ಉಚಿತ ಬಸ್‌ ಪ್ರಯಾಣ ಕೊಡುಗೆಯ ಪರಿಣಾಮ: ಪ್ರವಾಸಿ ಕೇಂದ್ರಗಳಲ್ಲಿ ವ್ಯಾಪಾರ ಹೆಚ್ಚಳ ನಿರೀಕ್ಷೆ


Team Udayavani, Jun 30, 2023, 8:00 AM IST

FREE BUS KSRTC

ಕಾರ್ಕಳ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಹಿನ್ನೆಲೆಯಲ್ಲಿ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು ಮಹಿಳೆಯರ ದಂಡೇ ಹರಿದು ಬರುತ್ತಿದೆ. ಇದರಿಂದಾಗಿ ಪ್ರವಾಸಿ ಕೇಂದ್ರಗಳ ಪರಿಸರದಲ್ಲಿ ವ್ಯಾಪಾರ ವಹಿವಾಟು ಹೆಚ್ಚಿ ಪ್ರವಾಸೋದ್ಯಮ ಕ್ಷೇತ್ರಕ್ಕೂ ಆದಾಯ ಹೆಚ್ಚಾಗುವ ನಿರೀಕ್ಷೆ ಇದೆ.

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿಯ ಶ್ರೀಕೃಷ್ಣ ದೇವಸ್ಥಾನ, ಶೃಂಗೇರಿ, ಹೊರನಾಡು ಮುಂತಾದ ಕಡೆಗಳಿಗೆ ಸಾಗರೋಪಾದಿಯಲ್ಲಿ ಜನರು ಕಂಡುಬರುತ್ತಿದ್ದಾರೆ. ಹಂಪಿ, ಮೈಸೂರು, ಬೇಲೂರು, ಹಾಸನ ಮೊದಲಾದ ಪ್ರೇಕ್ಷಣೀಯ ಸ್ಥಳಗಳಿಗೂ ಭೇಟಿ ನೀಡುತ್ತಿದ್ದಾರೆ. ಹೆಚ್ಚಿನ ಯಾತ್ರಿಕರ ಆಗಮನದಿಂದ ಉಭಯ ಜಿಲ್ಲೆಗಳ ಧಾರ್ಮಿಕ ತಾಣಗಳ ಪರಿಸರದಲ್ಲಿ ವ್ಯಾಪಾರ ಚಟುವಟಿಕೆ ಚುರುಕಾಗಿದೆ. ಪ್ರವಾಸಿಗರು ದೇಗುಲದ ಪರಿಸರದ ಅಂಗಡಿಗಳಲ್ಲಿ, ಬಸ್‌ ನಿಲ್ದಾಣಗಳಲ್ಲಿ ಸಣ್ಣಪುಟ್ಟ ವ್ಯಾಪಾರ ನಡೆಸುತ್ತಾರೆ. ದೇವರ ದರ್ಶನಕ್ಕೆ ತೆರಳುವಾಗ ಹರಕೆ ಅರ್ಪಣೆಗೆ ಕಾಣಿಕೆ ರೂಪದ ಸೊತ್ತು, ಪೂಜಾ ಸಾಮಗ್ರಿ ಖರೀದಿಸುತ್ತಿದ್ದಾರೆ.

ಜತೆಗೆ ದೇವರ ಫೋಟೋ, ಸಂಬಾರ ಪದಾರ್ಥ (ಕಾಳುಮೆಣಸು ಇತ್ಯಾದಿ) ಮಣಿಸರಕು, ತೋರಣ, ಪ್ರಸಾದ, ಖರ್ಜೂರ, ಕಲ್ಲುಸಕ್ಕರೆ, ಮಂಡಕ್ಕಿ, ಕೊಬ್ಬರಿ ಎಣ್ಣೆ ಹೀಗೆ ದೇವಸ್ಥಾನ ಬದಿಯ ಅಂಗಡಿಗಳಿಂದ ಖರೀದಿಸಿ ಕೊಂಡೊಯ್ಯುತ್ತಾರೆ.

ಸ್ನೇಹಿತರು, ಅಕ್ಕಪಕ್ಕದ ಮನೆಯವರ ಜತೆಗೂಡಿ ತಂಡವಾಗಿ ಆಗಮಿಸುವ ಮಹಿಳಾ ಭಕ್ತರು ದೇವಸ್ಥಾನಗಳಲ್ಲಿ ಅನ್ನಪ್ರಸಾದ ಸ್ವೀಕರಿಸಿ, ಚಹಾ, ಉಪಾಹಾರಕ್ಕಾಗಿ ಪರಿಸರದ ಹೊಟೇಲು, ಮಿನಿ ಕ್ಯಾಂಟೀನ್‌, ಬೀದಿ ಬದಿಯ ಗೂಡಂಗಡಿಗಳನ್ನು ಆಶ್ರಯಿಸುತ್ತಾರೆ. ಸಣ್ಣಪುಟ್ಟ ವ್ಯಾಪಾರದಿಂದ ಹಿಡಿದು ದೊಡ್ಡ ಪ್ರಮಾಣದ ವರೆಗೆ ವ್ಯಾಪಾರದ ವರೆಗೂ ನಾನಾ ಹಂತದಲ್ಲಿ ವ್ಯಾಪಾರ ವೃದ್ಧಿಗೆ ಇದು ಅನುಕೂಲ ಮಾಡಿಕೊಡುತ್ತಿದೆ.

ವಸತಿಗೃಹಗಳೂ ಭರ್ತಿ
ದೂರದೂರುಗಳಿಂದ ಆಗಮಿಸುವ ಮಹಿಳಾ ಭಕ್ತರು ದೇವಸ್ಥಾನಗಳ ವಸತಿಗೃಹಗಳಲ್ಲಿ ವಾಸ್ತವ್ಯ ಹೂಡುತ್ತಾರೆ. ಛತ್ರ, ವಸತಿಗೃಹಗಳು ಭರ್ತಿಯಾಗುತ್ತಿವೆ. ವಸತಿಗೃಹ ಬುಕ್ಕಿಂಗ್‌, ಪ್ರವಾಸಿ ತಾಣಗಳಿಗೆ ಟಿಕೆಟ್‌ ಬುಕ್ಕಿಂಗ್‌ ಇತ್ಯಾದಿ ಕಾರಣಗಳಿಂದ ಪ್ರವಾಸೋದ್ಯಮ ನಿಟ್ಟಿನಲ್ಲೂ ಹೆಚ್ಚು ಆದಾಯ ಲಭಿಸಲಾರಂಭಿಸಿದೆ. ಮುಂದಿನ ದಿನಗಳಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿದರೆ ಮತ್ತಷ್ಟು ದಟ್ಟಣೆ ಆಗುವ ನಿರೀಕ್ಷೆಗಳಿವೆ.

ಮೊದಲೆಲ್ಲ ಮಹಿಳೆಯರು ಅಂಗಡಿಗೆ ಖರೀದಿಗೆ ಬರುತ್ತಿದ್ದರೂ ದೊಡ್ಡ ಸಂಖ್ಯೆಯಲ್ಲಿ ಬರುತ್ತಿರಲಿಲ್ಲ. ಈಗ ಉಚಿತ ಬಸ್‌ ಸೌಲಭ್ಯದ ಬಳಿಕ ಖರೀದಿಗೆ ಬರುವವರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚು. ದೊಡ್ಡ ಬೆಲೆಯ ಸಾಮಗ್ರಿಗಳನ್ನು ಅವರು ಖರೀದಿಸುವುದಿಲ್ಲ. ಅವರದು ಸಣ್ಣ ಪುಟ್ಟ ಖರೀದಿಯೇ ಆಗಿದ್ದರೂ ಒಟ್ಟಾರೆ ವ್ಯವಹಾರದಲ್ಲಿ ಹೆಚ್ಚಳವಾಗಿದೆ.
– ದಿನೇಶ್‌ ಕೆ., ವ್ಯಾಪಾರಿ ಕುಕ್ಕೆ ಸುಬ್ರಹ್ಮಣ್ಯ

 ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

1-asdsad

Tirupati laddu ಅಪವಿತ್ರ: ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಜಗನ್ ರೆಡ್ಡಿ

Thirupathi-Laddu

Tirupati Laddu Row: ತಿರುಪತಿ ಶ್ರೀವಾರಿ ಲಡ್ಡು ಈಗ ಪರಿಶುದ್ಧ: ದೇವಸ್ಥಾನ ಸಮಿತಿ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupati: ಲಡ್ಡು ಪ್ರಸಾದ ಪ್ರಮಾದ!

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

Election: ಏಕಕಾಲದ ಚುನಾವಣೆ: ದಿಟ್ಟ ಸುಧಾರಣ ಹೆಜ್ಜೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

Bollywood: ಪಾಕ್‌ ನಟ ಫವಾದ್‌ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್‌ ಕಂಬ್ಯಾಕ್

1-aap

Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ

12

Manipal: ಪಾರ್ಕಿಂಗ್‌ ತಾಣವಾಗುತ್ತಿರುವ ಬಸ್‌ ನಿಲ್ದಾಣಗಳು!

11(1)

Hiriydaka: ಹಳೆ ಕಟ್ಟಡಗಳ ತೆರವಿಗೆ ದಿನ ನಿಗದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.