ಪೊಲೀಸರ ನಶೆ ಇಳಿಸಲು ಮುಂದಾದ ಆಯುಕ್ತರು!


Team Udayavani, May 2, 2022, 9:38 AM IST

1police

ಬೆಂಗಳೂರು: ಪೊಲೀಸರು ಆರೋಪಿಗಳು ಮತ್ತು ಕಳ್ಳಕಾಕರ “ನಶೆ’ ಇಳಿಸುವುದು ಸಾಮಾನ್ಯ ಸಂಗತಿ. ಆದರೆ, ಪೊಲೀಸರ ನಶೆ ಇಳಿಸುವ ಕಾರ್ಯಕ್ಕೆ ಇಲಾಖೆ ಮುಂದಾಗಿದೆ.

ನಗರದ ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಕೆಲ ಅಧಿಕಾರಿ-ಸಿಬ್ಬಂದಿ ಮದ್ಯ ಸೇವಿಸಿ ಕರ್ತವ್ಯಕ್ಕೆ ಹಾಜರಾಗುತ್ತಿದಲ್ಲದೆ, ಸಾರ್ವಜನಿಕರು ಮತ್ತು ಹಿರಿಯ ಅಧಿಕಾರಿಗಳ ಜತೆಯೂ ದುರ್ವತನೆ ತೋರುತ್ತಿದ್ದ ಆರೋಪಗಳು ಕೇಳಿ ಬಂದಿದ್ದವು. ಕೆಲವರು ಕೌಟುಂಬಿಕ ಸಮಸ್ಯೆ, ಆರೋಗ್ಯ ಸಮಸ್ಯೆ ಮತ್ತು ಇತರೆ ವೈಯಕ್ತಿಕ ಕಾರಣಗಳು ಹಾಗೂ ಕುಡಿತ ಚಟ ಅಂಟಿಸಿಕೊಂಡವರು ಇದ್ದಾರೆ. ಪ್ರಮುಖವಾಗಿ ಮದ್ಯ ಸೇವಿಸಿ ರಾತ್ರಿ ವೇಳೆ ಠಾಣೆ ಕರ್ತವ್ಯ ಮತ್ತು ಸಂಚಾರ ನಿರ್ವಹಣೆ ಮಾಡಿ, ಸಾರ್ವಜ ನಿಕರ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದರು.

ಈ ಹಿನ್ನೆಲೆ ಯಲ್ಲಿ ನಗರ ಪೊಲೀಸ್‌ ಆಯುಕ್ತರಿಗೆ ಹಲವಾರು ದೂರುಗಳು ಬರುತ್ತಿದ್ದವು. ಈ ಸಂಬಂಧ ಅಂತಹ ಅಧಿಕಾರಿ-ಸಿಬ್ಬಂದಿ ಪತ್ತೆ ಹಚ್ಚಿ “ಕುಡಿತ ಬಿಡಿಸುವ’ ಕೆಲಸವನ್ನು ನಗರ ಪೊಲೀಸ್‌ ಇಲಾಖೆ ಮಾಡುತ್ತಿದೆ.

ಮಂಗಳೂರಿನಲ್ಲಿ ಚಿಕಿತ್ಸೆ

ಮದ್ಯದ ಅಮಲಿನಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿ-ಸಿಬ್ಬಂದಿ ಬಗ್ಗೆ ಮಾಹಿತಿ ಸಂಗ್ರ ಹಿಸಿ ಠಾಣಾಧಿಕಾರಿಗಳು ಅಥವಾ ಎಸಿಪಿ ಹಂತದ ಅಧಿಕಾರಿಗಳು ನಗರ ಪೊಲೀಸ್‌ ಕಚೇರಿಯಲ್ಲಿರುವ ಆಡಳಿತ ವಿಭಾಗದ ಡಿಸಿಪಿಗೆ ಮಾಹಿತಿ ನೀಡಬೇಕು. ಬಳಿಕ ಕನಿಷ್ಠ 8-10 ಮಂದಿಯನ್ನು ಆಯ್ಕೆ ಮಾಡಿ, ಪಿಎಸ್‌ಐ ಅಥವಾ ಎಎಸ್‌ಐ ಹಂತದ ಅಧಿಕಾರಿಯೊಬ್ಬ ಉಸ್ತುವಾರಿಯಲ್ಲಿ ಪೊಲೀಸ್‌ ಇಲಾಖೆ ವಾಹದಲ್ಲಿಯೇ ಮಂಗಳೂರಿನಲ್ಲಿರುವ ಕೆ.ಎಸ್‌.ಹೆಗಡೆ ಚಾರಿಟೆಬಲ್‌ ಆಸ್ಪತ್ರೆಗೆ ಕಳುಹಿಸಲಾಗುತ್ತದೆ. 10 ದಿನಗಳ ಕಾಲ ಕುಡಿತ ಬಿಡಿಸುವ ಕುರಿತು ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಚಿಕಿತ್ಸೆ ಪೂರ್ಣಗೊಂಡ ಬಳಿಕ ವಾಪಸ್‌ ಬರುವ ಅಧಿಕಾರಿ-ಸಿಬ್ಬಂದಿಗೆ ಆಯುಕ್ತರ ಕಚೇರಿಯಲ್ಲಿ ಆಪ್ತಸಮಾಲೋಚಕರ ಮೂಲಕ ಸಮಾಲೋಚನೆ ಮಾಡಲಾಗುತ್ತದೆ. ಬಳಿಕ ಪ್ರಮಾಣ ಪತ್ರ ನೀಡಿ ಕರ್ತವ್ಯಕ್ಕೆ ಹಾಜರಿಗೆ ಸೂಚಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಅಲ್ಲದೆ, ಚಿಕಿತ್ಸೆ ಪಡೆದ ಅಧಿಕಾರಿಗೆ ಪ್ರತಿ ತಿಂಗಳು ಆಪ್ತಸಮಾಲೋಚನೆ ನಿರಂತರವಾಗಿರುತ್ತದೆ. ಈ ವೇಳೆ ಆತನ ಕೌಟುಂಬಿಕ ವಿಚಾರ ಮತ್ತು ವೈಯಕ್ತಿಕ ಹಾಗೂ ಆರೋಗ್ಯದ ಸಮಸ್ಯೆ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಕೌಟುಂಬಿಕ ಸಮಸ್ಯೆಯಾದರೆ ಅವರ ಕುಟುಂಬ ಸದಸ್ಯರನ್ನು ಕರೆದು ಆಪ್ತಸಮಾಲೋಚನೆ ಮಾಡಲಾಗುತ್ತದೆ. ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೆ ಸೂಕ್ತ ಚಿಕಿತ್ಸೆಗೆ ಸಲಹೆ ನೀಡಲಾಗುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

26 ಮಂದಿ ಚಿಕಿತ್ಸೆ: ಒಂದು ತಿಂಗಳಿಂದ ನಗರದ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುವ 26 ಮಂದಿ ಅಧಿಕಾರಿ-ಸಿಬ್ಬಂದಿ ಚಿಕಿತ್ಸೆ ಪಡೆದುಕೊಂಡು, ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೀಗ ಎಂಟು ಮಂದಿ ಯನ್ನು ಮಂಗಳೂರಿಗೆ ಕಳುಹಿಸಲಾಗಿದೆ.

ಆಡಳಿತ ವಿಭಾಗದ ಡಿಸಿಪಿ ನಿಶಾಜೇಮ್ಸ್‌ ನೇತೃತ್ವದಲ್ಲಿ ಈ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ.ಮದ್ಯ ಸೇವಿಸಿ ಕರ್ತವ್ಯ ನಿರ್ವಹಿಸುವ ಅಧಿಕಾರಿ-ಸಿಬ್ಬಂದಿಯ ಸಮಸ್ಯೆ ಅರಿತು ಹಂತ-ಹಂತವಾಗಿ ಸೂಕ್ತ ಚಿಕಿತ್ಸೆ ನೀಡಿ, ಮದ್ಯದ ಚಟದಿಂದ ದೂರ ಮಾಡಲಾಗಿದೆ. ಈ ಮೂಲಕ ಜನಸ್ನೇಹಿ ಪೊಲೀಸ್‌ ಮಾಡುತ್ತಿದ್ದೇವೆ. ಕಮಲ್ಪಂತ್‌, ನಗರ ಪೊಲೀಸ್ಆಯುಕ್ತ

ಮೋಹನ್ಭದ್ರಾವತಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.