ಹೇಡಿಗಳು ಎಂದ ಖಾದರ್ : ಯಾರು ಎಂದು ಸದನದಲ್ಲಿ ಪಟ್ಟು ಹಿಡಿದ ಬಿಜೆಪಿ

ಮುಸ್ಲಿಮರಿಗೆ ವ್ಯಾಪಾರಕ್ಕಿಲ್ಲ ಅವಕಾಶ ; ಸದನದಲ್ಲಿ ಕೋಲಾಹಲ

Team Udayavani, Mar 23, 2022, 1:45 PM IST

vidhana-soudha

ವಿಧಾನ ಸೌಧ : ಧಾರ್ಮಿಕ ಕೇಂದ್ರದಲ್ಲಿ ಮುಸ್ಲಿಂ ಧರ್ಮದವರು ವ್ಯಾಪಾರ ಮಾಡದಂತೆ ಆಗ್ರಹಿಸುತ್ತಿರುವ ವಿಚಾರ ಬುಧವಾರ ವಿಧಾನಸಭೆಯಲ್ಲಿ ಚರ್ಚೆಗೆ ಬಂದು ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ಯುದ್ಧಕ್ಕೆ ಕಾರಣವಾಯಿತು.

ಶೂನ್ಯವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿದ ವಿಪಕ್ಷ ಉಪನಾಯಕ ಯು.ಟಿ ಖಾದರ್ , ನಮ್ಮ ರಾಜ್ಯದ ಅಭಿವೃದ್ಧಿ ಆಗಬೇಕಾ್ದಾರೆ ಸಾಮರಸ್ಯ, ಸಹೋದರತೆ ಇರಬೇಕು. ಕೆಲ ಕ್ರೂರ ಮನಸ್ಸುಗಳು ಸಮಸ್ಯೆ ಸೃಷ್ಟಿಸ್ತಿದ್ದಾರೆ. ಬೀದಿ ಬದಿ ವ್ಯಾಪಾರಿಗಳು ಇಂತದ್ದೇ ಧರ್ಮ ಅಂತ ಅಲ್ಲದೆ ಜೀವನ ಸಾಗಿಸುತ್ತಿದ್ದಾರೆ.ಕೆಲವು ಕಡೆ ಧಾರ್ಮಿಕ ಕೇಂದ್ರದಲ್ಲಿ ಕೆಲವರು ಮುಸ್ಲಿಂ ಧರ್ಮದವರು ವ್ಯಾಪಾರ ಮಾಡದಂತೆ ಆಗ್ರಹಿಸುತ್ತಿದ್ದಾರೆ. ಅವರು ಕೆಟ್ಟ ಮನಸ್ಸಿನವರು, ಕ್ರೂರಿಗಳು, ಹೇಡಿಗಳು ಎಂದರು.

ಈ ವೇಳೆ ಬಿಜೆಪಿ ಶಾಸಕರು ಆಕ್ರೋಶ ಹೊರ ಹಾಕಿ ಹೇಡಿಗಳು ಯಾರು ಅಂತ ಹೇಳುವಂತೆ ಪಟ್ಟು ಹಿಡಿದರು. ಹೇಡಿಗಳು ಅಂತ ಯಾರನ್ನ ಕರೀತಿದ್ದಾರೆ ಹೇಳಿ ಎಂದು ಶಾಸಕ ರಘುಪತಿ ಭಟ್, ಹರೀಶ್ ಪೂಂಜಾ ಮತ್ತಿತರರು ಆಗ್ರಹಿಸಿದರು. ಈ ವೇಳೆ ಇಲ್ಲಿ ಯಾವುದೇ ಧರ್ಮದ ಹೆಸರೂ ಪ್ರಸ್ತಾಪ ಮಾಡಿಲ್ಲ ಅಂತ ಖಾದರ್ ಸ್ಪಷ್ಟನೆ ನೀಡಿದರು.

ನಮ್ಮ ಮಠಗಳು, ದೇವಸ್ಥಾನಗಳಲ್ಲಿ ಪ್ರವೇಶಕ್ಕೆ ಅವಕಾಶ ಕೊಡುತ್ತೇವೆ. ಇವರ ಮಸೀದಿಗೆ ಹೋಗುವುದಕ್ಕೆ ಬಿಡ್ತಾರಾ ಎಂದು ರೇಣುಕಾಚಾರ್ಯ ಪ್ರಶ್ನೆ ಮಾಡಿ, ಹೇಡಿ ಅನ್ನೋ ಪದ ವಾಪಸ್ ಪಡೆಯುವಂತೆ ಆಗ್ರಹಿಸಿದರು. ಇಷ್ಟು ವರ್ಷ ಓಟ್ ಬ್ಯಾಂಕ್ ರಾಜಕಾರಣ ಮಾಡಿದ್ದು ನೀವು,
ಏನು ಮಾಡಿದ್ದೀರಿ ನೀವು ಎಂದು ಆಕ್ರೋಶ ಹೊರ ಹಾಕಿದರು.

ತೀವ್ರ ಕೋಲಾಹಲ ಉಂಟಾದಾಗ ಸಚಿವ ಮಾಧುಸ್ವಾಮಿ ಅವರು ಬಿಜೆಪಿ ಶಾಸಕರನ್ನು ಕುರ್ಚಿ ಬಳಿ ಹೋಗಿ ಕೂರಿಸಿದರು. ಸ್ಪೀಕರ್ ಕಾಗೇರಿ ಅವರು , ವಿಪ್ ಸತೀಶ್ ರೆಡ್ಡಿ ಹೋಗಿ ಕೂರಿಸಿ, ನೀವು ವಿಪ್ ಇದ್ದೀರಿ ಎಂದು ಸೂಚಿಸಿದರು.

ಮೋಸ, ಕಳ್ಳತನ ಮಾಡದೆ ಬದುಕುತ್ತಿದ್ದಾರೆ : ಖಾದರ್ ಮನವಿ 

ಬೀದಿಬದಿ ವ್ಯಾಪಾರಿಗಳು ಸ್ವಾಭಿಮಾನದಿಂದ ಕೆಲಸ ಮಾಡುತ್ತಿದ್ದಾರೆ.ಮೋಸ, ಕಳ್ಳತನ ಮಾಡದೆ ಬದುಕುತ್ತಿದ್ದಾರೆ. ಎಲ್ಲಾ ಧರ್ಮದ ಜನ ವ್ಯಾಪಾರ ಮಾತ್ತಿದ್ದಾದ್ದಾರೆ, ಇದು ಓಪನ್ ಮಾರ್ಕೆಟ್. ಇದರ ನಡುವೆ ಕೆಲವರು ವೈಮನಸ್ಸು ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕಿದ್ದಾರೆ.ಹೆಸರು ಹಾಕಿಲ್ಲ ಸಮಸ್ತ ಬಾಂದವರು ಅಂತ ಹಾಕಿದ್ದಾರೆ.ಹೆಸರು ಹಾಕಿದರೆ ಅವರ ಹೆಸರು ಉಲ್ಲೇಖ ಮಾಡಬಹುದು. ಈಗ ಮಾದ್ಯಮದಲ್ಲಿ ಪ್ರಚಾರ ಸಿಗುತ್ತಿದೆ ಎಂದರು.

ನಾವು ಮುಲ್ಕಿಯ ಹಿಂದೂ ಸಹೋದರರನ್ನಅಭಿನಂದಿಸುತ್ತೇನೆ. ಅವರೇ ಹೋಗಿ ಬೆದರಿಸಿ ತೆಗೆಸಿದ್ದಾರೆ. ಬುದ್ದಿವಾದ ಹೇಳಿದ್ದಕ್ಕೆ ಪೊಲೀಸರು ಮಾಡದ ಕೆಲಸ ಹಿಂದೂ ಸಹೋದರರು ಮಾಡುತ್ತಿದ್ದಾರೆ. ನಾವೆಲ್ಲರೂ ಸೇರಿ ಮಟ್ಟ ಹಾಕುವ ಕೆಲಸ ಮಾಡಬೇಕಿದೆ. ಶಿವಮೊಗ್ಗ, ನೆಲಮಂಗಲ, ಕರಾವಳಿ, ಶಿರಸಿಯಲ್ಲಿ ಬಿತ್ತಿ ಪತ್ರ ಹಾಕಿದ್ದಾರೆ. ಅಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಕೆಲಸ ಆಗಬೇಕು. ಕೋಮುವಾದಿಗಳನ್ನು ನಾವು ನೋಡಿ ಆನಂದಿಸಬಾರದು. ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಖಾದರ್ ಮನವಿ ಮನವಿ ಮಾಡಿದರು.

ಮಾಧುಸ್ವಾಮಿ ಉತ್ತರ

ಯಾವ ಸರ್ಕಾರ ಅಥವಾ ಪ್ರೋತ್ಸಾಹ ಇದೆ ಅಂತ ಭಾವಿಸಬಾರದು. ಆಕಸ್ಮಿಕವಾಗಿ ನಡೆದ ಘಟನೆಗೆ ಎಲ್ಲಾ ಜವಾಬ್ದಾರಿ ಮಾಡಬಾರದು.
ಇದು ಕನ್ಪ್ಯೂಸ್ ಅಗಿದೆ. 2012ರಲ್ಲಿ ರೂಲ್ಸ್ ಮಾಡುವಾಗ ಸಂಸ್ಥೆ ಜಮೀನು , ಸಮೀಪದ ಜಮೀನು, ಕಟ್ಟಡ ಅಥವಾ ನಿವೇಶನ ಸೇರಿದಂತೆ ಯಾವುದೇ ಸ್ವತ್ತನ್ನ ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡುವಂತಿಲ್ಲ.2002 ಹಿಂದೂ ಧಾರ್ಮಿಕ ಸಂಸ್ಥೆ, ಧರ್ಮದತ್ತಿ ನಿಯಮದಲ್ಲಿ ರೂಲ್ಸ್ ಮಾಡಿದ್ದಾರೆ. ಯಾವುದೇ ಧರ್ಮದವರಿಗೆ ಗುತ್ತಿಗೆ ಕೊಡುವಂತಿಲ್ಲ ಅಂತಿದೆ. ಈ ನಿಯಮ ನೋಡಿ ಬೋರ್ಡ್ ಹಾಕಿದ್ದಾರೆ ಎಂದು ರಘುಪತಿ ಭಟ್ ಹೇಳುತ್ತಿದ್ದಾರೆ.

ದೇವಸ್ಥಾನ ಆವರಣದ ಒಳಗಡೆ ಇದ್ದರೆ ನೀವು ತಿದ್ದಿಕೊಳ್ಳಬೇಕಿದೆ, ಹೊರಗೆ ಇದ್ದಾರೆ ನಾವು ಕೇಳಲ್ಲ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗಲೇ ಮಾಡಿದ್ದು. ಈಗ ನೀವೇ ಪ್ರಶ್ನೆ ಮಾಡುತ್ತಿದ್ದೀರಾ ಸಿದ್ದರಾಮಯ್ಯ ಅವರೇ. ಬೇರೆ ಆವರಣ, ಪ್ರದೇಶದಲ್ಲಿ ಆದರೆ ಸರ್ಕಾರ ಕ್ರಮ ಕೈಗೊಳ್ಳಲಿದೆ.ಬೇರೆ ಧರ್ಮದವರಿಗೆ ಅವಕಾಶ ಇಲ್ಲ ಅಂತಿದೆ, ಖಾದರ್ ಅವರೇ. ರೇಣುಕಾಚಾರ್ಯ ಅವರು ಸುಳ್ಳು ಸರ್ಟಿಫಿಕೇಟ್ ಕೊಟ್ಟಿದ್ದಾರೆ ಅಂತ ಹೇಳಿದ್ದಾರೆ. ಇದು ಕಡತಕ್ಕೆ ಹೋಗಲಿದೆ. ಅವರು ಈ ಸದನದ ಗೌರವ ಸದಸ್ಯರು. ನೀವೇ ವಿತ್ ಡ್ರಾ ಮಾಡಿ ಅಂತ ಯು.ಟಿ ಖಾದರ್‌ಗೆ ಸೂಚನೆ ನೀಡಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.