![Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್](https://www.udayavani.com/wp-content/uploads/2024/12/ashok-a-415x248.jpg)
ದೆಹಲಿ ಅಬಕಾರಿ ನೀತಿ ಪ್ರಕರಣ: ಮಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ಇ.ಡಿ. ದಾಳಿ
ಅಬಕಾರಿ ನೀತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿತ್ತು
Team Udayavani, Sep 16, 2022, 10:13 AM IST
![ದೆಹಲಿ ಅಬಕಾರಿ ನೀತಿ ಪ್ರಕರಣ: ಮಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ಇ.ಡಿ. ದಾಳಿ](https://www.udayavani.com/wp-content/uploads/2022/09/ED-11-620x402.jpg)
ನವದೆಹಲಿ:ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ (ಸೆಪ್ಟೆಂಬರ್ 16) ಮಂಗಳೂರು, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ಸೇರಿದಂತೆ ದೇಶದ 40 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮಳೆಯಲಿ ಡಾಲಿ ಜೊತೆಯಲಿ: ಮಾನ್ಸೂನ್ ನಲ್ಲಿ ಧನಂಜಯ್ ಕನಸು
ಸೆಪ್ಟೆಂಬರ್ 6ರಂದು ಜಾರಿ ನಿರ್ದೇಶನಾಲಯ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸೇರಿದಂತೆ 35 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿತ್ತು. ದೆಹಲಿಯಲ್ಲಿ ಆಪ್ ಸರ್ಕಾರ ಜಾರಿಗೊಳಿಸಿದ ನೂತನ ಮದ್ಯ ನೀತಿಯ ಕರಡು ತಯಾರಿಕೆಯಲ್ಲಿ ಭಾಗಿಯಾದ ತಯಾರಕರು ಮತ್ತು ಮದ್ಯ ವ್ಯಾಪಾರದಲ್ಲಿ ತೊಡಗಿರುವವರ ಕಚೇರಿ, ಶಾಪ್ ಗಳ ಮೇಲೆ ದಾಳಿ ನಡೆದಿತ್ತು.
2021ರ ನವೆಂಬರ್ ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ನೂತನ ದೆಹಲಿ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ನೂತನ ಅಬಕಾರಿ ನೀತಿಯಲ್ಲಿ ಹಗರಣ ನಡೆದಿದೆ ಎಂಬ ಆರೋಪದಲ್ಲಿ ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿತ್ತು. ವಿವಾದಕ್ಕೆಡೆ ಮಾಡಿಕೊಟ್ಟ ನಂತರ ಆಪ್ ಸರ್ಕಾರ ನೂತನ ಅಬಕಾರಿ ನೀತಿಯನ್ನು ಹಿಂಪಡೆದಿತ್ತು.
ಮದ್ಯ ನೀತಿ ಪ್ರಕರಣದ ಕುರಿತು ಸಿಬಿಐ ದಾಖಲಿಸಿದ ಎಫ್ ಐಆರ್ ಆಧಾರದ ಮೇಲೆ ಇ.ಡಿ ತನಿಖೆ ನಡೆಸಲು ಆರಂಭಿಸಿತ್ತು. ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಕೆಲವು ಅಧಿಕಾರಿಗಳ ಮೇಲೆ ಎಫ್ ಐಆರ್ ದಾಖಲಿಸಿತ್ತು.
ಟಾಪ್ ನ್ಯೂಸ್
![Cancer ಔಷಧವನ್ನೇ ಡ್ರಗ್ ಆಗಿ ಬಳಸುವ ಯುವಕರು: ಅಶೋಕ್](https://www.udayavani.com/wp-content/uploads/2024/12/ashok-a-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ](https://www.udayavani.com/wp-content/uploads/2024/12/pushpa-2-5-150x94.jpg)
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು](https://www.udayavani.com/wp-content/uploads/2024/12/boat-2-150x83.jpg)
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
![Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು](https://www.udayavani.com/wp-content/uploads/2024/12/khalid-150x103.jpg)
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.