ದೇಗುಲಗಳಿಗೆ ಹಿರಿಯರ ನೇರ ಪ್ರವೇಶ ಸ್ವಾಗತಾರ್ಹ


Team Udayavani, Jun 23, 2023, 5:20 AM IST

temple queue

ರಾಜ್ಯದ ಧರ್ಮಾದಾಯ ದತ್ತಿ ಇಲಾಖೆಯ ಅಧೀನದಲ್ಲಿರುವ “ಎ’ ಮತ್ತು “ಬಿ’ ವರ್ಗಗಳ ವ್ಯಾಪ್ತಿಗೆ ಬರುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟವರು ತಮ್ಮ ವಯಸ್ಸಿನ ದಾಖಲೆಯನ್ನು ತೋರಿಸಿ ನೇರವಾಗಿ ದೇವಾಲಯದ ಒಳಗಡೆ ಪ್ರವೇಶಿಸಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಹಿರಿಯ ನಾಗರಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ರಾಜ್ಯದ ಪ್ರಮುಖ ದೇವಾಲಯಗಳು ಧರ್ಮಾದಾಯ ಇಲಾಖೆಯ ಅಧೀನದಲ್ಲಿದ್ದು ಪ್ರತೀ ವರ್ಷ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಈ ದೇಗುಲಗಳಿಗೆ ಭೇಟಿ ನೀಡಿ ತಮ್ಮ ಹರಕೆ, ಪ್ರಾರ್ಥನೆಗಳನ್ನು ಸಲ್ಲಿಸು ತ್ತಿರುತ್ತಾರೆ. ದೇಗುಲವನ್ನು ಪ್ರವೇಶಿಸಿ, ದೇವರ ದರ್ಶನ ಪಡೆಯಲು ಹಿರಿಯ ನಾಗರಿಕರು ಕೆಲವೊಮ್ಮೆ ಸರದಿ ಸಾಲಿನಲ್ಲಿ ತಾಸುಗಳ ಕಾಲ ನಿಲ್ಲಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ಹಿರಿಯ ನಾಗರಿಕರು ಬಹಳಷ್ಟು ತೊಂದರೆ ಎದುರಿಸಬೇಕಾಗಿ ಬರುತ್ತಿತ್ತು. ಅದರಲ್ಲೂ ಅನಾರೋಗ್ಯ ಪೀಡಿತರಿಗಂತೂ ಸರದಿ ಸಾಲಿನಲ್ಲಿ ನಿಲ್ಲುವುದು ತ್ರಾಸದಾಯಕವಾಗಿ ಪರಿಣಮಿಸುತ್ತಿದೆ. ಈ ಕಾರಣದಿಂದಾಗಿ ಹಿರಿಯ ನಾಗರಿಕರು ಈ ಕ್ಷೇತ್ರಗಳಿಗೆ ಭೇಟಿ ನೀಡಿದರೂ ದೇವಾಲಯದೊಳಗೆ ಪ್ರವೇಶಿಸಿ, ದೇವರ ದರ್ಶನ ಮಾಡಲಾಗದೆ ನಿರಾಶೆಯಿಂದ ಹಿಂದಿ ರುಗುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರು ಮತ್ತು ಉಪಾದಿ ವಂತರ ಒಕ್ಕೂಟದ ನಿಯೋಗ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿ ಹಿರಿಯ ನಾಗರಿಕರಿಗೆ ದೇವರ ದರ್ಶನಕ್ಕೆ ವಿಶೇಷ ವ್ಯವಸ್ಥೆಯನ್ನು ಮಾಡುವಂತೆ ಮನವಿ ಸಲ್ಲಿಸಿತ್ತು. ಇದಕ್ಕೆ ಸ್ಪಂದಿಸಿದ ಸಚಿವರು, ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಇನ್ನು ಮುಂದೆ 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಸರದಿ ಸಾಲಲ್ಲಿ ನಿಲ್ಲದೆ ನೇರವಾಗಿ ದೇವಾಲಯದೊಳಕ್ಕೆ ಪ್ರವೇಶಿಸಬಹುದಾಗಿದೆ. ಹಿರಿಯ ನಾಗರಿಕರ ಪ್ರವೇಶಕ್ಕಾಗಿ ದೇವಾಲಯದಲ್ಲಿ ಸ್ಥಳಾವಕಾಶವಿದ್ದರೆ ಪ್ರತ್ಯೇಕ ಜಾಗವನ್ನು ಗೊತ್ತುಪಡಿಸಬೇಕು. ಮಾತ್ರವಲ್ಲದೆ ದೇವಾಲಯದ ಆವರಣದಲ್ಲಿ ಹಿರಿಯ ನಾಗರಿಕರಿಗಾಗಿಯೇ ಸಹಾಯ ಕೇಂದ್ರವನ್ನು ಸ್ಥಾಪಿಸಿ ಸಿಬಂದಿಯನ್ನು ನಿಯೋಜಿಸಿ ದೇವರ ದರ್ಶನದ ವ್ಯವಸ್ಥೆ ಮಾಡು ವಂತೆಯೂ ಆದೇಶದಲ್ಲಿ ಸೂಚನೆ ನೀಡಲಾಗಿದೆ.

ಈಗಾಗಲೇ ರಾಜ್ಯ ಸರಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಪರಿಣಾಮವಾಗಿ ರಾಜ್ಯದ ಪ್ರಮುಖ ದೇಗುಲಗಳಿಗೆ ಭಕ್ತರ ದಂಡೇ ಹರಿದು ಬರುತ್ತಿದ್ದು ದೇವಾಲಯಗಳ ಆವರಣದಲ್ಲಿ ನೂಕುನುಗ್ಗಲಿನ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇಂಥ ಸಂದರ್ಭದಲ್ಲಿಯೇ ಹಿರಿಯ ನಾಗರಿಕರಿಗೆ ದೇಗುಲವನ್ನು ನೇರವಾಗಿ ಪ್ರವೇಶಿಸಲು ಅವಕಾಶ ಕಲ್ಪಿಸಿ ಕೊಡುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ ನಡೆಯಾಗಿದೆ.

ಮುಜರಾಯಿ ಇಲಾಖೆಗೆ ಸೇರಿದ ಬಹುತೇಕ ದೇವಾಲಯಗಳಲ್ಲಿ ಮೂಲ ಸೌಕರ್ಯಗಳ ಕೊರತೆ, ಒಟ್ಟಾರೆ ವ್ಯವಸ್ಥೆಯಲ್ಲಿ ಲೋಪ ದೋಷ ಗಳು ಭಕ್ತರನ್ನು ಕಾಡುತ್ತಿದ್ದು ಇತ್ತ ಸರಕಾರ ಶೀಘ್ರ ಗಮನಹರಿಸಬೇಕು. ಕಾಲಕಾಲಕ್ಕೆ ದೇವಾಲಯಗಳಲ್ಲಿ ಅಗತ್ಯ ಮೂಲ ಸೌಕರ್ಯಗಳ ಸುಧಾರಣೆ, ಅಭಿವೃದ್ಧಿ ಯೋಜನೆಗಳಿಗೆ ದೇವಾಲಯಗಳ ಆದಾಯ ದಲ್ಲಿಯೇ ಒಂದಿಷ್ಟು ಮೊತ್ತವನ್ನು ವಿನಿಯೋಗಿಸಬೇಕು. ಇದರಿಂದ ಈ ಕ್ಷೇತ್ರಗಳಿಗೆ ಬರುವ ಭಕ್ತರ ಸಂಖ್ಯೆ ಇನ್ನಷ್ಟು ಹೆಚ್ಚುವುದಲ್ಲದೆ ದೇವಾಲಯದ, ಆ ಮೂಲಕ ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ಹರಿದು ಬರಲಿದೆ.

 

ಟಾಪ್ ನ್ಯೂಸ್

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

1-asasa

Lingayat ಪಂಚಮಸಾಲಿ 2A ಹೋರಾಟ: ವಕೀಲರ ಸಮಾವೇಶದಲ್ಲಿ 3 ನಿರ್ಣಯ ಅಂಗೀಕಾರ

mbಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ: ಸಚಿವ ಎಂ.ಬಿ.ಪಾಟೀಲ್‌

Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

PSI Parshuram ಕುಟುಂಬಕ್ಕೆ ಪರಿಹಾರ ಕೊಡಿ: ಛಲವಾದಿ ಆಗ್ರಹ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

Rain: ಸೆ.23 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4

Hiriydaka: ಹೃದಯಾಘಾತದಿಂದ ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

Court-1

Udupi: ಚೆಕ್‌ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Congress: ತುಷ್ಟೀಕರಣದಿಂದ ಮತಾಂಧ ಶಕ್ತಿಗಳಿಗೆ ಶಕ್ತಿ; ಜೋಶಿ ಕಿಡಿ

Nandini

Thirupathi Laddu: ತಿರುಪತಿಗೆ ತೆರಳುವ ನಂದಿನಿ ತುಪ್ಪದ ಟ್ಯಾಂಕರ್‌ಗೆ ಜಿಪಿಎಸ್‌ ಕಣ್ಗಾವಲು!

MP Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Yaduveer Wadiyar: ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.