Prathima KS: ಭೂ ವಿಜ್ಞಾನ ಇಲಾಖೆ ಪ್ರತಿಮಾ ಹತ್ಯೆ ಪ್ರಕರಣ; ಮಾಜಿ ಕಾರು ಚಾಲಕನ ಬಂಧನ
ರಾತ್ರಿ 8ರ ಸುಮಾರಿಗೆ ಕಾರು ಚಾಲಕ ಸಚಿನ್ ದೊಡ್ಡಸಂದ್ರದಲ್ಲಿರುವ ಮನೆಗೆ ಬಿಟ್ಟು ತೆರಳಿದ್ದರು.
Team Udayavani, Nov 6, 2023, 12:55 PM IST
ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೆ.ಎಸ್.ಪ್ರತಿಮಾ (43ವರ್ಷ) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:V. Ravichandran; ಪ್ರೇಮಲೋಕ-2 ಮಾಡಲು ಮುಂದಾದ ಕ್ರೇಜಿಸ್ಟಾರ್
ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಶಂಕಿತನನ್ನು ವಶಕ್ಕೆ ಪಡೆದಿರುವುದಾಗಿ ಬೆಂಗಳೂರು ಪೊಲೀಸರು ಸೋಮವಾರ (ನವೆಂಬರ್ 06) ಮಾಹಿತಿ ನೀಡಿದ್ದಾರೆ. ಪ್ರತಿಮಾ ಅವರ ಕಾರು ಚಾಲಕನನ್ನು ಸುಮಾರು ಹತ್ತು ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಲಾಗಿತ್ತು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
ಎನ್ ಡಿಟಿವಿಗೆ ತಿಳಿಸಿರುವ ಮೂಲಗಳ ಪ್ರಕಾರ, ಸರ್ಕಾರಿ ಗುತ್ತಿಗೆ ಆಧಾರದ ಮೇಲೆ ಕಳೆದ ಐದು ವರ್ಷಗಳಿಂದ ಈತ ಪ್ರತಿಮಾ ಅವರ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪ್ರತಿಮಾ ಅವರು ದಾಳಿ ನಡೆಸಲು ತೆರಳುತ್ತಿದ್ದ ವ್ಯಕ್ತಿಗಳ ಕುರಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ವಿಷಯ ಗಮನಕ್ಕೆ ಬಂದ ನಂತರ ಕಾರು ಚಾಲಕ ಕಿರಣ್ ಎಂಬಾತನನ್ನು ಕೆಲಸದಿಂದ ವಜಾ ಮಾಡಿದ್ದರು.
ಕೆಲಸದಿಂದ ವಜಾ ಮಾಡಿದ್ದಕ್ಕೆ ಪ್ರತೀಕಾರವಾಗಿ ಪ್ರತಿಮಾ ಅವರನ್ನು ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ಚಾಲಕ ಕಿರಣ್ ತಪ್ಪೊಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ. ಘಟನೆ ನಂತರ ಕಿರಣ್ ಚಾಮರಾಜನಗರಕ್ಕೆ ಪರಾರಿಯಾಗಿದ್ದ ಎಂದು ವರದಿ ಹೇಳಿದೆ.
ಪ್ರತಿಮಾ ಅವರು ಶನಿವಾರ ರಾತ್ರಿ 8ರ ಸುಮಾರಿಗೆ ಕಾರು ಚಾಲಕ ಸಚಿನ್ ದೊಡ್ಡಸಂದ್ರದಲ್ಲಿರುವ ಮನೆಗೆ ಬಿಟ್ಟು ತೆರಳಿದ್ದರು. ಪ್ರತಿಮಾ ಅವರು ಮನೆ ಬಾಗಿಲು ತೆರೆದು ಒಳ ಹೋಗುತ್ತಿದ್ದಂತೆಯೇ ಹಿಂದಿನಿಂದ ದಾಳಿ ನಡೆಸಿ ಉಸಿರುಗಟ್ಟಿಸಿ, ನಂತರ ಮಾರಕಾಸ್ತ್ರದಿಂದ ಕತ್ತು ಸೀಳಿ ಕೊಲೆಗೈಯಲಾಗಿತ್ತು.
ಅಂದು ರಾತ್ರಿ ಪ್ರತಿಮಾ ಅವರ ಸಹೋದರ ಪ್ರತೀಶ್ ಹತ್ತಾರು ಬಾರಿ ಮೊಬೈಲ್ ಗೆ ಕರೆ ಮಾಡಿದ್ದರು. ಆದರೆ ಆಕೆ ಕರೆ ಸ್ವೀಕರಿಸಿರಲಿಲ್ಲವಾಗಿತ್ತು. ರವಿವಾರ ಬೆಳಗ್ಗೆ ಮತ್ತೆ ಕರೆ ಮಾಡಿದಾಗಲೂ ಪ್ರತಿಕ್ರಿಯೆ ಬಂದಿಲ್ಲವಾಗಿತ್ತು. ಇದರಿಂದ ಆತಂಕಗೊಂಡ ಪ್ರತೀಶ್ ಸಹೋದರಿಯ ಮನೆಗೆ ಬಂದಿದ್ದು, ಮನೆ ಬಾಗಿಲು ತೆರೆದಿರುವುದನ್ನು ಕಂಡು ಗಾಬರಿಯಾಗಿ ಒಳ ಹೋಗಿ ನೋಡಿದಾಗ ಬೆಡ್ ರೂಂನಲ್ಲಿ ಪ್ರತಿಮಾ ರಕ್ತದ ಮಡುವಿನಲ್ಲಿ ಬಿದ್ದಿದ್ದು ಕಂಡು ಬಂದಿತ್ತು. ನಂತರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.
ಪ್ರತಿಮಾ ಅವರು ಮೂರು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಪ್ರತಿಮಾ ಅವರ ಪತಿ ರಾಮಣ್ಣ ಕೃಷಿಕರಾಗಿದ್ದು, ಮಗ ಪಟ್ಟಣದ ಸಹ್ಯಾದ್ರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಇತ್ತೀಚೆಗಷ್ಟೇ ಇಂದಾವರದ ತುಂಗಾ ಕಾಲೇಜಿನ ಸಮೀಪ ಪ್ರತಿಮಾ ಅವರು ನೂತನವಾಗಿ ನಿರ್ಮಿಸಿದ್ದ ಮನೆ ಗೃಹಪ್ರವೇಶ ನೆರವೇರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.