 179 ರನ್‌ಗಳ ಸವಾಲಿನ ಮೊತ್ತ ಪೇರಿಸಿ ಸವಾಲೊಡ್ಡಿತು. ಗುರಿ ಬೆನ್ನತ್ತಿದ ಡೆಲ್ಲಿ 19.5 ಓವರ್‌ಗಳಲ್ಲಿ 5 ವಿಕೆಟಿಗೆ 185 ರನ್‌ ಪೇರಿಸಿ ಜಯಭೇರಿ ಬಾರಿಸಿತು.

ಬ್ಯಾಟಿಂಗ್‌ ಆಯ್ದುಕೊಂಡ ಚೆನ್ನೈಗೆ ಉತ್ತಮ ಆರಂಭ ಸಿಗಲಿಲ್ಲ ಕಳೆದ ಪಂದ್ಯದಲ್ಲಿ ಆರಂಭಿಕನಾಗಿ ಭಡ್ತಿ ಹೊಂದಿ ಮಿಂಚಿದ್ದ ಸ್ಯಾಮ್‌ ಕರನ್‌ ಬ್ಯಾಟಿಂಗ್‌ ಅಬ್ಬರ ಈ ಪಂದ್ಯದಲ್ಲಿ ನಡೆಯಲ್ಲಿಲ್ಲ ತಂಡದ ಖಾತೆ ತರೆಯುವ ಮುನ್ನವೇ ಶೂನ್ಯಕ್ಕೆ ಔಟಾಗಿ ನಿರಾಶೆ ಮೂಡಿಸಿದರು. ಆದರೆ ದ್ವಿತೀಯ ವಿಕೆಟಿಗೆ ಆಡಲಿಳಿದ ಫಾ ಡು ಪ್ಲೆಸಿಸ್‌ ಮತ್ತು ವಾಟ್ಸನ್‌ ತಂಡಕ್ಕೆ ಹಿನ್ನೆಡೆಯಾಗದ ರೀತಿಯಲ್ಲಿ ಆಡಲಾರಂಭಿಸಿದರು. ಈ ಜೋಡಿ ಎರಡನೇ ವಿಕೆಟಿಗೆ 87 ರನ್‌ಗಳ ಭರ್ಜರಿ ಜತೆಯಾಟವಾಡಿತು.
ವಾಟ್ಸನ್‌ 28 ಎಸೆತ ಎದುರಿಸಿ ಆರು ಬೌಂಡರಿ ಒಳಗೊಂಡಂತೆ 36 ರನ್‌ ಬಾರಿಸಿದರು. ಶಿಖರ್‌ ಧವನ್‌ ಅವರಿಂದ ಒಂದು ಜೀವದಾನ ಪಡೆದ ಫಾ ಡು ಪ್ಲೆಸಿಸ್‌ ಮತ್ತೆ ಧವನ್‌ ಅವರೀಗೆ ಕ್ಯಾಚ್‌ ನೀಡಿ ಪೆವಿಲಿಯನ್‌ ಸೇರಿಕೊಂಡರು.

ಧೋನಿ ಮತ್ತೆ ವಿಫ‌ಲ
ಕಳೆದೆರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫ‌ಲ್ಯ ಅನುಭವಿಸಿದ ನಾಯಕ ಧೋನಿ ಈ ಪಂದ್ಯದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರಲಿಲ್ಲ. ಅನ್ರಿಚ್‌ ನೋರ್ಜೆ ಈ ವಿಕೆಟ್‌ ಉರುಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ರಾಯುಡು ಮತ್ತು ಜಡೇಜ ಸಿಡಿದು ನಿಂತು ತಂಡದ ಮೊತ್ತವನ್ನು 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು. ಬಿರುಸಿನ ಬ್ಯಾಟಿಂಗ್‌ ನಡೆಸಿದ ಈ ಜೋಡಿ 21 ಎಸೆತಗಳಿಂದ 50 ರನ್‌ ಸೂರಗೈದಿತು. ರಾಯುಡು ಅಜೇಯ 25 ಎಸೆತಗಳಿಂದ 45 ರನ್‌ ಗಳಿಸಿದರೆ ಜಡೇಜ 13 ಎಸೆತಗಳಿಂದ 33 ರನ್‌ ಬಾರಿಸಿ ಅಜೇಯರಾಗಿ ಉಳಿದರು. 18 ಓವರ್‌ ತನಕ ಬೌಲಿಂಗ್‌ ಹಿಡಿತ ಸಾಧಿಸಿದ ಡೆಲ್ಲಿ ಬೌಲರ್‌ಗಳು ಅಂತಿಮ ಎರಡು ಓವರ್‌ನಲ್ಲಿ 32 ರನ್‌ ಬಿಟ್ಟುಕೊಟ್ಟು ಹಳಿ ತಪ್ಪಿದವರಂತೆ ಗೋಚರಿಸಿದರು.

ಸಂಕ್ಷಿಪ್ತ ಸ್ಕೋರ್‌: ಚೆನ್ನೈ 20 ಓವರ್‌ಗಳಲ್ಲಿ 4 ವಿಕೆಟಿಗೆ 179 (ಫಾ ಡು ಪ್ಲೆಸಿಸ್‌ 58, ರಾಯುಡು ಅಜೇಯ 45, ವಾಟ್ಸನ್‌ 36, ಜಡೇಜ ಅಜೇಯ 33, ನೋರ್ಜೆ 44ಕ್ಕೆ 2)

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.