![Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!](https://www.udayavani.com/wp-content/uploads/2024/12/Ganj1-415x227.jpg)
ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್
Team Udayavani, Mar 31, 2023, 9:25 PM IST
![suspend](https://www.udayavani.com/wp-content/uploads/2023/03/suspend-3-620x372.jpg)
ವಿಜಯಪುರ : ಚುನಾವಣೆ ಹಿನ್ನೆಲೆಯಲ್ಲಿ ಚಕ್ಪೋಸ್ಟ್ ಕರ್ತವ್ಯಕ್ಕೆ ಹಾಜರಾಗದೇ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ಜಿಲ್ಲೆಯ ಇಬ್ಬರು ಶಿಕ್ಷಕರನ್ನು ಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ವಿ.ಬಿ.ದಾನಮ್ಮನವರ ಶುಕ್ರವಾರ ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.
ಚುನಾವಣೆಯ ಕರ್ತವ್ಯದ ಭಾಗವಾಗಿ ಚಕ್ಪೋಸ್ಟ್ ಕರ್ತವ್ಯಕ್ಕೆ ನಿಯೋಜಿಸಿದ್ದ ಬರಟಗಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯ ಅಣ್ಣಪ್ಪ ಸೌದಿ ಹಾಗೂ ಕಳ್ಳಕವಟಗಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಅಲ್ಲಾಭಕ್ಷ ಇವರು ಕರ್ತವ್ಯಕ್ಕೆ ಹಾಜರಾಗದೇ ಅನಧಿಕೃತ ಗೈರಾಗಿದ್ದಾರೆ.
ಮಾ.23 ರಂದು ಅಣ್ಣಪ್ಪ ಅವರು ಅರ್ಜುಣಗಿ ಚಕ್ಪೋಸ್ಟ್ಗೂ, ಅಲ್ಲಾಭಕ್ಷ ಚಿಕ್ಕಗಲಗಲಿ ಚಕ್ಪೋಸ್ಟ್ ಕರ್ತವ್ಯಕ್ಕೂ ಹಾಜರಾಗಬೇಕಿತ್ತು. ಇವರಿಗಿಂತ ಮೊದಲ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸಿದ ಚಕ್ಪೋಸ್ಟ್ ಸಿಬ್ಬಂದಿ, ಮುಖ್ಯಸ್ಥರು ಮುಂದಿನ ಕರ್ತವ್ಯಕ್ಕೆ ಹಾಜರಾಗುವಂತೆ ಕರೆ ಮಾಡಿದ್ದರು. ಆದರೆ ಈ ಇಬ್ಬರೂ ಕರೆ ಸ್ವೀಕರಿಸಿಲ್ಲ, ಕರ್ತವ್ಯಕ್ಕೂ ಹಾಜರಾಗಿಲ್ಲ.
ಚುನಾವಣಾ ಕರ್ತವ್ಯದಂಥ ಮಹತ್ವದ ಕರ್ತವ್ಯ ನಿರ್ವಹಣೆಯಲ್ಲಿ ಈ ಇಬ್ಬರೂ ಕರ್ತವ್ಯ ಲೋಪ ಎಸಗಿದ್ದರಿಂದ ಇಬ್ಬರಿಗೂ ಮಾ.28 ರಂದು ಕಾರಣ ಕೇಳಿ ನೋಟೀಸ್ ನೀಡಲಾಗಿತ್ತು. ಆದರೆ ಈ ಇಬ್ಬರೂ ನೋಟೀಸ್ಗೂ ಉತ್ತರಿಸದ ಕಾರಣ, ಇಬ್ಬರನ್ನೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ ಮಾ.31 ರಂದು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.
ಇಲಾಖೆ ವಿಚಾರಣೆ ಬಾಕಿ ಇರುವ ಕಾರಣ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡದಂತೆಯೂ ಸಸ್ಪೆಂಡ್ ಆಗಿರುವ ಶಿಕ್ಷಕರಿಗೆ ಸಸ್ಪೆಂಡ್ ಆದೇಶದಲ್ಲಿ ತಾಕೀತು ಮಾಡಲಾಗಿದೆ.
ಟಾಪ್ ನ್ಯೂಸ್
![Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!](https://www.udayavani.com/wp-content/uploads/2024/12/Ganj1-415x227.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![23-](https://www.udayavani.com/wp-content/uploads/2024/12/23--150x90.jpg)
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
![22-](https://www.udayavani.com/wp-content/uploads/2024/12/22--150x90.jpg)
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
![State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ](https://www.udayavani.com/wp-content/uploads/2024/12/dam-150x102.jpg)
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
![Government will not turn a blind eye if public is inconvenienced: CM Siddaramaiah](https://www.udayavani.com/wp-content/uploads/2024/12/sidda-3-150x85.jpg)
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
![sidda](https://www.udayavani.com/wp-content/uploads/2024/12/sidda-2-150x83.jpg)
Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
![6-chitradurga](https://www.udayavani.com/wp-content/uploads/2024/12/6-chitradurga-150x90.jpg)
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
![5](https://www.udayavani.com/wp-content/uploads/2024/12/5-35-150x80.jpg)
Mangaluru: ವೆನ್ಲಾಕ್ನಲ್ಲಿ ದೊರೆಯಲಿದೆ ಕಿಮೋಥೆರಪಿ
![4(1](https://www.udayavani.com/wp-content/uploads/2024/12/41-3-150x80.jpg)
Ullal: ತೊಕ್ಕೊಟ್ಟು ಜಂಕ್ಷನ್ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!
![Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!](https://www.udayavani.com/wp-content/uploads/2024/12/Ganj1-150x82.jpg)
Kasganj: ವಿವಾಹಿತನಿಗೆ ಪೊಲೀಸ್ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!
![3](https://www.udayavani.com/wp-content/uploads/2024/12/3-33-150x80.jpg)
Bantwal: ಬಿ.ಸಿ.ರೋಡ್ನ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.