Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

ಜನವರಿ 18, 19, 21ರಂದು ಮುಂಬೈನಲ್ಲಿ ಕೋಲ್ಡ್‌ ಪ್ಲೇ ರಾಕ್‌ ಬ್ಯಾಂಡ್‌ ಸಂಗೀತ...

Team Udayavani, Oct 26, 2024, 3:43 PM IST

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

ನವದೆಹಲಿ: ಜನಪ್ರಿಯ ಗಾಯಕ ದಿಲ್ಜಿತ್‌ ದೋಸಾಂಜೆಯ “Dilluminati” ಸಂಗೀತ ಕಾರ್ಯಕ್ರಮ ಹಾಗೂ ಖ್ಯಾತ Rock Band ಕೋಲ್ಡ್‌ ಪ್ಲೇ ಮ್ಯೂಸಿಕ್‌ ಕಾರ್ಯಕ್ರಮದ ಟಿಕೆಟ್‌ ಅನ್ನು ಅಕ್ರಮವಾಗಿ ಮತ್ತು ದುಬಾರಿ ಬೆಲೆಗೆ ಮಾರಾಟ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ದೆಹಲಿ, ಮುಂಬೈ, ಜೈಪುರ್‌, ಬೆಂಗಳೂರು ಸೇರಿದಂತೆ ಹಲವೆಡೆ ದಾಳಿ ನಡೆಸಿದೆ.

BookMyShow ಮತ್ತು Zomato ಟಿಕೆಟ್‌ ಹಂಚಿಕೆ ಪಾಲುದಾರರು, ಒಂದೇ ನಿಮಿಷದಲ್ಲಿ ಎರಡೂ ಸಂಗೀತ ಕಾರ್ಯಕ್ರಮಗಳ ಟಿಕೆಟ್‌ ಮಾರಾಟವಾಗಿರುವುದಾಗಿ ತಿಳಿಸಿತ್ತು. ಇದು ಟಿಕೆಟ್‌ ಅನ್ನು ಬ್ಲ್ಯಾಕ್‌ ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಹುನ್ನಾರ ಎಂದು ಸಂಗೀತ ಪ್ರಿಯರು ಆರೋಪಿಸಿದ್ದರು. ಅಷ್ಟೇ ಅಲ್ಲ ನಕಲಿ ಟಿಕೆಟ್‌ ಮಾರಾಟ ಮತ್ತು ದುಬಾರಿ ಬೆಲೆಗೆ ಟಿಕೆಟ್‌ ಮಾರಾಟ ಮಾಡಿದ್ದರ ಬಗ್ಗೆ ಹಲವಾರು ದೂರುಗಳು ಕೆಲವು ರಾಜ್ಯಗಳಲ್ಲಿ ದಾಖಲಾಗಿತ್ತು.

ಬುಕ್‌ ಮೈ ಶೋ ಕೂಡಾ ಹಲವಾರು ಶಂಕಿತರ ವಿರುದ್ಧ ದೂರು ದಾಖಲಿಸಿದೆ. ಅಕ್ರಮ ಹಣ ವರ್ಗಾವಣೆಯ ಅನುಮಾನದ ಮೇಲೆ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿತ್ತು. ಇದರ ಪರಿಣಾಮ ಅಕ್ಟೋಬರ್‌ 25ರಂದು ಐದು ನಗರಗಳ 25 ಕಡೆಗಳಲ್ಲಿ ದಾಳಿ ನಡೆಸಿತ್ತು.

ದಾಳಿಯಲ್ಲಿ ಮೊಬೈಲ್‌ ಫೋನ್‌ ಗಳು, ಲ್ಯಾಪ್‌ ಟಾಪ್ಸ್‌, ಸಿಮ್‌ ಕಾರ್ಡ್ಸ್‌ ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಇನ್ಸ್ಟಾಗ್ರಾಮ್‌, ವಾಟ್ಸಪ್‌ ಮತ್ತು ಟೆಲಿಗ್ರಾಮ್‌ ಬಳಸಿಕೊಂಡು ನಕಲಿ ಟಿಕೆಟ್‌ ಅನ್ನು ಮಾರಾಟ ಮಾಡುತ್ತಿದ್ದರು ಎಂಬ ಅಂಶ ತನಿಖೆಯಲ್ಲಿ ಪತ್ತೆಯಾಗಿದೆ.

ಟಿಕೆಟ್‌ ಗಳ ಅಕ್ರಮ ಮಾರಾಟ, ಈ ಹಗರಣಕ್ಕೆ ಬೆಂಬಲ ನೀಡಿರುವ ಆರ್ಥಿಕ ಜಾಲದ ಪತ್ತೆಯ ಗುರಿಯೊಂದಿಗೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. 2025ರ ಜನವರಿ 18, 19, 21ರಂದು ಮುಂಬೈನಲ್ಲಿ ಕೋಲ್ಡ್‌ ಪ್ಲೇ ರಾಕ್‌ ಬ್ಯಾಂಡ್‌ ಸಂಗೀತ ಕಾರ್ಯಕ್ರಮ ನಡೆಯಲು ವೇದಿಕೆ ಸಿದ್ಧವಾಗಿದೆ.

ಅದೇ ರೀತಿ ಜನಪ್ರಿಯ ಗಾಯಕ ದಿಲ್ಜಿತ್‌ ದೋಸಾಂಜ್‌ ಅವರ ದಿಲ್ಲುಮಿನಾಟಿ ಸಂಗೀತ ಕಾರ್ಯಕ್ರಮದ ಭಾರತ ಪ್ರವಾಸ ಅಕ್ಟೋಬರ್‌ 26ರಂದು ದೆಹಲಿಯಿಂದ ಆರಂಭವಾಗಲಿದೆ. ನಂತರ ನವೆಂಬರ್‌ 2ರಂದು ಜೈಪುರ್‌, ನವೆಂಬರ್‌ 6ರಂದು ಬೆಂಗಳೂರು, ನ.15ರಂದು ಹೈದರಾಬಾದ್‌, ನವೆಂಬರ್‌ 17 ಅಹಮದಾಬಾದ್‌, ನ.22ರಂದು ಲಕ್ನೋ, ಡಿಸೆಂಬರ್‌ 29ರಂದು ಗುವಾಹಟಿಯಲ್ಲಿ ಕಾರ್ಯಕ್ರಮ ನಿಗದಿಯಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold-and-silver

Bangaluru: 1 ಕೆ.ಜಿ. ಬೆಳ್ಳಿಗೆ 3,000 ರೂ. ಇಳಿಕೆ

sensex

Sensex 662, Nifty 218 ಅಂಕ ಕುಸಿತ: 2ನೇ ತ್ರೈಮಾಸಿಕ ಫ‌ಲಿತಾಂಶ ಪರಿಣಾಮ

Ujjivan Small Finance Bank; 233 crore net profit

Ujjivan Small Finance Bank; 233 ಕೋಟಿ ರೂ.ನಿವ್ವಳ ಲಾಭ

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

First Look:ವಂದೇ ಭಾರತ್‌ ಸ್ಲೀಪರ್‌ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!

1-neol

Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್‌ ಟಾಟಾ ನೇಮಕ ಅಸಾಧ್ಯ!

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-aa-teee

Telugu; ಪಾತ್ರದ ಕುರಿತು ಆಕ್ರೋಶ: ನಟನಿಗೆ ಮಹಿಳೆಯಿಂದ ಚಿತ್ರ ಮಂದಿರದಲ್ಲೇ ಹಲ್ಲೆ!!

Anwar M*rder Case: ADGP B.K.Singh started investigation of case 6 years ago

Anwar M*rder Case: 6 ವರ್ಷ ಹಿಂದಿನ ಪ್ರಕರಣದ ತನಿಖೆಗೆ ಇಳಿದ ಎಡಿಜಿಪಿ ಬಿ.ಕೆ.ಸಿಂಗ್

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Movies: ದೀಪಾವಳಿಗೆ ಭರ್ತಿ ಆಗಲಿದೆ ಥಿಯೇಟರ್; ಇಲ್ಲಿದೆ ರಿಲೀಸ್‌ ಆಗಲಿರುವ ಸಿನಿಮಾಗಳ ಪಟ್ಟಿ

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

Shiggaon Bypoll; ಯಾಸೀರ್‌ ಖಾನ್‌-ಖಾದ್ರಿ ನಡುವೆ ವೈಮನಸ್ಸು ಶುರುವಾಗಿದ್ದು ಏಕೆ?

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.